Home Archive by category Fresh News (Page 27)

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸಭೆ

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆ ಗೆ ಪುಷ್ಪಾರ್ಚನೆ ಗೈದು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಳ ರವರು

ಉಡುಪಿ: ಕನ್ನಡ ನಾಮಫಲಕ ಜನ ಜಾಗೃತಿ ಆಂದೋಲನ :ಕರವೇ ಕಾರ್ಯಕರ್ತರಿಂದ ನಗರಸಭೆಗೆ ಮುತ್ತಿಗೆ ಯತ್ನ

ಉಡುಪಿ: ಕರವೇ ವತಿಯಿಂದ ಕನ್ನಡ ನಾಮಫಲಕ ಜನ ಜಾಗೃತಿ ಆಂದೋಲನ ಉಡುಪಿಯಲ್ಲಿ ನಡೆಯಿತು. ಕರವೇ ಕಾರ್ಯಕರ್ತರು ಕರಪತ್ರ ಹಂಚುತ್ತಾ ಕರಾವಳಿ ಬೈಪಾಸ್‌ ಬನ್ನಂಜೆ ಮಾರ್ಗವಾಗಿ ಸಿಟಿ ಬಸ್ ಸ್ಟಾಂಡ್, ಸರ್ವಿಸ್ ಬಸ್ ಸ್ಟ್ಯಾಂಡ್ ಮೂಲಕ ಜೋಡುಕಟ್ಟೆ ಮಾರ್ಗವಾಗಿ ನಗರಸಭೆಗೆ ತೆರಳಿದರು. ನಗರಸಭೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಹೆಗಡೆ, ಕರ್ನಾಟಕ ರಕ್ಷಣಾ

ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ-ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಪುತ್ತೂರು: ರಾಜ್ಯಾದ್ಯಂತ ನಡೆದ ಹಿಂದೂ ವಿರೋಧಿ ಕೃತ್ಯವನ್ನು ವಿರೋಧಿಸಿ ಪುತ್ತೂರಿನಲ್ಲಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು. ದರ್ಬೆ ವೃತ್ತದ ಬಳಿ ಜಮಾವಣೆಗೊಂಡ ಸಮಿತಿ ಕಾರ್ಯಕರ್ತರು ದರ್ಬೆ ವೃತ್ತದ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸರು ಮುಂದಾದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ

ಅಪಘಾತಗೊಂಡ ಯುವಕ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ ಪ್ರಸಾದ್(27) ಮೃತಪಟ್ಟ ಯುವಕ. ನಗರದ ಬೈಪಾಸ್‌ನಲ್ಲಿರುವ ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ

ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಬಿಜೆಪಿಗೆ

ಕಲ್ಕತ್ತಾ ಹೈಕೋರ್ಟಿನ ನ್ಯಾಯಮೂರ್ತಿ ಗಂಗೋಪಾಧ್ಯಾಯರು ನ್ಯಾಯಾಲಯ ಬಿಟ್ಟು, ಬಿಜೆಪಿಯ ರಾಜಕೀಯ ಮಾಡಲು ಹೊರಟಿದ್ದಾರೆ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿ ಇದೆ ಎಂದರೆ ಅದು ಪೂರ್ಣ ಸುಳ್ಳಲ್ಲ.ಭಾರತದ ಪ್ರಜಾಪ್ರಭುತ್ವ ಹಲವು ಅಪಾಯಗಳಿಂದ ಪಾರಾಗಿ ಬಂದಿದೆ. ಆದರೆ ಪ್ರಜಾಪ್ರಭುತ್ವದ ಹೆಸರಲ್ಲೇ ನಿರಂಕುಶ ಅಧಿಕಾರದ ಅಮಲು ಈಗ ಸ್ಪಷ್ಟವಾಗಿದೆ. ಅದಾನಿ, ಅಂಬಾನಿ ಮಂದಿ ಪ್ರಧಾನಿ ಕಚೇರಿಯಲ್ಲಿ ಧಾರಾಳವಾಗಿ ಸಿಗುತ್ತಾರೆ. ಜಾರಿ ನಿರ್ದೇಶನಾಲಯ ಪ್ರತಿಪಕ್ಷಗಳನ್ನು ಮಾತ್ರ

ತಮಿಳುನಾಡು ಸೇರದ ಜಯಲಲಿತಾ ಚಿನ್ನಾಭರಣ

ಕರ್ನಾಟಕದ ವಶ ಇರುವ ದಿವಂಗತ ಜಯಲಲಿತಾರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಒಪ್ಪಿಸುವುದಕ್ಕೆ ಹೈಕೋರ್ಟ್ ಮಧ್ಯಾವಧಿ ತಡೆ ನೀಡಿತು. ಇವುಗಳಲ್ಲಿ ಹೆಚ್ಚಿನ ಆಭರಣಗಳು ನನ್ನ ಅಜ್ಜಿ ನಟಿ ಸಂಧ್ಯಾರಿಗೆ ಸೇರಿದ್ದು ಎಂದು ಜಯಲಲಿತಾರ ಸಹೋದರನ ಮಗಳು ಜೆ. ದೀಪಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರು ಚಿನ್ನಾಭರಣ ಹಸ್ತಾಂತರಕ್ಕೆ ತಾತ್ಕಾಲಿಕ ತಡೆ ನೀಡಿದರು.

ಮಂಗಳೂರು: ನಿಪ್ಪಾನ್  ಫೈಂಟರ್ಸ್  ಮೀಟ್ ಕಾರ್ಯಕ್ರಮ

ಏಷ್ಯಾದ ನಂಬರ್ ವನ್ ಫೈಂಟ್ ಆಗಿರುವ ನಿಪ್ಪಾನ್ ಫೈಂಟ್ಸ್‌ನ ಫೈಂಟರ್‍ಸ್ ಮೀಟ್ ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆಯಿತು. ನಿಪ್ಪಾನ್ ಪೇಂಟ್.. ಪೇಂಟ್ ಉದ್ಯಮದಲ್ಲಿ143 ವರ್ಷಗಳ ಅನುಭವವನ್ನು ಹೊಂದಿದೆ. ಏಷ್ಯಾದಲ್ಲಿಯೇ ನಂಬರ್ ವನ್ ಪೇಂಟ್ ತಯಾರಕ ಮತ್ತು ವಿಶ್ವದ ಪ್ರಮುಖ ಪೇಂಟ್ ತಯಾರಕರಲ್ಲಿ ಮುಂಚೂಣಿಯಲ್ಲಿದೆ. ಇದೀಗ ಮಂಗಳೂರಿನಲ್ಲಿ ಫೈಂಟರ್‍ಸ್ ಮೀಟ್ ನಡೆಯಿತು. ಈ ಸಂದರ್ಭದಲ್ಲಿ ನಿಪ್ಪಾನ್ ಪೇಂಟ್‌ನ ಬಿಸ್‌ನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ ಪ್ರಥಮ್

ಕಾಸರಗೋಡಿನಲ್ಲಿ ಬಿಸಿಯೇರುತ್ತಿರುವ ಲೋಕ ಸಭಾ ಚುನಾವಣಾ ಕಣ : ಪ್ರಚಾರದಲ್ಲಿ ಸಿಪಿಐ(ಎಂ) ಅಭ್ಯರ್ಥಿ ಮೇಲುಗೈ

ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಹಿಂದೆಯೇ ಪ್ರಚರಣಾ ರಂಗಕ್ಕಿಳಿದ ಸಿಪಿಎಂ ಅಭ್ಯರ್ಥಿ ಯ ಬೆನ್ನಲ್ಲೇ ಇದೀಗ ಬಿಜೆಪಿ ಯ ಮಹಿಳಾ ಅಭ್ಯರ್ಥಿ ಎಂ ಎಲ್ ಅಶ್ವಿನಿಯ ಅನಿರೀಕ್ಷಿತ ಎಂಟ್ರಿ.ಅಭ್ಯರ್ಥಿ ಯಾರೆಂದು ಈ ತನಕ ಘೋಷಣೆ ಆಗದಿದ್ದರೂ ಯು ಡಿ ಎಫ್ ಅಭ್ಯರ್ಥಿ ನಾನೇ ಎಂಬ ಸ್ವಯಂ ಘೋಷಣೆಯೊಂದಿಗೆ ಸದ್ರಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕೂಡಾ ಪ್ರಮುಖರನ್ನು ಬೇಟಿಯಾಗಿ ಪ್ರಚರಣಾ ರಂಗಕ್ಕಿಳಿದಿದ್ದಾರೆ. ಅಭ್ಯರ್ಥಿ ಯಾರೆಂದು ಘೋಷಣೆಯಾಗದ

ಮಂಜೇಶ್ವರ : ರಾಗಂ ಜಂಕ್ಷನ್‌ನಲ್ಲಿ ಮುಷ್ಕರ

ಮಂಜೇಶ್ವರದ ರಾಗಂ ಜಂಕ್ಷನಿನಲ್ಲಿ ರಾ.ಹೆದ್ದಾರಿ ದಾಟಲು ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಮಾಡು ಇಲ್ಲವೇ ಮಡಿ ಎಂಬ ಧ್ಯೇಯದಲ್ಲಿ ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವ ಭಿತ್ತಿ ಪತ್ರ ಎಲ್ಲೆಡೆ ರಾರಾಜಿಸುತ್ತಿರುವುದು ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ. ಹೆದ್ದಾರಿ ದಾಟಲು ಯಾವುದಾದರೂ ಪರ್ಯಾಯ ವ್ಯವಸ್ಥೆ

ವ್ಯಾಪ್ತಿ ಮೀರಿದ ಮೀನುಗಾರಿಕೆ ಜಗಳ, ತಕರಾರು || V4NEWS

ಇತ್ತೀಚೆಗೆ ಮಲ್ಪೆ ಮೀನುಗಾರಿಕಾ ಬಂದರಿನಿಂದ ಹೋದ ಬೋಟನ್ನು ಮೀನು ಸಹಿತ ಭಟ್ಕಳದ ಮೀನುಗಾರರು ವಶಪಡಿಸಿಕೊಂಡ ಪ್ರಕರಣ ನಡೆದಿದೆ. ಅದು ಪೆÇೀಲೀಸು ಠಾಣೆ ಹತ್ತಿದೆ. ಕಳೆದ ತಿಂಗಳು ಗೋವಾ ಕರಾವಳಿಯಲ್ಲಿ ಎರಡು ಬಾರಿ ಕನ್ನಡ ಕಡಲ ಮೀನು ಬೋಟುಗಳನ್ನು ಅಲ್ಲಿನವರು ದರೋಡೆ ಮಾಡಿದರು ಎಂಬ ದೂರು ದಾಖಲಾಗಿತ್ತು. ಕಡಲ್ಗಳ್ಳರು ಎನ್ನುವುದು ಸಮುದ್ರ ಇತಿಹಾಸದ ಒಂದು ಭಾಗ. ಪೈರೇಟ್ಸ್‍ಗಳ ನಾನಾ ಸಿನಿಮಾ, ಕಾದಂಬರಿ, ಪುಸ್ತಕಗಳೆಲ್ಲ ಬಂದಿವೆ. ಅರಬ್ಬೀ ಸಮುದ್ರದಲ್ಲಿ ಕಡಲ್ಗಳ್ಳರು