Home Archive by category Fresh News (Page 299)

ಮಂಗಳೂರು ಉತ್ತರ ಬಿಜೆಪಿ ವತಿಯಿಂದ ರೋಡ್ ಶೋ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿ ಅವರು ಬೆಂಬಲಿಗರು, ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಜೊತೆ ಮಂಗಳವಾರ ಸಂಜೆ ಸುರತ್ಕಲ್ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಜಂಕ್ಷನ್ ವರೆಗೆ ರೋಡ್ ಶೋ ನಡೆಸಿದರು.ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಪ್ರಾಸ್ತಾವಿಕ ಮಾತನ್ನಾಡಿದ ಉತ್ತರ ಮಂಡಲ ಅಧ್ಯಕ್ಷ ತಿಲಕ್

ಕಟಪಾಡಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಜೊತೆಗಿದ್ದರು.

ಬಿಜೆಪಿಗೆ ಎದುರಾಳಿಗಳು ಯಾರೆಂಬುವುದು ಲೆಕ್ಕವಲ್ಲ : ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಹೇಳಿಕೆ

ಪುತ್ತೂರು; ದೇಶದಲ್ಲಿರುವ ಲೋಕತಂತ್ರ ವ್ಯವಸ್ಥೆಯಲ್ಲಿ ಯಾರು ಯಾವ ಪಕ್ಷವನ್ನೂ ಸೇರಬಹುದು. ಆದರೆ ಬಿಜೆಪಿಗೆ ಎದುರಾಳಿಗಳು ಯಾರೆಂಬುವುದು ಲೆಕ್ಕವಲ್ಲ. ಜನರ ವಿಶ್ವಾಸವೇ ನಮ್ಮ ಶಕ್ತಿಯಾಗಿದೆ. ಪಕ್ಷ ಸಿದ್ಧಾಂತಕ್ಕೆ ಬದ್ಧರಾದವರು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಹೇಳಿದರು. ಅವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಜನಾರೋಗ್ಯ ಕಾಪಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.

ನನ್ನ ಮೇಲೆ ಆರೋಪಗಳನ್ನು ಮಾಡುತ್ತಿರುವುದು ವಿಷಾದನೀಯ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ನಾನು ಬಿಜೆಪಿ, ಸಂಘ ಪರಿವಾರ ಮತ್ತು ಅದರ ಸಿದ್ಧಾಂತಕ್ಕಾಗಿ ವರ್ಷಾನುಗಟ್ಟಲೆ ಕೆಲಸ ಮಾಡಿದ್ದೇನೆ. ಅದೇ ಸಂಘದ ಶಾಖೆಯಲ್ಲಿ ಕೆಲಸ ಮಾಡಿದವರು ಇವತ್ತು ನನ್ನ ವಿರುದ್ಧ ತೀರಾ ಕೇವಲವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಸಂಘದ ಸಂಸ್ಕಾರದಲ್ಲಿ ಬೆಳೆದವರ ಬಾಯಿಂದ ಇಂಥ ಮಾತುಗಳೇ ಎಂದು ನನಗೆ ಆಶ್ಚರ್ಯವಾಗುತ್ತಿದೆ. ಈ ಎಲ್ಲ ಆರೋಪಗಳಿಗೆ ನಾನೇನು ಉತ್ತರ ಹೇಳುವುದಿಲ್ಲ. ಆರೋಪ ಮಾಡುವವರು ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬರಲಿ. ಅಲ್ಲಿ ಆಣೆ

ಮುಂಬರುವ ಚುನಾವಣೆಯಲ್ಲಿ ರಾಜೇಶ್ ನಾಯಕ್‍ ರೇ ಶಾಸಕರಾಗಬೇಕು : ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಹೇಳಿಕೆ

ಬಂಟ್ವಾಳ: ರಾಜೇಶ್ ನಾಯ್ಕ ಅವರು ಬಂಟ್ವಾಳ ಶಾಸಕರಾದ ಮೇಲೆ ಗಲಭೆಗಳಾಗಿಲ್ಲ. ಅದಕ್ಕೆ ಸಂಬಂಧಿಸಿ ಸೆಕ್ಷನ್, ಕರ್ಪೂ, ನಿಷೇಧಾಜ್ಞೆಗಳನ್ನು ವಿಧಿಸಲಾಗಿಲ್ಲ. ಎಲ್ಲೂ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಅವರು ಶಾಸಕರಾದ ಮೇಲೆ ಶಾಂತಿ, ಸುವ್ಯವಸ್ಥೆ ನೆಲೆಸಿದ್ದು, ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳೂ ಆಗಿವೆ. ಹೀಗಾಗಿ ಮುಂಬರುವ ಚುನಾವಣೆಯಲ್ಲೂ ಅವರೇ ಶಾಸಕರಾಗಿ ಆಯ್ಕೆಯಾಗಬೇಕು ಎಂದು ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಹೇಳಿದರು. ಬಂಟ್ವಾಳದ ಬಿಜೆಪಿ

ಬಿಜೆಪಿ ಅಭ್ಯರ್ಥಿ ಪರ ಗೆಲುವಿನ ವಾತಾವರಣ ಇದೆ : ಕಾಪುವಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಪರ ಗೆಲುವಿನ ವಾತಾವರಣ ಇದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಖಚಿತ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಕಾಪುವಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾರ್ಯಕರ್ತರು ಅತೀ ಉತ್ಸಾಹದಲ್ಲಿದ್ದು, ಸುರೇಶ ಶೆಟ್ಟಿ ಗುರ್ಮೆ ಕಾಪುವಿನಲ್ಲಿ ವಿಜಯಪತಾಕೆ ಹಾರಿಸುವುದು ಖಚಿತವಾಗಿದೆ.ಕಾಪುವಿನ ಶಾಸಕ ಲಾಲಾಜಿ ಮೆಂಡನ್ ರವರು

ಬೆಳ್ಳಾರೆಯಲ್ಲಿ ಬಿಜೆಪಿ ವತಿಯಿಂದ ರೋಡ್ ಶೋ

ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಯಿತು. ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಆರಂಭಗೊಂಡು ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ರೋಡ್ ಶೋ ನಢಯುತು. ಬಳಿಕ ಬಸ್ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ್ ಶೇಣವ, ಬಿಜೆಪಿ ದ.ಕ. ಜಿಲ್ಲಾ

ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನ ವಿಜೃಂಭಣೆಯಿಂದ ನಡೆದ ವಾರ್ಷಿಕ ರಥೋತ್ಸವ

ಕಾರ್ಕಳ ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟ್ರಮಣ ದೇವಸ್ಥಾನದ ವಾರ್ಷಿಕ ರಥೋತ್ಸವ ವಿಜಂಭಣೆಯಿಂದ ನಡೆಯಿತು.ಊರ ಪರವೂರ ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರರು, ದೇವಸ್ಥಾನದ ತಂತ್ರಿ ಹಾಗೂ ಅರ್ಚಕ ವೃಂದ ಹಾಗೂ ಆಡಳಿತ ಮಂಡಳಿಯ ಸದಸ್ಯರು ಜಿ. ಎಸ್. ಬಿ. ಸಮಾಜದ ಭಾಂದವರು ಶ್ರೀ ವೆಂಕಟ್ರಮಣ ದೇವಸ್ಥಾನದ ರಥೋತ್ಸವ ದಲ್ಲೀ ಭಾಗಿಯಾದರು.

ನೀರೆ-ಬೈಲೂರು ಬಿಜೆಪಿ ಕಾರ್ಯಕರ್ತರ ಸಭೆ

ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕಷ್ಟೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ ಶಾಸಕ ಬೇಕೆ ಹೊರತು ಜಾತಿವಾದಿ ಶಾಸಕ ಬೇಡ ಎಂದು ತಾ.ಪಂ ಮಾಜಿ ಅಧ್ಯಕ್ಷ ವಿಕ್ರಮ ಹೆಗ್ಡೆ ಹೇಳಿದರು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ನೀರೆ- ಬೈಲೂರು ಭಾಗದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾರ್ಕಳ ಕ್ಷೇತ್ರವನ್ನು ಕಳೆದ

ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ,ಹಸಿರು ಹೊರೆ ಕಾಣಿಕೆಯ ಸಭೆ

ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆಕಾಣಿಕೆಗಳ ಸಂಗ್ರಹ, ಕೇಂದ್ರ, ಹೊರೆಕಾಣಿಕೆಯ ದಿನದ ಸೇರುವಿಕೆ, ಸಾಗುವ ಸಮಯ, ಹೊರೆಕಾಣಿಕೆ ವಸ್ತುಗಳ ಪಟ್ಟಿಯ ಬಗ್ಗೆ ಚರ್ಚಿಸಲಾಯಿತು. ಹಾಗೂ ಬ್ರಹ್ಮಕಲಶದ ವಿವಿಧ ಸಮಿತಿಗಳ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ