ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಕುಲಸಚಿವ (ಮೌಲ್ಯಮಾಪನ) ರಾಗಿದ್ದ ಪ್ರೊ. ಪಿ ಎಲ್ ಧರ್ಮ ಅವರು ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು. ಪ್ರೊ. ಪಿ ಎಲ್ ಧರ್ಮ ಅವರು
ಮೂಡುಬಿದಿರೆ: ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು(86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು. ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮ ಕಂಚಿನ ಕಂಠದ ಮೂಲಕ ಸುಪ್ರಸಿದ್ಧರಾಗಿದ್ದ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು.ವರ್ಷ ಪ್ರಾಯದ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.ನಾಲ್ವರು
ಶಿವಪಾಡಿ ಶ್ರೀ ಉಮಾಮಹೇಶ್ವರ ಸನ್ನಿಧಿಯಲ್ಲಿ ಫೆಬ್ರವರಿ 18 ರಂದು ಆಚರಿಸಲ್ಪಡುವ ಮಹಾಶಿವರಾತ್ರಿಯ ಅಂಗವಾಗಿ ‘ಮಹಾಶಿವರಾತ್ರಿ ಮಹೋತ್ಸವ’ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 06:30 ರಿಂದ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಹಾಗೂ ಸರ್ವ ಸೇವೆಗಳು ನೆರವೇರಲಿವೆ. ರಾತ್ರಿ 10:30 ರಿಂದ ಸಹಸ್ರ ಬಿಲ್ವಾರ್ಚನೆ, ಮಹಾರಂಗಾ ಪೂಜಾದಿಗಳು ಜರುಗಲಿದ್ದು, ರಾತ್ರಿ 09:30 ರಿಂದ ಪ್ರಾತಃಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ ಮಯೂರ
ಮೂಡುಬಿದಿರೆ: ಉನ್ನತ ಶಿಕ್ಷಣ ಸಚಿವ ಡಾ.ಸಿ ಅಶ್ವತ್ಥನಾರಾಯಣ ಅವರು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಟಿಪ್ಪುಸುಲ್ತಾನನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕು ಎಂದಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮತ್ತು ರಾಷ್ಟ್ರಪತಿಯವರು ಮುಖ್ಯಮಂತ್ರಿಗೆ ಸೂಚನೆ ನೀಡಬೇಕು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆಗ್ರಹಿಸಿದ್ದಾರೆ. ಗುರುವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆ ಮಾಡಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 2023ರ ಫೆಬ್ರವರಿ18 ರಂದು 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 6 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮ, ರುದ್ರ ಮಂತ್ರ ಪಠನ,ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮಾರ್ಚನೆ, ಮಹಾ ಮೃತ್ಯುಂಜಯ ಹೋಮ,ಸತ್ಸಂಗ, ಮಹಾ ಸುದರ್ಶನ ಹೋಮ, ಕಳಶ ಪೂಜೆ,ಪಂಚಗವ್ಯ,ನವಕ, ಮಹಾ ಅಭಿಷೇಕ, ಧಾರಾ, ಆರತಿ
ಉಳ್ಳಾಲ: ಮಹಾಶಿವರಾತ್ರಿಯ ಸೂರ್ಯಾಸ್ತದ ನಂತರ ಜಾಗರಣದ ಸಂಧಿಕಾಲದಲ್ಲಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ರುದ್ರಪಾದೆಯಲ್ಲಿ ಲೋಕಕಲ್ಯಾಣಕ್ಕಾಗಿ ಅಗ್ನಿಹೋತ್ರ ಮತ್ತು ಭಸ್ಮ ತಯಾರಿ ಯಜ್ಞವು ಕರಾವಳಿ ಕಲ್ಯಾಣ ಪರಿಷತ್, ಕರ್ನಾಟಕ ಸೋಮೇಶ್ವರ ಶಕ್ತಿ ಕೇಂದ್ರದ ನೇತೃತ್ವದಲ್ಲಿ ಜರಗಲಿದೆ ಫೆಬ್ರವರಿ 18ರಂದು ನಡೆಯಲಿದೆ ಎಂದು ಪರಿಷತ್ ನ ಪದ್ಮನಾಭ ವರ್ಕಾಡಿ ತಿಳಿಸಿದ್ದಾರೆ. ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ನಡೆಸಿದ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ಕೊಡಬೇಕು. ಎರಡು
“ನಮ್ಮ ಕುಂದಾಪುರ” ಬಳಗದ 26ನೇ ಸಹಮಿಲನವು ಕುಂದಾಪುರ ಹೋಟೆಲ್ನ ನಗು ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಖ್ಯಾತ ವಕೀಲರೂ, ಸಾಹಿತಿ, ಸಂಪನ್ಮೂಲವ್ಯಕ್ತಿಗಳಾಗಿರುವ ಎ .ಎಸ್. ಎನ್ ಹೆಬ್ಬಾರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಒಂದು ಹೂವಿನ ಚಿತ್ರವನ್ನು ಬಳಗದ ಗೋಡೆಯ ಮೇಲೆ ಹಾಕಿದರೆ ಸಾವಿರಾರು ಸದಸ್ಯರು ಕ್ಷಣಮಾತ್ರದಲ್ಲಿ ತಮ್ಮದೇ ಆದ ವಿಭಿನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಪರಿ
ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ ಆಮದಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಕ್ಯಾಂಪೆÇ್ಕ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ ಕ್ಯಾಂಪೆÇ್ಕ ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಅಡಿಕೆ ಆಮದಿಗೆ ಅವಕಾಶ
ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ರಾಜ್ಯ ಸರಕಾರದ ಪಿಡಬ್ಲ್ಯುಡಿ ಇಲಾಖೆಯ ಅನುದಾನದ ಮೂಲಕ ಉರ್ವಸ್ಟೋರ್ ಮೈದಾನದ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.