Home Archive by category Fresh News (Page 52)

ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ

ಪಾಟ್ನಾ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ

ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್‌ ಕುಮಾರ್‌ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್‌ ಕುಮಾರ್‌ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್‌, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ. ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು – ಬಿಜೆಪಿ ಸರ್ಕಾರ ರಚನೆಯಾಗೋದು ಸಹ ಬಹುತೇಕ ಖಚಿತವಾಗಿದೆ. ಭಾನುವಾರ

ಎಸ್.ಡಿ.ಎಂ. ಗಣರಾಜ್ಯೋತ್ಸವ

ಭಾರತದ ವೈವಿಧ್ಯಮಯ ಗತವೈಭವದ ಮೆಲುಕು, ವರ್ತಮಾನದ ಪ್ರಗತಿಯ ಹೆಜ್ಜೆಗಳ ಬಿಂಬಗಳು, ಸಂವಿಧಾನದ ಶ್ರೇಷ್ಠತೆಯ ಸೊಗಡನ್ನು ಕಟ್ಟಿಕೊಡುವ ಕಲಾತ್ಮಕ ಪ್ರದರ್ಶನದ ಮೂಲಕ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದರು. ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್ ಡಿ ಎಂ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಯ

ಉಜಿರೆ ಕಾಲೇಜು ಎನ್. ಎಸ್. ಎಸ್. ಕ್ಯಾಂಪ್-ಗೆ ಚಾಲನೆ 

ಗುರಿಪಳ್ಳ,  ಜ. 27: ಉಜಿರೆಯ ಶ್ರೀ. ಧ.ಮಂ. ಕಾಲೇಜು (ಸ್ವಾಯತ್ತ) ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ಗುರಿಪಳ್ಳದ ದ. ಕ. ಜಿ. ಪಂ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಾಕ್ಕಾಗಿ ಯುವಜನತೆ” ಎಂಬ ಧ್ಯೆಯ ವಾಕ್ಯದಡಿಯಲ್ಲಿ ಸುಧೀರ್ಘ ಏಳುದಿನಗಳ ಕಾಲ ಜರುಗುತ್ತಿರುವ ವಾರ್ಷಿಕ ವಿಶೇಷ ಶಿಬಿರವು ಜ.27 ರಂದು ಉದ್ಘಾಟನೆ ಗೊಂಡಿತು.  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ   ಉಜಿರೆಯ

ಮಂಗಳೂರು : ಪದವಿನಂಗಡಿ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕ ನಿಧನ

ಮೂಲ್ಕಿಯ ಹಳೆಯಂಗಡಿಯ ಬಳಿ ರಕ್ತೇಶ್ವರ ಕೋಲ ಕಟ್ಟುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡು ದೈವನರ್ತಕ ಸಾವನ್ನಪ್ಪಿದ ಘಟನೆ ನಡೆದಿದೆ. ದೈವನರ್ತಕ ಪದವಿನಂಗಡಿಯ ನಿವಾಸಿಯಾಗಿದ್ದು, ಅಶೋಕ್ ಬಂಗೇರಾ ಎಂದು ತಿಳಿದುಬಂದಿದೆ. ಪದವಿನಂಗಡಿಯ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾತ್ರವಲ್ಲದೆ ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು ಮಾಡುತ್ತಾ, ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇದ್ದು ಅನೇಕ ಯುವ ಸಮೂಹಕ್ಕೆ ಮಾದರಿಯಾಗಿದ್ದರು.

ಮಂಗಳೂರು: ಆರ್‌ ಸಿಬಿ ತಂಡಕ್ಕೆ ಕರಾವಳಿಯ  ಹ್ಯಾಂಗ್ಯೋ ಐಸ್‌ ಕ್ರೀಂ ಸ್ವಾದ..!

ಮಂಗಳೂರು: ಇನ್ನೇನು ಐಪಿಎಲ್ 2024ನೇ ಆವೃತ್ತಿ ಪ್ರಾರಂಭಗೊಳ್ಳುತ್ತಿದೆ. ಈ ನಡುವೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಅಧಿಕೃತ ಐಸ್ಕ್ರೀಂ ಪಾಲುದಾರನಾಗಿ ಕರಾವಳಿಯ ಹಾಂಗ್ಯೊ ಐಸ್ಕ್ರೀಂ ಸೇರ್ಪಡೆಗೊಂಡಿದೆ. ಕ್ರಿಕೆಟ್ ಪ್ರೇಮಿಗಳ ಐಪಿಎಲ್ ಕ್ರಿಕೆಟ್ ಹಬ್ಬ ಇನ್ನೇನು ಆರಂಭವಾಗಲಿದೆ. ಈ ಭಾರಿ ಆರ್‌ಸಿಬಿ ತಂಡಕ್ಕೆ ಹಾಂಗ್ಯೊ ಐಸ್ಕ್ರೀಂ ಸಾಥ್ ನೀಡಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಎರಡೂ ಸಂಸ್ಥೆಗಳ ಮುಖ್ಯಸ್ಥರು ಒಡಂಬಡಿಕೆಗೆ ಸಹಿ ಹಾಕಿದ್ದು, ಈ ಮೂಲಕ ಕರಾವಳಿಯ

ಕೋಲಿಗೆ ಕಟ್ಟಿದ ಗಜ್ಜರಿ ನಿಗಮ ಮಂಡಳಿ

ಕರ್ನಾಟಕದಲ್ಲಿ 34 ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆಲ್ಲ ಮಂತ್ರಿ ಸ್ಥಾನಮಾನ ನೀಡಲಾಗಿದೆ. ಮಂತ್ರಿ ಮಂಡಲದಲ್ಲಿ 34 ಮಂದಿ ಇದ್ದಾರೆ. ಕಾರ್ಯದರ್ಶಿಗಳನ್ನೂ ಸೇರಿ ರಾಜ್ಯದಲ್ಲಿ ಮಂತ್ರಿ ಸ್ಥಾನಮಾನ ಪಡೆದವರ ಸಂಖ್ಯೆ 74ಕ್ಕೆ ಏರಿತು. ಎಲ್ಲ 4ರ ಮಹಿಮೆ. 4ನೇ ತಿಂಗಳಿನಲ್ಲಿ ಲೋಕ ಸಭೆ ಚುನಾವಣೆಯ ಬಿರುಸು. ಅದಕ್ಕೆ ಮೊದಲು ಅಸಮಾಧಾನ ಮರೆಸಿ ತಯಾರಾಗುವುದು ಗುರಿ. ಅದೇ ರಾಜಕೀಯದ ಕಿರಿಕಿರಿ. ರಾಜನಾದವನ ಕುತ್ತಿಗೆಯ ಮೇಲೆ ಸದಾ

ಮೀಯಪದವು : ಜ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ನಡೆಯಲಿದೆ, ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಗಂಟಲು, ಕಿವಿ,

ಕಾರ್ಕಳ : ಟಿಪ್ಪರ್-ಬೈಕ್ ನಡುವೆ ಅಪಘಾತ : ಬೈಕ್ ಸವಾರರಿಗೆ ಗಾಯ

ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಇಂದಿರಾ ನಗರ ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆ ಸಾಗುತ್ತಿದ್ದ KA 1969 ನಂಬರ್ ನ ಬೈಕ್ ನಲ್ಲಿ ಅಶ್ವಿನ್ ಎಂಬವರು ಆದೇಶ್ ಎಂಬವರನ್ನು ಸಹಸವಾರನಾಗಿ ಕುಳ್ಳರಿಸಿಕೊಂಡು ಹೋಗುತ್ತಿದ್ದಾಗ ಬೆಳ್ಮಣ್ ಕಡೆಯಿಂದ ಮುಂಡ್ಕೂರು ಕಡೆ ಸಾಗುತ್ತಿದ್ದ ಕೆ ಎ 20 ಡಿ 56 66 ನಂಬರಿನ ಲಾರಿ ಮುಖಾಮುಖಿ

ಬಾಲವಿಕಾಸದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ವಿಟ್ಲ : ಜನವರಿ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದ