Home Archive by category Fresh News (Page 7)

ಎಲ್ಲೆಂದರಲ್ಲಿ ಕಸ ಬೀಸಾಡುವವರೇ ಜೋಕೆ..! :ಮೂಡುಬಿದಿರೆ ಪುರಸಭೆಯಿಂದ ಬೀಳುತ್ತೆ ರೂ. 10,000 ದಂಡ

ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಸಾವ೯ಜನಿಕ ಸ್ಥಳಗಳಲ್ಲಿ, ಖಾಲಿ ಸೈಟ್ಟ್ ನಲ್ಲಿ, ರಸ್ತೆ ಬದಿಗಳಲ್ಲಿ, ತೋಡಿನಲ್ಲಿ ಹೀಗೆ ಎಲ್ಲೆಂದರಲ್ಲಿ ಕಸ ಬಿಸಾಡುವವರೇ ಜೋಕೆ.. ನಿಮಗೆ ಪುರಸಭೆಯಿಂದ ಬೀಳುತ್ತೆ 10,000 ದಂಡ. ಮೂಡುಬಿದಿರೆ ಪುರಸಭೆಯು ಸಮಪ೯ಕ ತ್ಯಾಜ್ಯ ನಿವ೯ಹಣೆಯ ಬಗ್ಗೆ ಕಳೆದ ಹಲವು ವರುಷಗಳಿಂದ ಶ್ರಮ ವಹಿಸುತ್ತಾ ಬರುತ್ತಿದೆ. ಮನೆಗಳಲ್ಲಿ, ಉದ್ಯಮದಲ್ಲಿ,

ಪುತ್ತೂರು: ಅನಾರೋಗ್ಯ ಪೀಡಿತ ಯುವತಿ ಆತ್ಮಹತ್ಯೆ

ಪುತ್ತೂರು: ತಲೆನೋವು, ನರದೋಷ ಮತ್ತಿತರ ಸಮಸ್ಯೆಯಿಂದ ಬಳಲುತ್ತಿದ್ದು ಮಾನಸಿಕವಾಗಿ ಜರ್ಝರಿತಗೊಂಡಿದ್ದ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ನಡೆದಿದೆ. ಗುಡ್ಡಪ್ಪ ರೈ ಎಂಬವರ ಪುತ್ರಿ ನೀತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈ ಬಗ್ಗೆ ಮೃತಳ ಅಕ್ಕ ಗೀತಾ ಪಿ. ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ

ಪಡುಬಿದ್ರಿ: ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ಕಾರ್ಯದರ್ಶಿ , ಖಜಾಂಚಿ ಮತ್ತು ಟ್ರಸ್ಪಿಗಳಿಂದ ಉದ್ಯೋಗ ಮೇಳ-2025 ಉದಾರ ಪ್ರಾಯೋಜಕತ್ವವನ್ನು ನೀಡಿದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ಪಡುಬಿದ್ರಿಯಲ್ಲಿ ನಡೆಯಿತು. ಈ ಬಾರಿಯ ಉದ್ಯೋಗ ಮೇಳದಲ್ಲಿ 1,517 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು ಉಳಿದವರನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಲ್ಲಿ ಇರಿಸಲಾಗಿದೆ.

ಪುತ್ತೂರು: ನ.26ರಂದು ಮಾಧ್ಯಮ ಪ್ರತಿನಿಧಿಗಳು ಹಾಗೂ ಅವರ ಕುಟುಂಬದವರಿಗೆ ಜೈ ತುಳು ಸಿನಿಮಾದ ಸ್ಪೆಷಲ್ ಶೋ

ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ `ಜೈ’ ತುಳು ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಈ ವಿಶೇಷ ಶೋಗೆ MG Motors Mangalore ಪ್ರಾಯೋಜಕತ್ವ ನೀಡಿದ್ದು, ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಯನ್ನು ಜೈ ಚಿತ್ರತಂಡವೇ ನಿರ್ವಹಿಸುತ್ತಿದೆ. ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಮತ್ತು ಮಡಿಕೇರಿ ಸೇರಿದಂತೆ ಹಲವಾರು ಪ್ರದೇಶಗಳಿಂದ ಆಗಮಿಸುವ ಮಾಧ್ಯಮ ಮತ್ತು ಪತ್ರಿಕಾ ಸ್ನೇಹಿತರಿಗಾಗಿ ಮಾತ್ರ ಈ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ: ಪವಿತ್ರ ಪಲ್ಲಪೂಜೆ

ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ನಿಮಿತ್ತ ಕಾರ್ತಿಕ ಶುದ್ಧ ಚೌತಿಯಂದು ಪವಿತ್ರ ಪಲ್ಲಪೂಜೆ, ಮಂಗಳವಾರ ಮತ್ತು ಬುಧವಾರ ಎಳೆಯಲಿರುವ ಪಂಚಮಿ ರಥ ಹಾಗೂ ಬ್ರಹ್ಮರಥಗಳ ಶಿಖರ (ಕಳಶ) ಪೂಜೆ, ಎಡೆಸ್ನಾನ ಪೂಜಾ ವಿಧಿವಿಧಾನಗಳು ನಡೆದವು. ಬೆಳಗ್ಗೆ ದೇವಸ್ಥಾನದ ಒಳಾಂಗಣದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿ ತಾಯರು ವಿಧಿವಿಧಾನಗಳಿಂದ ಪಲ್ಲಪೂಜೆ ನೆರವೇರಿಸಿದರು. ಬಳಿಕ ಅಕ್ಷಯಪಾತ್ರೆಗೆ ಪೂಜೆ ಸಲ್ಲಿಸಿ,

ಮಲ್ಪೆ: ಸರಕಾರಿ ಜಾಗ ವಿವಾದ: ಸ್ಥಳೀಯ ಮೀನುಗಾರರಲ್ಲಿ ಉಂಟಾಗಿದ್ದ ಆತಂಕ ನಿವಾರಣೆ

ಮಲ್ಪೆ ಪ್ರದೇಶದಲ್ಲಿ ಉಂಟಾದ ಸರಕಾರಿ ಜಾಗ ವಿವಾದದಿಂದ ಸ್ಥಳೀಯ ಮೀನುಗಾರರಲ್ಲಿ ಉಂಟಾದ ಆತಂಕ ನಿವಾರಣೆ, ನೈಜ ಮೀನುಗಾರರ ರಕ್ಷಣೆ ಹಾಗೂ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವ ಕುರಿತು ಉಡುಪಿ ಜಿಲ್ಲಾಧಿಕಾರಿಗೂ ಹಾಗೂ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ವತಿಯಿಂದ ಮನವಿ ನೀಡಲಾಯಿತು. ಮಲ್ಪೆ ಪರಿಸರದಲ್ಲಿ ಇತ್ತೀಚೆಗೆ ಸರಕಾರಿ ಮೀನುಗಾರಿಕಾ ಜಾಗಕ್ಕೆ ಸಂಬAಧಿಸಿದAತೆ ಸರ್ಕಾರದಿಂದ ಹೊರಡಿಸಿದ ಆದೇಶದಿಂದ

ಕಾಡುಪ್ರಾಣಿಗಳ ಹಾವಳಿ ವಿರುದ್ಧ ಕ್ರಮಕ್ಕೆ ಆಗ್ರಹ
ಮಂಡೆಕೋಲು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಸುಳ್ಯ: ಕಳೆದ ಎರಡು ದಶಕಗಳಿಂದ ಮಂಡೆಕೋಲು ಗ್ರಾಮಸ್ಥರನ್ನು ಕಾಡುತ್ತಿರುವ ಕಾಡಾನೆ ಹಾಗೂ ಇತರ ವನ್ಯಮೃಗಗಳ ಹಾವಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ಮಂಡೆಕೋಲಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ನೂರಾರು ಗ್ರಾಮಸ್ಥರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಮಾತನಾಡಿ,

ಎಂ.ಸಿ.ಸಿ. ಬ್ಯಾಂಕಿನ 15ನೇ ಎಟಿಎಂ ಉಡುಪಿ ಶಾಖೆಯಲ್ಲಿ ಉದ್ಘಾಟನೆ

ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 15ನೇ ಎಟಿಎಂ ಅನ್ನು ನವಂಬರ್ 23, 2025ರ ರವಿವಾರ ಉಡುಪಿ ಶಾಖೆಯಲ್ಲಿ ಉದ್ಘಾಟಿಸಲಾಯಿತು.ಈ ಎಟಿಎಂ ಅನ್ನು ಉದ್ಯಾವರದ ಸೇಂಟ್ ಕ್ಸೇವಿಯರ್ ಚರ್ಚ್ ಧರ್ಮಗುರು ವಂದನೀಯ ಫಾ| ಅನಿಲ್ ಡಿಸೋಜಾ ಉದ್ಘಾಟಿಸಿದರು. ಉಡುಪಿಯ ಶೋಕಮಾತೆ ಚರ್ಚ್ ಧರ್ಮಗುರು ವಂದನೀಯ ಫಾ| ಚಾರ್ಲ್ಸ್ ಮಿನೇಜಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿAದ ಮೊದಲ ನಗದು ಹಿಂಪಡೆಯುವಿಕೆಯನ್ನು ತಲ್ಲೂರಿನ ಶ್ರೀ ಶಿವಪ್ರಸಾದ್ ಶಿವರಾಮ

ಬಟ್ಟೆ ತೊಳೆಯಲು ತೆರಳಿದ ದಂಪತಿ ಹೇಮಾವತಿ ನಾಲೆಯಲ್ಲಿ ಬಿದ್ದು ಸಾವಿಗೀಡಾದ ದುರ್ಘಟನೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನ. 23ರಂದು ಸಂಭವಿಸಿದ ದಾರುಣ ಘಟನೆ ಗ್ರಾಮಸ್ಥರನ್ನು ಕಣ್ಣೀರಲ್ಲಿಟ್ಟುಬಿಟ್ಟಿದೆ. ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ದಂಪತಿ ದುರಂತವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಟ್ಟೆ ತೊಳೆಯುವ ಸಂದರ್ಭ ದೀಪು ಕಾಲು ಜಾರಿಬಿದ್ದು ನಾಲೆಗೆ ಬಿದ್ದಾಳೆ. ತಕ್ಷಣವೇ ಪತ್ನಿಯನ್ನು ರಕ್ಷಿಸಲು ಗೋಪಾಲ್ ನಾಲೆಗೆ ಇಳಿದರೂ, ನಾಲೆಯಲ್ಲಿ ಹರಿಯುತ್ತಿದ್ದ ಭಾರೀ ಪ್ರಮಾಣದ ನೀರಿನ ಹರಿವು

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಬ್ಬಂದಿ ಜತ್ತಪ್ಪ ಕೆ.ಪಡ್ಪುರವರಿಗೆ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ

ಸುಳ್ಯ. ಬೆಳ್ಳಾರೆ.ಇತ್ತೀಚೆಗೆ ನಿಧನರಾದ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಉದ್ಯೋಗಿ ಜತ್ತಪ್ಪ ಕೆ.ಪಡ್ಪು ರವರಿಗೆ ಬೆಳ್ಳಾರೆ ಸಹಕಾರಿ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆಯು ನ.24 ರಂದು ಸಂಘದ ಸಭಾಭವನದಲ್ಲಿ ನಡೆಯಿತುಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕಾರಿ ಸಂಘದಲ್ಲಿ ಜತ್ತಪ್ಪಣ್ಣನರವರು 32 ವರ್ಷಗಳ ಕಾಲ ಸುದೀರ್ಘವಾಗಿ ಸೇವೆ ಸಲ್ಲಿಸಿದ್ದಾರೆ. ಒಳ್ಳೆಯ ವ್ಯಕ್ತಿತ್ವದಿಂದ