Home Archive by category Fresh News (Page 756)

ಮಂಗಳೂರಿನಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆ

ಮಂಗಳೂರಿನ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ. ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ

ತೈಲ ಬೆಲೆ ಏರಿಕೆ ಖಂಡಿಸಿ ಮಂಗಳೂರು ನಗರ ಕಾಂಗ್ರೆಸ್ ಪ್ರತಿಭಟನೆ

 ದೇಶದಲ್ಲಿ ವ್ಯಾಪಕವಾಗಿ 100ರ  ಗಡಿ ಸೇರಿರುವ ಪೆಟ್ರೋಲ್ ಹಾಗೂ ಡೀಸೆಲ್‌ ದರ ಹೆಚ್ಚಳದ ವಿರುದ್ಧ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ ಸಾಲ್ಯಾನ್ ರವರ ನೇತೃತ್ವದಲ್ಲಿ  ಶನಿವಾರ  ಮಂಗಳೂರಿನ ಲೇಡಿಹಿಲ್ ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತಾಡಿದ ಮಾಜಿ ಶಾಸಕ ಜೆ.ಆರ್.ಲೋಬೋರವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಆಗಿದೆ.ದೇಶದ ಜನರ ಈ ಸಂಕಷ್ಟಕ್ಕೆ ದೇಶದ

ಪುತ್ತೂರಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಇಂಧನ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ಹಮ್ಮಿಕೊಂಡಿರುವ 100ನೋಟ್ ಔಟ್ ಎನ್ನುವ ಪ್ರತಿಭಟನಾ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾವು ಹೇಮನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ವಿನೂತನವಾಗಿ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾವು ಹೇಮನಾಥ್ ಶೆಟ್ಟಿಯವರು ಮಾತಾಡಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೂಲಕ ಜನತೆಯ ಹಣವನ್ನು ಲೂಟಿಗೈಯ್ಯುತ್ತಿದೆ, ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ೧೪೦ ಡಾಲರ್ ಆಗಿದ್ದರೂ

ಬಿಎಸ್‌ ಎನ್‌ ಎಲ್ ಬಗ್ಗೆ ಜನತೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಿ : ಪುತ್ತೂರು ಶಾಸಕ ಸಂಜೀವ ಮಠಂದೂರು 

ಪುತ್ತೂರು: ನಮ್ಮಲ್ಲಿಗೆ ಹಲವು ಸಂಸ್ಥೆಗಳ ಮೊಬೈಲ್ ನೆಟ್‌ವರ್ಕ್ಗಳು ಬಂದಿದ್ದರೂ ಅಷ್ಟೇ ವೇಗವಾಗಿ ಮಾಯವಾಗಿ ಹೋಗಿದೆ. ಇವೆಲ್ಲದರ ನಡುವೆ ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಜನರು ವಿಶ್ವಾಸವಿಟ್ಟು ಅದನ್ನು ಬಳಕೆ ಮಾಡುತ್ತಿದ್ದಾರೆ. ಜನರು ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಮತ್ತು ಖಾಸಗಿ ದೂರವಾಣಿ

ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾಂಗ್ರೆಸ್‌ ನಿಂದ ಪ್ರತಿಭಟನೆ

ಇಂಧನ ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಕಾರ್ಕಳದ ಸ್ಥಳೀಯ ಪೆಟ್ರೋಲ್ ಬಂಕ್ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಮಾತನಾಡಿ, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರಕಾರದಿಂದ ಜನ ವಿರೋಧಿ ನೀತಿಯಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತವಾಗಿ ಏರಿಸಿ ಶತಕವನ್ನು ದಾಟಿಸಿದ್ದಾರೆ. ಇದು ಬಿಜೆಪಿ ಸರಕಾರದ ಸಾಧನೆಯ ವಿಷಯವಾಗಿದೆ. ಮೊದಲೇ

ಕಾಪುವಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಕಾಪು ಪೆಟ್ರೋಲ್ ಬಂಕ್‌ನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ವಿಭಿನ್ನವಾಗಿ ನಡೆದ ಪ್ರತಿಭಟನೆಯಲ್ಲಿ ಕ್ರಿಕೆಟ್ ಆಟಗಾರನ ಮಾದರಿ, ಕೇಕ್ ತುಂಡರಿಸುವುದು, ಮಹಿಳಾ ಕಾಂಗ್ರೆಸ್‌ನಿಂದ ತಟ್ಟೆ ಬಡೆಯುವ ಮೂಲಕ ಎಲ್ಲರ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೊವೀಡ್ ಸಂಕಷ್ಟ ಕಾಲದಲ್ಲಿ ಜನರ ಪರವಾಗಿ ನಿಲ್ಲಬೇಕಾಗಿದ್ದ

ಪುತ್ತೂರಿನಲ್ಲಿ ‘ಭತ್ತ ಬೆಳೆಯೋಣ ಬದುಕು ಕಟ್ಟೋಣ’ ಆಂದೋಲನ

ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಪೂರ್ಣ ಪ್ರಮಾಣದಲ್ಲಿ ಭತ್ತದ ಬೇಸಾಯದ ಜಿಲ್ಲೆಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಬೇಸಾಯವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಶಯದಂತೆ ಮತ್ತೆ ದ.ಕ. ಜಿಲ್ಲೆಯನ್ನು ಬೇಸಾಯ ವೈಭವದ ಜಿಲ್ಲೆ ಮಾಡುವ ಉದ್ದೇಶ ಇಟ್ಟುಕೊಂಡು ಭತ್ತ ಬೆಳೆಯೋಣ.. ಬದುಕು ಕಟ್ಟೋಣ ಎಂಬ ಆಂದೋಲನ ಆರಂಭಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ

ಉದಯ್ ಗಾಣಿಗ ಕೊಲೆ ಪ್ರಕರಣ: ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ: ವಿನಯಕುಮಾರ್ ಸೊರಕೆ

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಆರೋಪಿಗಳಿಗೆ ಕೆಲ ಬಿಜೆಪಿ ಮುಖಂಡರು ರಕ್ಷಣೆ ಕೊಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಅದು ಯಾರೇ ಆಗಿರಲಿ, ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ. ಮುಂಬರುವ ಅಧಿವೇಶನದಲ್ಲಿ ನಮ್ಮ ಪಕ್ಷದ ಶಾಸಕರು ನ್ಯಾಯಕ್ಕಾಗಿ ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಾಗ್ದಾಳಿ ನಡೆಸಿದರು. ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮೃತ ಯಡಮೊಗೆಯ ಉದಯ್

ತಸ್ತೀಕ್ ವಿಚಾರದಲ್ಲಿ ರಾಜಕೀಯ ಬೇಡ : ಹರೀಶ್ ಕುಮಾರ್

ತಸ್ತೀಕ್ ಹಣದ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವ ಮೂಲಕ ಜನರ ಭಾವನಯೊಂದಿಗೆ ಆಟವಾಡುವುದು ಬೇಡ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರು ಆದ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಸ್ತೀಕ್ ಹಣ ನೀಡುವ ವಿಚಾರದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗುವ ವಿಚಾರ ಯಾವುದು ಇಲ್ಲ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ತಸ್ತೀಕ್ ಹಣವನ್ನು

ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಸಾವನ್ನಪ್ಪಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿ ಕಳಚಿದಂತೆ ಆಗಿದೆ. ಮೇ 2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಕಳೆದ ಸೋಮವಾರದಂದು ಮಣಿಪಾಲ್ ಆಸ್ಪತ್ರೆಗೆ