Home Archive by category Fresh News (Page 868)

ಶ್ರೀನಿವಾಸ ವಿವಿಯ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್‌ಮೆಂಟ್: ವಿಶ್ವ ಪರಿಸರ ದಿನ ಆಚರಣೆ

ಶ್ರೀನಿವಾಸ ವಿಶ್ವವಿದ್ಯಾಲಯ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ವತಿಯಿಂದ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ವರ್ಚುವಲ್ ವೇದಿಕೆಯ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಬಿ.ಕಾಂ. ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸುತ್ತಮುತ್ತಲಿನ

ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಕಾಂಗ್ರೆಸ್ ವತಿಯಿಂದ ಮಾಸ್ಕ್ ವಿತರಣೆ

ಪುತ್ತೂರು: ನಗರ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಎನ್95 ಮಾದರಿಯ ಮಾಸ್ಕನ್ನು ಪತ್ರಿಕಾಭವನದಲ್ಲಿ ವಿತರಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾಸ್ಕ್‍ವಿತರಿಸಿ ಮಾತನಾಡಿ, ಕೊರೋನಾ ಸಂಕಷ್ಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸಮಾಜದ ಜನರ ನಡುವೆ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸರಕಾರ ಕೊಡುಗೆಗಳನ್ನು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಒತ್ತಾಯಿಸಿದರು. ಈ

ಲಸಿಕೆ ನೀಡಲು ಸರ್ಕಾರ ಮೀನಾಮೇಷ: ಐವನ್ ಡಿಸೋಜಾ

ಕೊರೊನಾ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಯಾಕೆ ಉಚಿತವಾಗಿ ಲಸಿಕೆ ನೀಡಲು ಮೀನಾಮೇಷ ಎಣಿಸುತ್ತಿದೆ. ಲಸಿಕೆ ಪಡೆದವರು ಯಾರೂ ಸತ್ತಿಲ್ಲ. ಲಸಿಕೆ ಸಿಗದೇ ಆದಂತಹಾ ಸಾವು ನೋವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ.  ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಸಿಕೆಯನ್ನು ಪಡೆಯದ ಕಾರಣ ನಮ್ಮವರು ಸತ್ತಿದ್ದಾರೆ ಎಂದು ಹೇಳುವ ಮಂದಿ

ಹಿಂದುಳಿದ ವರ್ಗಕ್ಕೆ ಪ್ಯಾಕೇಜ್ ಇಲ್ಲ: ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ವಿಶ್ವಾಸ್ ದಾಸ್

ಕೊರೊನಾದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಧ್ಯಮ ವರ್ಗ, ಹಿಂದುಳಿದ ವರ್ಗದವರು ಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಕನಿಷ್ಠ ಹತ್ತು ಸಾವಿರ ಆದರೂ ಅನುದಾನವನ್ನು ಕಾರ್ಮಿಕರಿಗೆ, ಬಡವರಿಗೆ ನೀಡಬೇಕು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್ ದಾಸ್ ಹೇಳಿದರು. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ಅರವಿಂದ ಲಿಂಬಾವಳಿ

ಕರ್ನಾಟಕ ಸರಕಾರ ರಾಜ್ಯ ಸರ್ಕಾರದ ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಅರವಿಂದ ಲಿಂಬಾವಳಿಯವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರ ದ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಜೊತೆಗಿದ್ದರು.

ಸುಳ್ಯದಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ಕಾನೂನು ಕಾಲೇಜು ವಿದ್ಯಾರ್ಥಿಯೊಬ್ಬ ಶನಿವಾರ ಮುಂಜಾನೆ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ . ಸುಳ್ಯ ತಾಲೂಕು ಮರ್ಕಂಜ ಗ್ರಾಮದ ದೇಶಕೋಡಿ ದಿ| ರಘುನಾಥ ಪುರುಷ ಎಂಬವರ ಪುತ್ರ ನಿತೇಶ್ ಎಂ.ಆರ್(30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ . ಆತ್ಮಹತ್ಯೆ ಮಾಡಿಕೊಂಡ ನಿತೇಶ್ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ದ್ವಿತೀಯ ಸಾಲಿನ ಎಲ್ ಎಲ್ ಬಿ ವಿದ್ಯಾರ್ಥಿಯಾಗಿದ್ದರು. ಕಾಲೇಜಿಗೆ ತೆರಳಿ ವ್ಯಾಸಂಗ ಮಾಡುತ್ತಿದ್ದ

ವ್ಯಾಕ್ಸಿನ್ ಕೇಂದ್ರಗಳಲ್ಲಿ ನಿಯಮ ಉಲ್ಲಂಘನೆಯಾಗಲ್ಲ: ಉಡುಪಿ ಡಿಸಿ ಜಿ. ಜಗದೀಶ್

ಕುಂದಾಪುರ: ತಾಲೂಕಿನಲ್ಲಿರುವ ವ್ಯಾಕ್ಸಿನ್ ಕೇಂದ್ರಗಳಲ್ಲಿ ಕೆಲ ಗೊಂದಲಗಳಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು ಯಾರಿಂದಲೂ ನಿಯಮ ಉಲ್ಲಂಘನೆಯಾಗದಂತೆ ಕುಂದಾಪುರ, ಕಾರ್ಕಳ ಹಾಗೂ ಮಲ್ಪೆಯ ವ್ಯಾಕ್ಸಿನ್ ಕೇಂದ್ರಗಳಿಗೆ ನೋಡಲ್ ಅಧಿಕಾರಿ ನೇಮಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕುಂದಾಪುರದ ಬೋರ್ಡ್ ಹೈಸ್ಕೂಲಿನಲ್ಲಿರುವ ವ್ಯಾಕ್ಸಿನ್ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಧ್ಯಮಗಳ ಜೊತೆ

ಮಂಜೇಶ್ವರ ಗ್ರಾ.ಪಂ. ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಸರಕಾರಿ ಜಿಡಬ್ಲ್ಯುಎಲ್‍ಪಿ ಶಾಲೆ ಮಂಜೇಶ್ವರದಲ್ಲಿ ನಡೆಯಿತು. ಕೋವಿಡ್ ಮಾನದಂಡಗಳನ್ನು ಪಾಲಿಸಿ ಕೊಂಡು ಮಂಜೇಶ್ವರ ಗ್ರಾಮ ಪಂಚಾಯತು ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಲಾ ಪರಿಸರದಲ್ಲಿ ಗಿಡ ನೀಡುವುದರೊಂದಿಗೆ ಮಂಜೇಶ್ವರ ಗ್ರಾ. ಪಂ. ಅಧ್ಯಕ್ಷೆ ಜೀನ್ ಲವೀನಾ ಮೊಂತೆರೋ ಉದ್ಘಾಟಿಸಿದರು. ಈ ಸಂದರ್ಭ

ಮಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಮಂಗಳೂರು:  ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಇಂದು ಮಂಗಳೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ , ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಗಿಡ ನೇಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಗಾಂಧೀಜಿಯವರು ನುಡಿದಂತೆ, ಹಿಂದಿನವರು ನಮಗೆ ಬಿಟ್ಟುಕೊಟ್ಟು ಹೋದ

ಮನೆ ಮನೆಗೆ ದಿನಸಿ ಸಾಮಾಗ್ರಿ ವಿತರಣೆ : ಉಡುಪಿಯ ಸ್ಪೀಡ್ ಡೆವಿಲ್ಸ್ ಯುವಕರ ತಂಡದ ಕಾರ್ಯ

ಲಾಕ್ ಡೌನ್‍ನಿಂದಾಗಿ ದುಡಿಮೆ ಇಲ್ಲದೇ ಹಲವು ಕುಟುಂಬಗಳು ಸಂಕಷ್ಟದಲ್ಲಿವೆ. ಹೀಗಾಗಿ ಸಂಕಷ್ಟದ ಕುಟುಂಬಗಳ ಹಸಿವು ನೀಗಿಸುವ ಕೆಲಸವನ್ನು ಸದ್ದಿಲದೇ ಮಾಡುತ್ತಿದೆ. ಉಡುಪಿಯ ಸ್ಪೀಡ್ ಡೆವಿಲ್ಸ್ ಎನ್ನುವ ಹೆಸರಿನ ಯುವಕರು ಸಂಕಷ್ಟದಲ್ಲಿ ಕುಟುಂಬಗಳ ಮನೆ ಮನೆಗೆ ತೆರಳಿ ಹಸಿವು ನೀಗಿಸುತ್ತಿದೆ. ಇಡೀ ದೇಶವೇ ಕೊವಿಡ್ ಮಹಾಮಾರಿ ಯಿಂದ ಹಾಕಲಾಗಿರುವ ಲಾಕ್ ಡೌನ್ ಗೆ ತತ್ತರಿಸಿ ಹೋಗಿದೆ.ದುಡಿಮೆಯಿಲ್ಲದೇ ಜನ ಹಸಿವಿನಿಂದ ಸಂಕಷ್ಟದಲ್ಲಿದ್ದಾರೆ.ಒಂದೊತ್ತು ಊಟಕ್ಕೂ