Home Archive by category Fresh News (Page 879)

ಶ್ರೀನಿವಾಸ್ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು : ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು

ಶ್ರೀನಿವಾಸ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು ಯುವ ಪೀಳಿಗೆಗೆ, ಬದಲಾಗುತ್ತಿರುವ ಮತ್ತು ಸವಾಲಿನ ಹೋಟೆಲ್ ಉದ್ಯಮದಲ್ಲಿ ಕೆಲಸ ಮಾಡಲು ಸಾಕಷ್ಟು ಸ್ಪರ್ಧಾತ್ಮಕವಾಗುವಂತೆ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುತ್ತಿದೆ. ಎ. ಶ್ಯಾಮರಾವ್ ಫೌಂಡೇಶನ್ ಅಡಿಯಲ್ಲಿ 1988ರಲ್ಲಿ ಸ್ಥಾಪನೆಗೊಂಡ ಈ ಕಾಲೇಜನ್ನು 2017ರಲ್ಲಿ ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ವಿಲೀನಗೊಳಿಸಲಾಯಿತು, ಇದು ವಿದ್ಯಾರ್ಥಿಗಳಿಗೆ ಮತ್ತು ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ನಮ್ಮ

ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹಾಸನ ಜಿಲ್ಲೆಯ ಸಕಲೇಶಪುರದ ಕಿರುಹುಣಸೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ರಾಜಣ್ಣ(59) ಎಂಬವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲ್ಲೇ ಹೆಚ್ಚು ಸಾವು- ನೋವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಚಲನ ವಲನಗಳ ಬಗ್ಗೆ ಮಾಹಿತಿ ನೀಡದ ಅರಣ್ಯ ಇಲಾಖೆ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.    

ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬ್ಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.  ಮುಜರಾಯಿ ಇಲಾಖೆಯ ಎ ಗ್ರೇಡ್ ಕ್ಷೇತ್ರವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ ತಾಲೂಕಿನ 26 ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ

ದುಬೈಯ ಲತೀಫಾ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ಕಾರ್ಯಕ್ರಮದ ನೇತೃತ್ವ ವಹಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ಯು.ಎ.ಇ. ಇದರ ಶಾಫಿ ಬಜ್ಪೆ ಯವರು ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ.

ಕುಂದಾಪುರ ಜೆಸಿಐ ಮತ್ತು ರೆಡ್‍ಕ್ರಾಸ್ ಸಂಸ್ಥೆ : ಬಡವರಿಗೆ ಊಟದ ವ್ಯವಸ್ಥೆ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ.  ಕಳೆದ ಬಾರಿಯೂ ಕೂಡ ಲಾಕ ಡೌನ್ ಸಂದರ್ಭದಲ್ಲಿ ಸುಮಾರು 40ಕ್ಕಿಂತ ಹೆಚ್ಚು ದಿನಗಳಲ್ಲಿಯೂ ಊಟವನ್ನು ನೀಡಿ

ಬೆಳ್ತಂಗಡಿಯಲ್ಲಿ ಕೋವಿಡ್ ಸೋಂಕು ಇಳಿಮುಖ-ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿಯಲ್ಲಿ ಕೊರೊನಾ ಜಾಗೃತಿ ಬಗ್ಗೆ ಅಧಿಕಾರಿ ವರ್ಗದ ಸಭೆಯನ್ನು ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಈಗಾಗಲೇ ಬೆಳ್ತಂಗಡಿಯಲ್ಲಿ ಕೊರೊನಾ ಸಂಖ್ಯೆ ಕಡಿಮೆಯಾಗಿದ್ದು 4 ಗ್ರಾಮಗಳು ಕೊರೊನಾ ಮುಕ್ತವಾಗಿದೆ. ಇನ್ನೂ ಹೆಚ್ಚಿನ ಕ್ರಮ ವಹಿಸಲು ಸಲುವಾಗಿ ಎಲ್ಲಾ ಇಲಾಖೆಗಳ ಸಭೆ ಕರೆದು ಚರ್ಚಿಸಲಾಗಿದೆ ಎಂದರು. ಸಭೆಯಲ್ಲಿ ತಹಶೀಲ್ದಾರರು ಮಹೇಶ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

50 ಲಕ್ಷ ಅಭಿವೃದ್ಧಿ ಕಾಮಗಾರಿ ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪರಿಶೀಲನೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲು ದಕ್ಷಿಣ 15 ನೇ ವಾರ್ಡಿನ ಗಾಂಧಿನಗರ 2 ನೇ ಅಡ್ಡರಸ್ತೆ ಅಗಲಿಕರಣ ಮತ್ತು ಚರಂಡಿ ರಚನೆಯ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು  ನಡೆಸಿದರು. ಶಾಸಕ ಡಾ.ಭರತ್ ಶೆಟ್ಟಿಯವರ ವಿಶೇಷ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಿರುಸಿನಿಂದ ಸಾಗಿದೆ. ಶಾಸಕರೊಂದಿಗೆ ಉಪಮೇಯರ್

ಮಂಗಳೂರು ಯುವ ವಕೀಲರಿಗೆ ಆದ್ಯತೆ ಮೇರೆಗೆ ಲಸಿಕೆ ಕಾರ್ಯಕ್ರಮ

ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮುತುವರ್ಜಿಯಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುಮಾರು 200 ಯುವ ವಕೀಲರಿಗೆ ಲಸಿಕೆ ನೀಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ, ಉಪಾಧ್ಯಕ್ಷರಾದ

New Principal of the Father Muller School of Nursing

The first day of the new month of June which historically heralds the coming of monsoon echoed the change of guard for the Father Muller Charitable Institutions a unit the Father Muller School of Nursing (FMSON). Sr Nancy Priya Mathais, faculty of the Father Muller College of Nursing (FMCON) has been appointed the new principal […]