Home Archive by category Fresh News (Page 900)

ಕೋಸ್ಟಲ್ ಬರ್ತ್, ಸಾಗರ ಮಾಲಾ ಯೋಜನೆಯ ವಿರುದ್ದ ಬೆಂಗರೆಯಲ್ಲಿ ಮೀನುಗಾರರಿಂದ ’ದೋಣಿಯೊಂದಿಗೆ ಪ್ರತಿಭಟನೆ’

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ

ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್:ರೋಗಿಯನ್ನು ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ಅಡ್ಡಿ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕ್ ಮಾಡಿದ ಹಿನ್ನಲೆಯಲ್ಲಿ ತುರ್ತಾಗಿ ಹೋಗುವ ಆಂಬ್ಯುಲೆನ್ಸ್‌ಗೆ ಅಡ್ಡಿಯಾದ ಘಟನೆ ನಡೆದಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿ ಒಂದು ಕಡೆ ಕೋವಿಡ್ ಲಸಿಕೆ ನೀಡಿಕೆ ಮತ್ತೊಂದು ಕಡೆ ಉತ್ತಮ ಸೇವೆ ಸಿಗುವ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆಗೆ ದಿನದಿಂದ ದಿನಕ್ಕೆ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುತ್ತಿದು, ಆಸ್ಪತ್ರೆಗೆ ಬರುವವರು ಆಸ್ಪತ್ರೆಯ ವಠಾರದ ದಾರಿಯಲ್ಲೆ ಅಡ್ಡಾದಿಡ್ಡಿ ವಾಹನ

ಹೆಂಡತಿಯನ್ನು ಬಿಟ್ಟು ನಾದಿನಿಯೊಂದಿಗೆ ಗಂಡ ಪರಾರಿ..!! ಬೆಳ್ತಂಗಡಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು.!

ಮದುವೆಯಾಗಿ ಒಂದು ವರ್ಷವಾಗುವ ಮೊದಲೇ ಹೆಂಡತಿಯನ್ನು ತೊರೆದು ನಾದಿನಿಯೊಂದಿಗೆ ಓಡಿ ಹೋದ ಘಟನೆ ಬೆಳ್ತಂಗಡಿ ತಾಲೋಕಿನ ಕನ್ಯಾನದ ಕೈಕಂಬ ಎಂಬಲ್ಲಿ ನಡೆದಿದ್ದು ಸದ್ಯ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.ಕನ್ಯಾನದ ಮಹಮ್ಮದ್ ಎಂಬುವವರ ಪುತ್ರಿ ಸೌಧಳನ್ನು ಒಂಭಂತು ತಿಂಗಳ ಹಿಂದೆ ಪುಸ್ತಾಫಾ ಎಂಬುವವನು ಮದುವೆಯಾಗಿದ್ದ. ನಾದಿನಿ ರೈಹಾನಾಳೊಂದಿಗೆ ಮುಸ್ತಾಫಾ ಸಲುಗೆಯಿಂದ ಇದ್ದ. ಈ ನಡುವೆ ಸೌಧಳೊಂದಿಗೆ ಜಗಳವಾಡಿ ಮಾತು ಬಿಟ್ಟಿದ್ದ

ಕರಾವಳಿಯಲ್ಲಿ ಚುರುಕುಗೊಂಡ ಮಳೆ

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದು ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿತ್ತು.  ಹವಾಮಾನ ಇಲಾಖೆ ವರದಿ ಪ್ರಕಾರ ಈ ವಾತಾವರಣ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮುಂದುವರೆಯಲಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಬಾರಿ ಬೇಸಿಗೆಯಿಂದಲೇ ಅಂದರೆ ಮೇ ತಿಂಗಳ ಆರಂಭದಿಂದಲೇ ಆಗಾಗ ಮಳೆ ಸುರಿಯುತ್ತಿತ್ತಾದರೂ ಮುಂಗಾರು

ಬೆಲೆಯೇರಿಕೆಯ ವಿರುದ್ಧ ಬೀದಿಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸ್ಟೇಟ್ ಬ್ಯಾಂಕ್ ಬಳಿ ಹಾಗೂ ಲೇಡಿಗೋಷನ್ ಬಳಿಯಲ್ಲಿ ಬೀದಿಬದಿ ವ್ಯಾಪಾರಸ್ಥರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ದ ಘೋಷಣೆಗಳನ್ನು ಕೂಗುವ ಮೂಲಕ ಬಿತ್ತಿಚಿತ್ರ ಹಿಡಿದು ಪ್ರತಿಭಟಿಸಿದರು.ಬೆಲೆಯೇರಿಕೆಯ ವಿರುದ್ದ CPIM ಮಂಗಳೂರು

ಶಿರ್ವದ ಮುಟ್ಲಪಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಹಶೀಲ್ದಾರ್ ದಾಳಿ

ಶಿರ್ವ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ.ಕಳೆದ ಹಲವು ದಿನಗಳಿಂದ ಶಿರ್ವ ಬಳಿಯ ಮುಟ್ಲುಪಾಡಿ ಸೇತುವೆ ಕೆಳಗಡೆ ಕೇರಳ ಮೂಲದ ಕೋಶಿ ಎನ್ನುವಾತನ ತೋಟದ ಜಾಗದಲ್ಲಿ ಅಕ್ರಮ ಮರಳುಗಾರಿಕೆಯನ್ನು ಎಗ್ಗಿಲದೆ ನಡೆಸುತ್ತಿದ್ದರು. ಹಗಲಿನಲ್ಲೇ ರಾಜಾರೋಶವಾಗಿ ಹೊಳೆಗೆ ಡ್ರಜ್ಜಿಂಗ್ ಮಿಶಿನ್‌ಗಳನ್ನು ಹಾಕಿ ಮರಳು ತೆಗೆದು ನೂರಾರು ಲೋಡುಗಳನ್ನು ರಾಜಾರೋಶವಾಗಿ ಸಾಗಿಸುತ್ತಿದ್ದರು. ಸ್ಥಳೀಯರು ಶಿರ್ವ ಪೊಲೀಸರಿಗೆ ಹಾಗೂ ಗಣಿ

ಕುಂದಾಪುರದಲ್ಲಿ ಬೆಲೆ ಏರಿಕೆ ವಿರೋಧಿಸಿ ಸಿಐಟಿಯುನಿಂದ ಪ್ರತಿಭಟನೆ

ಕುಂದಾಪುರ: ಜನಸಾಮಾನ್ಯರಿಗೆ ಸಂಕಷ್ಟ ತಂದೊಡ್ಡುತ್ತಿರುವ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಿ ಎಂದು ಹಲವಾರು ಎಡ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದರೂ ಅದನ್ನು ನಿಯಂತ್ರಿಸುವ ಗೋಜಿಗೆ ಕೇಂದ್ರ, ರಾಜ್ಯ ಸರ್ಕಾರ ಹೋಗಿಲ್ಲ. ಇದು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಅರೆ ಫ್ಯಾಸಿಸ್ಟ್ ಸರ್ಕಾರ ಎನ್ನುವುದನ್ನು ಸಾಬೀತುಪಡಿಸಿದೆ. ಬಿಜೆಪಿ ಕೇವಲ ಕೋಮುವಾದಿ ಪಕ್ಷವಲ್ಲ. ಅದು ಬಡ ಜನರನ್ನು ಲೂಟಿ ಮಾಡುವ ಸರ್ಕಾರ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಎಲ್ಲೂರಿನಲ್ಲಿ ಬಾವಿ ಕುಸಿತ: ಮೂರು ಲಕ್ಷಕ್ಕೂ ಅಧಿಕ ನಷ್ಟ

ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಿಯೂರಿನಲ್ಲಿ ಭಾರೀ ಮಳೆಗೆ ಕುಡಿಯುವ ನೀರಿನ ಬಾವಿಯೊಂದು ಪಂಪ್ ಸೆಟ್ಟ್ ಸಹಿತ ಕುಸಿದು ಸುಮಾರು ಮೂರು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಮಾನಿಯೂರಿನ ಗಣೇಶ್ ಮೂಲ್ಯ ಎಂಬವರಿಗೆ ಸೇರಿದ ಕಲ್ಲು ಕಟ್ಟಿದ್ದ ಬಾವಿ ಗುರುವಾರ ಕುಸಿತ ಕಂಡಿದ್ದು, ಸ್ಥಳಕ್ಕೆ ಎಲ್ಲೂರು ಗ್ರಾ.ಪಂ. ಅಧ್ಯಕ್ಷ ಜಯಂತ್ ಕುಮಾರ್ ಆಗಮಿಸಿ ಪರಿಶೀಲನೆ ಮಾಡಿದ್ದು, ಪ್ರಕೃತಿ ವಿಕೋಪದಡಿ ಸರ್ಕಾರದಿಂದ ಸಂತ್ರಸ್ಥರಿಗೆ ಪರಿಹಾರ ನೀಡಲು ಶ್ರಮಿಸುವುದಾಗಿ

ಸಹಕಾರ ಸಚಿವಾಲಯ ಸ್ಥಾಪಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ: ಎಸ್.ಆರ್. ಸತೀಶ್ಚಂದ್ರ

ಸುಮಾರು 117 ವರ್ಷಗಳ ಇತಿಹಾಸವಿರುವ ಸಹಕಾರ ಕ್ಷೇತ್ರಕ್ಕೆ ಸಹಕಾರ ಸಚಿವಾಲಯ ಬೇಕು ಎನ್ನುವ ಬೇಡಿಕೆಯನ್ನು ಕೇಂದ್ರ ಸರ್ಕರ ಪರಿಗಣಿಸಿ ಸಹಕಾರದಿಂದ ಸಮೃದ್ಧಿ ಎನ್ನುವ ಘೋಷವಾಕ್ಯದೊಂದಿಗೆ ಸಹಕಾರ ಸಚಿವಾಲಯವನ್ನು ರಚಿಸಿರುವ ಕೇಂದ್ರ ಸರ್ಕಾರಕ್ಕೆ ಸಹಕಾರಿಗಳ ಪರವಾಗಿ ಧನ್ಯವಾದವನ್ನು ತಿಳಿಸುತ್ತೇನೆ ಎಂದು ಸಹಕಾರ ಭಾರತಿಯ ಕರ್ನಾಟಕದ ರಾಜ್ಯಾಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು. ಅವರು ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೊಷ್ಟಿ ನಡೆಸಿ ಮಾತನಾಡಿ ನಮ್ಮ

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ : ಡೊಂಗರಕೇರಿ ಕಟ್ಟೆಯ ಬಳಿ ಪುರಾತನ ಬಾವಿ ಪತ್ತೆ

ಮಂಗಳೂರು ನಗರದಾದ್ಯಂತ ಸ್ಮಾರ್ಟ್‍ಸಿಟಿ ಕಾಮಗಾರಿ ನಡೆಯುತ್ತಿದ್ದು ನಗರದ ಡೊಂಗರಕೇರಿ ಕಟ್ಟೆಯ ಬಳಿ ಕಾಮಗಾರಿಯನ್ನು ನಡೆಸುತ್ತಿರುವ ಸಂದರ್ಭ ಪುರಾತನ ಬಾವಿಯೊಂದು ಪತ್ತೆಯಾಗಿದೆ. ನಗರದ ಅಲ್ಲಿಲ್ಲಿ ಕಾಮಗಾರಿ ವೇಳೆ ಬಾವಿ ಪತ್ತೆಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ನಗರದ ಡೊಂಗರಕೇರಿ ಕಟ್ಟೆಯ ಬಳಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ರಸ್ತೆ ಫುಟ್‍ಬಾತ್ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ವೇಳೆ ಪುರಾತನ ಬಾವಿ ಪತ್ತೆಯಾಗಿದ್ದು, ತಕ್ಷಣ ಮಹಾನಗರ ಪಾಲಿಕೆ