Home Archive by category Fresh News (Page 908)

ವೈರಲ್ ಆಗ್ತಿರೋ ವಿಡಿಯೋ ನನ್ನದಲ್ಲ: ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ- ನಳಿನ್ ಕುಮಾರ್ ಕಟೀಲ್

ನಾಯಕತ್ವ ಬದಲಾವಣೆ ಕುರಿತಂತೆ ವೈರಲ್ ಆಗಿರುವ ವಿಡಿಯೋಗೂ ನನಗೂ ಸಂಬಂಧವಿಲ್ಲ. ಮುಖ್ಯಮಂತ್ರಿಗಳಿಗೆ ಈ ಪತ್ರ ಬರೆಯುತ್ತೇನೆ ಹಾಗೂ ತನಿಖೆಗೆ ಆಗ್ರಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಆಡಿಯೋ ವೈರಲ್ ಕುರಿತಾಗಿ ಮಂಗಳೂರಲ್ಲಿ ಮಾತನಾಡಿದ್ರು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ. ನಾಯಕತ್ವದ ಬದಲಾವಣೆ ಕುರಿತು

ಇಂದಿನಿಂದ ರಾಜ್ಯದಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ

ಕೇರಳ ರಾಜ್ಯದ 441 ವಿದ್ಯಾರ್ಥಿಗಳು ಸೇರಿದಂತೆ ದ.ಕ.ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಕೋವಿಡ್ ಸೋಂಕಿನ ಎರಡನೇ ಅಲೆಯ ಭೀತಿಯ ನಡುವೆಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕೇರಳ ರಾಜ್ಯದ ಗಡಿ ಭಾಗದಿಂದ ಮಂಗಳೂರು ಸೇರಿದಂತೆ ಜಿಲ್ಲೆಯೊಳಗೆ ಇಂದಿನಿಂದ ಷರತ್ತು ಬದ್ಧವಾಗಿ ಬಸ್ ಸಂಚಾರ ಆರಂಭಗೊಂಡಿದೆ. ಅಲ್ಲದೇ, ರೈಲು ಸಂಚಾರದ ವ್ಯವಸ್ಥೆಯೂ ಇದ್ದು, ವಿದ್ಯಾರ್ಥಿಗಳಿಗೆ ದ.ಕ.ಜಿಲ್ಲೆಯೊಳಗಿನ ಪರೀಕ್ಷಾ ಕೇಂದ್ರಗಳಿಗೆ

ಹಡೀಲು ಭೂಮಿಯಲ್ಲಿ ಕೃಷಿಕ್ರಾಂತಿ:ಅಮ್ಮುಂಜೆಯಲ್ಲಿ ಶಾಸಕ ರಾಜೇಶ್ ನಾಯಕ್‌ ರಿಂದ ಚಾಲನೆ

ಬಂಟ್ವಾಳ: ಹಡಿಲು ಭೂಮಿಯಲ್ಲಿ ಕೃಷಿಕ್ರಾಂತಿ ಎಂಬ ಬಂಟ್ವಾಳ ಶಾಸಕರ ಯೋಜನೆಯಂತೆ ಬಿಜೆಪಿ ಯುವಮೋರ್ಚಾ ತಂಡದ ವತಿಯಿಂದ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿಯವರ ಮುಂದಾಳತ್ವದಲ್ಲಿ ಅಮ್ಮುಂಜೆ ಪರಿಸರದ ಸುಮಾರು 5 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಭಾನುವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಯುವ ಸಮುದಾಯ ಕೃಷಿಯತ್ತ ಒಲವು ತೋರಿದರೆ ಈ ದೇಶದಲ್ಲಿ ಕೃಷಿಯಲ್ಲಿ ಮಹತ್ತರವಾದ ಬದಲಾವಣೆ ಸಾಧ್ಯ ಎಂದು

ಆಲಂಪುರಿ ರಸ್ತೆ ಬದಿಯ ಗುಡ್ಡ ಕುಸಿತ: ಅಡಿಕೆ ಮರಗಳು ಧರಶಾಹಿ

ಬಂಟ್ವಾಳ: ಶುಕ್ರವಾರ ರಾತ್ರಿಯಿಂದಲೇ ಸುರಿದ ಭಾರೀ ಮಳೆಗೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕೆಳಗಿನ ವಗ್ಗ ಬಳಿಯ ಆಲಂಪುರಿ ಎಂಬಲ್ಲಿ ರಸ್ತೆ ಬದಿಯ ಗುಡ್ಡ ಕುಸಿದು ಸ್ಟ್ಯಾನಿ ಲೋಬೋ ಎಂಬವರಿಗೆ ಸೇರಿದ ತೋಟದ ೫೦ಕ್ಕೂ ಅಧಿಕ ಅಡಿಕೆ ಮರಗಳು ಧರಶಾಹಿಯಾಗಿದೆ. ಬಿ.ಸಿ. ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ ರಸ್ತೆ ಬದಿಯ ಗುಡ್ಡವನ್ನು ಅಗೆದಿರುವ ಪರಿಣಾಮ ಗುಡ್ಡ ಕುಸಿಯಲು ಕಾರಣ ಎಂದು ಆರೋಪಿಸಲಾಗಿದೆ.

ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ನೂತನ ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧಿಕಾರ ಸ್ವೀಕರಿಸಿದ್ದಾರೆ. ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರಿಗೆ ಸೇವಾ ನಿವೃತ್ತರಾಗಿರುವ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಜಂಟಿ ನಿರ್ದೇಶಕಾದ ಪ್ರೊ. ವಸಂತರಾಜ ಶೆಟ್ಟಿ ಉಪಸ್ಥಿತರಿದ್ದರು. ಡಾ. ಎಕ್ಕಾರು ಕರ್ನಾಟಕ ಸರಕಾರದ ಯುವ

ಕರಾವಳಿಯಲ್ಲಿ ಭಾರೀ ಮಳೆ: ವಿಟ್ಲ ಹೋಬಳಿ ವ್ಯಾಪ್ತಿಯಲ್ಲಿ ಅಪಾರ ಹಾನಿ

ವಿಟ್ಲ: ವಿಟ್ಲ ಹೋಬಳಿ ವ್ಯಾಪ್ತಿಯ ಹಲವೆಡೆ ಮಳೆಗೆ ಭಾರೀ ಹಾನಿ ಸಂಭವಿಸಿದೆ. ಬೋಳಂತೂರು ಗ್ರಾಮದ ಕೊಕ್ಕಪುಣಿ ಎಂಬಲ್ಲಿ ಗಾಳಿ ಮಳೆಗೆ ನೇಮಕ್ಕುರವರ ಮನೆಯ ಮೇಲಿನ ಬರೆ (ಅವರಣ ಗೋಡೆ) ಕುಸಿದು ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಪಂಚಾಯತ್ ಸದಸ್ಯ ಯಾಕುಬು ಮತ್ತು ಗ್ರಾಮಕರಣಿಕ ಕರಿಬಸಪ್ಪ ಆಗಮಿಸಿ ಪರಿಶೀಲಿಸಿದರು. ಬೋಳಂತೂರು ಗ್ರಾಮದ ಅಬ್ದುಲ್ ಖಾದ್ರಿ ಅವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಚೆನ್ನಪ್ಪ ಪೂಜಾರಿ ಅವರ ಮನೆಯ ಹಿಂಭಾಗದಲ್ಲಿರುವ

ಮಂಗಳೂರಿನಲ್ಲಿ ಮಳೆಯ ಅವಾಂತರ: ತಡೆಗೋಡೆ ಕುಸಿದು ದ್ವಿಚಕ್ರ ವಾಹನಗಳು ಜಖಂ

ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸುತ್ತಿದೆ. ತಡೆಗೋಡೆ ಕುಸಿದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ 13ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಜಖಂ ಗೊಂಡಿರುವ ಘಟನೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆ ಸಮೀಪ ನಡೆದಿದೆ. ಪ್ಲಾಟ್ ಬಳಿ ತಡೆಗೋಡೆ ಶಿಥಿಲವಾಗಿದ್ದು, ಸುರಿದ ಭಾರೀ ಮಳೆಯಿಂದ ಕುಸಿದಿದೆ. ಈ ವೇಳೆ ಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳ ಮೇಲೆ ಗೋಡೆಯ ಕಲ್ಲುಗಳು ಬಿದ್ದ ಹಿನ್ನೆಲೆಯಲ್ಲಿ ವಾಹನ ಗಳು ಜಖಂಗೊಂಡಿವೆ. ಇನ್ನು

ಜುಲೈ 26ರಿಂದ ಪದವಿ ತರಗತಿ ಆರಂಭ: ಸಿನಿಮಾ ಮಂದಿರ ತೆರೆಯೋದಕ್ಕೆ ಅನುಮತಿ

ರಾಜ್ಯ ಸರ್ಕಾರದಿಂದ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಸಿನಿಮಾ ಮಂದಿರಗಳನ್ನು ತೆರೆಯೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅನ್ ಲಾಕ್ 4.0 ಮಾರ್ಗಸೂಚಿಯಂತೆ ಹಲವು ತಿಂಗಳ ಬಳಿಕ ನಾಳೆಯಿಂದ ಚಿತ್ರಮಂದಿರಗಳನ್ನು ತೆರೆದು, ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಅನ್ ಲಾಕ್ 4.0 ಮಾರ್ಗಸೂಚಿ ಕ್ರಮಗಳ ಜಾರಿ ಕುರಿತಂತೆ ಮಹತ್ವದ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಿನಿಮಾ

ವೀರಮಂಗಲದಲ್ಲಿ ರೈಲ್ವೇ ಹಳಿಗೆ ಧರೆ ಕುಸಿತ: ರೈಲು ಸಂಚಾರ ಸ್ಥಗಿತ

ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ.ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ-ಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು ರೈಲಿನ ಗಾರ್ಡ್ ಗೆ ಹಾನಿಯಾಗಿದೆ.ರೈಲು ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಣ್ಣು ತೆರವು ಮಾಡಲಾಗುತ್ತಿದೆ ಎಂದು

ಉಡುಪಿಯಲ್ಲಿ ಚಿನ್ನದ ಪದಕ ಪುರಸ್ಕೃತ ಸಿಬ್ಬಂದಿಗೆ ಸನ್ಮಾನ

ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಸ್ವೀಕರಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ನಾಲ್ವರು ಸಿಬಂದಿಗಳಿಗೆ ಸನ್ಮಾನ ಕಾರ್ಯಕ್ರಮವು ಉಡುಪಿ ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ದಳದ ಕಚೇರಿ ಯಲ್ಲಿ ನಡೆಯಿತು. ಉಡುಪಿ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಹೆಚ್.ಎಂ ವಸಂತ್ ಕುಮಾರ್, ಆಶ್ವಿನ್ ಸನಿಲ್, ಎಂ ಕೇಶವ್ ಹಾಗೂ ನೂತನ್ ಕುಮಾರ್ ಇವರುಗಳಿಗೆ ಇಲಾಖೆಯ ಸಿಬ್ಬಂದಿಗಳು ಗೌರವಯುತವಾಗಿ ಪೇಟಾ, ಶಾಲು ಹೊದಿಸಿ ಸನ್ಮಾನಿಸಿದರು.ಅಗ್ನಿ ಶಾಮಕ ಹಾಗು ತುರ್ತು ಸೇವಾ