Home Archive by category Fresh News (Page 944)

ಲಸಿಕೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ:ಎಲ್ಲವೂ ಪಾರದರ್ಶಕವಾಗಿದೆ: ಸಚಿವ ಕೋಟ ಸ್ಪಷ್ಟನೆ

ಕುಂದಾಪುರ: ಸರ್ಕಾರ ಹೊರಡಿಸಿರುವ ನಿಯಮಗಳ ಪ್ರಕಾರವಾಗಿಯೇ ಲಸಿಕೆ ಹಂಚಿಕೆಯಾಗುತ್ತಿದೆ. ರಾಜಕೀಯ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿರುವಾಗ ಕೆಲವರಿಗೆ ಬಿಜೆಪಿಯವರು ಲಸಿಕೆ ಕೊಡುತ್ತಿದ್ದಾರೆ ಎಂದು ಅನಿಸಿರಬಹುದು. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಲಸಿಕೆ ಹಂಚಿಕೆ ಪಾರದರ್ಶಕವಾಗಿಯೇ ನಡೆಯುತ್ತಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳು ದೋಷಿ ಎಂದು ತೀರ್ಪು

ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ತೀರ್ಪು ಇಂದು ಪ್ರಕಟಗೊಂಡಿದ್ದು, ಮೂವರು ಪ್ರಮುಖ ಆರೋಪಿಗಳು ದೋಷಿಗಳೆಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ನೀಡಿದ್ದಾರೆ. ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ರಾಜೇಶ್ವರಿ ಶೆಟ್ಟಿ, ರಾಜೇಶ್ವರಿ ಶೆಟ್ಟಿ ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಆರೋಪಿಗಳಾಗಿದ್ದರು. ಆರೋಪಿಗಳು ದೋಷಿ ಎಂದು ನ್ಯಾಯಾಲಯ

ವೃತ್ತಿಪರ ಕೋರ್ಸ್‌ಗೆ ಸಿಇಟಿ ಅಂಕ ಮಾನದಂಡ : ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಇಂದು ನಡೆದ ಸಭೆ ಬಳಿಕ ಮಾತನಾಡಿದ ಅವರು, ಜೂನ್ 15ರಿಂದ ಸಿಇಟಿ ನೋಂದಣಿ ಆರಂಭವಾಗಲಿದೆ. ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ನಡೆಯಲಿದ್ದು, ಮೊದಲ ದಿನ ಗಣಿತ, ಜೀವಶಾಸ್ತ್ರ ಪರೀಕ್ಷೆಗಳು ನಡೆಯುತ್ತದೆ. ಎರಡನೇ ದಿನ ರಸಾಯನಶಾಸ್ತ್ರ,

ತೊಕ್ಕೊಟ್ಟುವಿನಲ್ಲಿ ಪೊಲೀಸರಿಂದ ಬಿಗಿ ತಪಾಸಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ತೊಕ್ಕೊಟ್ಟುವಿನಲ್ಲಿ ಉಳ್ಳಾಲ ಪೊಲೀಸರಿಂದ ಬಿಗು ತಪಾಸಣೆ ಕೈಗೊಂಡಿದ್ದಾರೆ. ಉಳ್ಳಾಲ ಪಿಎಸ್‌ಐ ರೇವಣ್ಣ ಸಿದ್ದಯ್ಯ ಅವರ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹಲವು ವಾಹನಗಳನ್ನು ಪೊಲೀಸರು ಸೀಝ್ ಮಾಡಿದ್ದಾರೆ.  

ಆಲೂರಿನಲ್ಲಿ ಹೆಚ್ಚುತ್ತಿರುವ ಅಕ್ರಮ ಮರಳುಗಾರಿಕೆ : ಸೂಕ್ತ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ಆಲೂರು ತಾಲ್ಲೂಕಿನಲ್ಲಿ ಇತ್ತೀಚೆಗೆ ಅತಿ ಹೆಚ್ಚಾಗಿ ಅಕ್ರಮ ಮರಳುಗಾರಿಕೆ ಹೆಚ್ಚಾಯಿತು. ತಾಲೂಕಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜ್ ಹೇಳಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ಹಿಂದೆ ಮರಳುಗಾರಿಕೆ ನಡೆಸುತ್ತಿದ್ದ ರಸ್ತೆಗಳು ಸರ್ಕಾರದಿಂದ ಅನುಮತಿ ಪಡೆದು ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಆದರೆ ಇತ್ತೀಚೆಗೆ ಅಕ್ರಮ ಮರಳುಗಾರಿಕೆ

ಸೌಕೂರು ಏತ ನೀರಾವರಿ ಯೋಜನೆ ಮೂಲ ನಕ್ಷೆ ಬದಲಾದರೆ ಪರಿಶೀಲನೆ : ಬಿ.ವೈ ರಾಘವೇಂದ್ರ ಹೇಳಿಕೆ

ಕುಂದಾಪುರ: ಆಕಸ್ಮಾತ್ ಸೌಕೂರು ಏತ ನೀರಾವರಿ ಯೋಜನೆಯ ಮೂಲನಕ್ಷೆ ಬದಲಾವಣೆಯಾಗಿದೆ ಎಂದಾದರೆ ಈ ಬಗ್ಗೆ ಪರಿಶೀಲನೆ ಮಾಡೋಣ. ಕುಡಿಯಲು ಹಾಗೂ ಕೃಷಿಗೆ ನೀರು ನೀಡಲು ಸೌಕೂರು ಹಾಗೂ ಸಿದ್ದಾಪುರ ಎರಡು ಯೋಜನೆಗಳು ಆಗಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು. ಇಲ್ಲಿನ ಹೆಮ್ಮಾಡಿಯ ಜ್ಯೂವೆಲ್ ಪಾರ್ಕ್ನ ಜಯಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಆರೋಪಗಳ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ

ಡಾ| ಶ್ರೀನಿವಾಸ ಕಕ್ಕಿಲ್ಲಾಯರು ಕೊಟ್ಟ ದೂರಿನ ಶೀಘ್ರ ತನಿಕೆಗೆ ಸಿಪಿಐ ಒತ್ತಾಯ

ಮಂಗಳೂರಿನ ಪ್ರಖ್ಯಾತ ವೈದ್ಯ ಡಾ| ಬಿ ಶ್ರೀನಿವಾಸ ಕಕ್ಕಿಲ್ಲಾಯರು ಮತ್ತು ಜಿಮ್ಮೀಸ್ ಮಾರ್ಕೇಟಿನ ಸಿಬ್ಬಂದಿ ಮಧ್ಯೆ ನಡೆಯಿತೆನ್ನಲಾದ ಮಾತುಕತೆಗಳ ರಹಸ್ಯ ಸಿಸಿ ಟಿವಿ ದೃಶ್ಯವನ್ನು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಜಿಮ್ಮೀಸ್ ಸುಪರ್ ಮಾರ್ಕೇಟ್ ಮಾಲಕರ ವಿರುದ್ಧ ಹಾಗೂ ಜಿಮ್ಮೀಸ್ ಮಾಲಕ ಮತ್ತು ಪೈ ಎಂಬವರು ಡಾ| ಕಕ್ಕಿಲ್ಲಾಯರನ್ನು, ಕಮ್ಯುನಿಷ್ಟ್ ಪಕ್ಷವನ್ನು, ಡಾಕ್ಟರರ ತಂದೆ ಬಿ ವಿ ಕಕ್ಕಿಲ್ಲಾಯರನ್ನು ದೂಷಿಸುತ್ತಾ ಫೋನು ಮಾತುಕತೆ

ಎಸೆದರೆ ಚಿಗುರುವ ಮಾಸ್ಕ್..!

ಕೊರೊನಾ ಸೋಂಕಿನ ನಿಯಂತ್ರಣದ ಸಲುವಾಗಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಮಾಸ್ಕ್ ಗಳು ಬಂದಿವೆ. ಮಂಗಳೂರು ಸಮೀಪದ ಗ್ರಾಮಾಂತರ ಪ್ರದೇಶದ ಯುವಕನೊಬ್ಬ ಪರಿಸರ ಸ್ನೇಹಿ ಮಾಸ್ಕ್ ನಿರ್ಮಿಸಿ ದೇಶದಾದ್ಯಂತ ಗಮನ ಸೆಳೆದಿದ್ದಾನೆ. ಈ ವಿನೂತನ ಮಾಸ್ಕ್ ನಲ್ಲಿ ಸಸ್ಯದ ಬೀಜಗಳನ್ನು ಅಳವಡಿಸಲಾಗಿದ್ದು, ಮಾಸ್ಕ್ ಬಳಸಿ ಬಿಸಾಡಿದಾಗ ಮಾಸ್ಕಿನಲ್ಲಿ ಅಳವಡಿಸಲಾದ ತರಕಾರಿ ಬೀಜಗಳು ಗಿಡವಾಗಿ ಬೆಳೆಯುತ್ತವೆ. ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಬಳಕೆಗೆ ಶಿಫಾರಸು ಮಾಡಲಾಗಿದೆ.

ಮಾಡೆಲಿಂಗ್: ಆಕಾಶ್ ಪ್ರಭು ’ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ’ ಅಂತಿಮ ಸುತ್ತಿಗೆ ಆಯ್ಕೆ

ಮಂಗಳೂರು ಮೂಲದ ಮೆಕ್ಯಾನಿಕಲ್ ಇಂಜಿನಿಯರ್ ಆಕಾಶ್ ಪ್ರಭು ಅವರು ಈ ವರ್ಷ ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ 2021 ರ ಫೈನಲಿಸ್ಟ್ (ಟಾಪ್ 10) ಆಗಿ ಅರ್ಹತೆ ಪಡೆದಿದ್ದು, ಪೋಲೆಂಡ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಕಾಶ್ ಪ್ರಭು ಅವರು, ಮಿಸ್ಟರ್ ಇಂಡಿಯಾ 2017 ರ ಬೆಂಗಳೂರು ಫೈನಲಿಸ್ಟ್ ಆಗಿದ್ದರು. ಈ ವರ್ಷ ಅವರು ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ 2021 ರ ಫೈನಲಿಸ್ಟ್ ಆಗಿ ಆಯ್ಕೆಯಾಗಿದ್ದಾರೆ. 25ರ ಹರೆಯದ ಆಕಾಶ್ ಪ್ರಭು, ಮೆಕ್ಯಾನಿಕಲ್ ಎಂಜಿನಿಯರ್