Home Archive by category HASANA (Page 2)

ಆಲೂರು : ಸಾರ್ವಜನಿಕ ದೂರು, ಅಹವಾಲುಗಳ ಸ್ವೀಕಾರ

ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗದ ವತಿಯಿಂದ ಆಲೂರು ತಾಲೂಕಿನ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ದೂರು ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ನಡೆಯಿತು. ಲೋಕಾಯುಕ್ತ ಜಿಲ್ಲಾ ವರಿಷ್ಠಾಧಿಕಾರಿ ಮಲ್ಲಿಕ್ ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಇಂದು ಎಂಟು ಅರ್ಜಿಗಳನ್ನು ಸ್ವೀಕಾರ ಮಾಡಿದ್ದು, ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸೇರಿದ್ದು ಒಂದು

ಹಾಸನ ಜಿಲ್ಲೆಯ ಅರಸೀಕೆರೆ ಬಳಿ ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿಯ ಹಳ್ಳಿಕೆರೆ ಗ್ರಾಮದ ಬಳಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 9 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಸರ್ಕಾರಿ ಬಸ್ಸು, ಹಾಲಿನ ಟ್ಯಾಂಕರ್ ಮತ್ತು ಟೆಂಪೋ ಟ್ರಾವೆಲರ್ ಮಧ್ಯೆ ಸರಣಿ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು 50 ವರ್ಷದ ಲೀಲಾವತಿ, 33 ವರ್ಷದ ಚೈತ್ರಾ, 10 ವರ್ಷದ ಸಮರ್ಥ್, 12 ವರ್ಷದ ದೀಪ್ತಿ, 10 ವರ್ಷದ

ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಶಂಕೆ : ಬೇಲೂರಿನ ಪಂಪ್‍ಹೌಸ್ ರಸ್ತೆಯಲ್ಲಿ ನಡೆದ ಘಟನೆ

ಪತಿ-ಪತ್ನಿಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಪತಿಯನ್ನು ಬರ್ಭರವಾಗಿ ಹತ್ಯೆ ಮಾಡಿದ್ದಾನೆ ಎನ್ನುವ ಘಟನೆ ಬೇಲೂರು ಪಟ್ಟಣದ ಪಂಪ್ಹೌಸ್ ರಸ್ತೆಯಲ್ಲಿ ನಡೆದಿದೆ. ಅಶ್ವಿನಿ (36) ಕೊಲೆಯಾಗಿರುವ ಮಹಿಳೆ. ಆರೋಪಿ ಪತಿ ಜಗದೀಶ್ ತಲೆಮರಿಸಿಕೊಂಡಿದ್ದಾನೆ. ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹರಿರಾಂಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಾಲೆಯಿಂದ ಬಂದಂತ ಮಕ್ಕಳು ಬೀಗ ತೆಗೆದು ನೋಡಿದಾಗ ತಾಯಿ ಕೊಲೆಯಾಗಿರುವುದು ಕಂಡುಬಂದಿದೆ. ಅಕ್ಕಪಕ್ಕದವರಿಗೆ

ಆಲೂರಿನ ಪ.ಪಂ. ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ : ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪರದಾಟ

ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಪಟ್ಟಣದ ಕೊನೆ ಪೇಟೆಯಿಂದ ಕೆಇಬಿ ಸರ್ಕಲ್ ತನಕ ರಸ್ತೆಯ ಎರಡೂ ಬದಿಗಳಲ್ಲಿ ದ್ವಿಚಕ್ರ ವಾಹನ ಹಾಗೂ 4 ಚಕ್ರದ ಲಘು ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ, ಸಾರ್ವಜನಿಕರು ಹಾಗೂ ಪ್ರತಿನಿತ್ಯ ವಿವಿಧ ಇಲಾಖೆಗಳಿಗೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಾಹನ ಪಾರ್ಕಿಂಗ್ ಸಮಸ್ಯೆ ದೊಡ್ಡ ತಲೆನೋವಾಗಿದೆ. ಪಟ್ಟಣದ ರಸ್ತೆಯು ಕಿರಿದಾಗಿದ್ದು ರಸ್ತೆಯ ಎರಡೂ ಬದಿಗಳಲ್ಲಿ ಅಗತ್ಯಕ್ಕೆ

ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.  ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು ಪಡೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 

ಬೇಲೂರಿನಲ್ಲಿ ಹೆಚ್ಚುತ್ತಿರುವ ಮತಾಂತರ ಚಟುವಟಿಕೆ

ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತಿದ್ದರಿಂದ ಪ್ರಾರ್ಥನ ಮುಂಭಾಗದ ಗೇಟ್ ಗೆ ಬೀಗ ಹಾಕಿದ ಕಾರಣ ಹೊರಭಾಗದಲ್ಲಿ ನಿಂತು ಮತಾಂತರ ಗೊಳ್ಳಲು ಪ್ರೇರಣೆಯಾಗಿದ್ದ

ಇಂದಿನಿಂದ ಹಾಸನಾಂಬೆ ದೇವಿ ದರ್ಶನ : 2 ಡೋಸ್ ಲಸಿಕೆ ಕಡ್ಡಾಯ

ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ ಎಂದರು. ಸಾರ್ವಜನಿಕರಿಗೆ ಅ.29 ರಿಂದ ನ.5ರ ವರೆಗೆ ಪ್ರತಿ

ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ: ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ ನೀಡಲಾಯಿತು. ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಮ್ಯಾರಥಾನ್ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡಲು ಇದೊಂದು ಉತ್ತಮ ಕಾರ್ಯಕ್ರಮ. ಬಹಳ ಅದ್ಭುತವಾಗಿ ಸ್ಮಾರ್ಟ್ ಸಿಟಿಯಿಂದ

ಪಶುಸಂಗೋಪನಾ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲ

ಸತತ ಐದು ವರ್ಷದಿಂದ ಕೆ.ಹೊಸಕೋಟೆಯ ಪಶುಸಂಗೋಪನ ಆಸ್ಪತ್ರೆಯು ವೈದ್ಯರನ್ನೇ ನೋಡದ ಹೋಬಳಿ ಆಸ್ಪತ್ರೆ……ರೈತರ ಗೋಳು ಕೇಳುವವರು ಯಾರು? ಆಲೂರು :ಆಲೂರು ತಾಲೂಕು ಕೆ. ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲಿ ಒಂದು ಪಶು ಸಂಗೋಪನ ಆಸ್ಪತ್ರೆ ಕೆಲವು ವರ್ಷಗಳ ಹಿಂದೆಯೇ ನಿರ್ಮಾಣ ವಾಗಿದೆ.ಆದರೆ ಇದರ ಪರಿಸ್ಥಿತಿಯನ್ನು ನೋಡುವುದಾದರೆ ಈ ಆಸ್ಪತ್ರೆಗೆ 5 ವರ್ಷದಿಂದ ಯಾವುದೇ ಡಾಕ್ಟರ್ ಇಲ್ಲಿಗೆ ನೇಮಿಸಿರುವುದಿಲ್ಲ. ಇಲ್ಲಿ ಒಬ್ಬ ಸಹಾಯಕರು

ಕಾರು ಮತ್ತು ಆಟೋ ನಡುವೆ ಪರಸ್ಪರ ಡಿಕ್ಕಿ ಆಟೊ ಚಾಲಕ ಸ್ಥಳದಲ್ಲೇ ಸಾವು

ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು , ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇತರರು ಕೂಡ ಗಾಯಗೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ಆನಂತರ