Home Archive by category kadaba

ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ಇನ್ನಿಲ್ಲ

ಬೆಂಗಳೂರು, ಡಿ.20- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ ೧೬ರಂದು ಹನುಮಾನ್ ನಗರದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿಕಟಪೂರ್ವ ಸಂಚಾಲಕರು, ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು (ರಿ.) ಇದರ ಸಹಕಾರ್ಯನಿರ್ವಹಣಾಧಿಕಾರಿಯಾಗಿರುವ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದ

ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ

ಕಳಾರದಲ್ಲಿ ಆತ್ಮಹತ್ಯೆ ಯತ್ನ; ಚಿಕಿತ್ಸೆ ಫಲಿಸದೆ ಯುವಕ ಸಾವು

ಕಡಬ ಪೊಲೀಸರಿಂದ ಯುಡಿಆರ್ ಪ್ರಕರಣ ದಾಖಲು ಕಡಬ: ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್ (54) ಅವರು ನೀಡಿದ ದೂರಿನ ಮೇರೆಗೆ, ಅವರ ಪುತ್ರ ರಾಕೇಶ್ (36) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ರಾಕೇಶ್ ಅವರು ಕಡಬದ ಕಳಾರದಲ್ಲಿ ದ್ವಿಚಕ್ರ ವಾಹನ ಗ್ಯಾರೇಜ್ ನಡೆಸುತ್ತಿದ್ದು, ತನ್ನ ಪತ್ನಿ ಹಾಗೂ ಸ್ನೇಹಿತನ ನಡುವೆ ಮೊಬೈಲ್ ಸಂಪರ್ಕವಿರುವ ವಿಚಾರ ತಿಳಿದ ಹಿನ್ನೆಲೆ ತೀವ್ರ

ಕಡಬ ತಾಲೂಕಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ಸಾಮಾಜಿಕ ಸೇವಾ ಕಾರ್ಯಕ್ರಮ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ವರ್ಗ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ವತಿಯಿಂದ ಕಡಬ ಪಟ್ಟಣದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ

ಕಡಬ: ಜೀಪು ಪಲ್ಟಿಯಾಗಿ ಕೃಷಿಕ ಸಾವು

ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025- 26 ನೇ ಸಾಲಿನ ಮಂತ್ರಿ ಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮವು ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜ್ ಕಡಬ, ಇಲ್ಲಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ವಾಸುದೇವ ಗೌಡ. ಕೆ ಇವರು ಪ್ರಜೆಗಳೇ ಪ್ರಭುಗಳಾಗುವ ಈ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ದೃಷ್ಟಿಯಲ್ಲಿ ಹಾಗೂ

ಕಡಬ: ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಡಬ:ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2025 -26 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರು ಪ್ರಾಸ್ತಾವಿಕ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಾಳೆ(ಮೇ17) ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಗಾರ

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಎಲ್ಲಾ ಸಮುದಾಯದ ಪ್ರಸ್ತುತ ಸಾಲಿನ ಪ್ರೌಢ ಶಿಕ್ಷಣದಲ್ಲಿ 9 ನೇ ತರಗತಿ, 10 ನೇ ತರಗತಿ ಮತ್ತು 10 ನೇ ತರಗತಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿ.ಯು.ಸಿ ಮತ್ತು ದ್ವಿತೀಯ ಪಿ.ಯು.ಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮೇ.17 ರಂದು ಮುಂದಿನ ಶಿಕ್ಷಣ ಮತ್ತು ಉದ್ಯೋಗವಕಾಶಗಳು, ಉದ್ಯಮಶೀಲತೆ & ಕೌಶಲ್ಯಾಭಿವೃದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ

ಸುಬ್ರಹ್ಮಣ್ಯ: ಕನ್ನಡ ಚಿತ್ರನಟ ದೇವರಾಜ್ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಹ್ಮಣ್ಯ : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್ ,ಅವರ ಸುಪುತ್ರ ಪ್ರಜ್ವಲ್ ದೇವರಾಜ್ , ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಸಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಸುಬ್ರಹ್ಮಣ್ಯದ ರಾಜಕೀಯ ಮುಖಂಡರಾದ ಗೋಪಾಲ