Home Archive by category karavali (Page 10)

ಸ್ವಿಜರ್‌ಲ್ಯಾಂಡ್ : ಜ್ಯೂರಿಚ್‌ ಜಾವೆಲಿನ್ ಎಸೆತ ಬೆಳ್ಳಿಗೆ ತಳ್ಳಲ್ಪಟ್ಟ ನೀರಜ್ ಚೋಪ್ರಾ

ಭಾರತದ ನೀರಜ್ ಚೋಪ್ರಾ ಅವರು ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು.ಇದು ಡೈಮಂಡ್ ಲೀಗ್ ಪಂದ್ಯಾವಳಿಯಲ್ಲಿ ನೀರಜ್ ಚೋಪ್ರಾರಿಗೆ ದಕ್ಕಿರುವ ನಾಲ್ಕನೆಯ ಪದಕವಾಗಿದೆ. ಕೊನೆಯ ಮೂರರಲ್ಲಿ ಬೆಳ್ಳಿ ಹಿಡಿದ ಅವರು ರಜತ ಹ್ಯಾಟ್ರಿಕ್ ಗಳಿಸಿದರು. 2022 ರ ಡೈಮಂಡ್ ಲೀಗ್‌ನಲ್ಲಿ ಮಾತ್ರ ಅವರು

ಬ್ರಹ್ಮಾವರ; ಸಾಲಿಕೇರಿ ಯುವಕರ ತಂಡ ಗಣೇಶೋತ್ಸವದಲ್ಲಿ ವೇಷ ತೊಟ್ಟು ಮಗುವಿನ ಹೃದಯದ ಚಿಕಿತ್ಸೆಗೆ ಆರ್ಥಿಕ ಸಂಗ್ರಹ

ಸನಾತನ ಧರ್ಮ ಆಚರಣೆಯ ಪೂಜೆ ಉತ್ಸವಗಳು ಪರೋಕ್ಷವಾಗಿ ನೂರಾರು ಕೈಗಳಿಗೆ ಉದ್ಯೋಗ ಆರ್ಥಿಕ ಸ್ವಾವಲಂಭನೆಯಾಗಿದೆ. ಬ್ರಹ್ಮಾವರ ಬಳಿಯ ಸಾಲಿಕೇರಿಯ ಯುವಕರ ಒಂದು ತಂಡ ಫ್ರೇಂಡ್ಸ್ ಕ್ಲಬ್ ಹೆಸರಿನಲ್ಲಿ ಗಣೇಶ ಚೌತಿಯ ಸಂದರ್ಬದಲ್ಲಿ ನಾನಾ ವೇಷ ಧರಿಸಿ ಬಂದ ಹಣದಿಂದ ಮಹತ್ತರ ಕಾರ್ಯಕ್ಕೆ ಮುಂದಾಗಿದೆ. 1.5 ತಿಂಗಳ ಮುದ್ದು ಶಿಶುವಿಗೆ ತುರ್ತು ಹೃದಯಚಿಕಿತ್ಸೆಗೆ ಹಣ ಸಂಗ್ರಹ ಮಾಡಿ ತೀರಾ ಬಡಕುಟುಂಬದ ಮಗುವಿನ ಪೋಷಕರೀಗೆ ನೀಡುವ ಘನ ಉದ್ದೇಶದಿಂದ ಗುರುವಾರ ಬೆಳಿಗ್ಗೆ ಯುವಕರ ತಂಡ

ಅತಿ ಹೆಚ್ಚು ಜಿಲ್ಲೆಗಳು ಇರುವ ರಾಜ್ಯ

ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ 41, ಬಿಹಾರ 38, ತಮಿಳುನಾಡು38, ಮಹಾರಾಷ್ಟ 36, ಅಸ್ಸಾಂ 35. ಛತ್ತೀಸಗಡ, ತೆಲಂಗಾಣ, ಗುಜರಾತ್ ರಾಜ್ಯಗಳು ತಲಾ ೩೩ ಜಿಲ್ಲೆಗಳನ್ನು ಹೊಂದಿವೆ.

ಉಜ್ಬೆಕಿಸ್ತಾನ :ಓಬಿ ರಕ್ಮತ್ ಓಬಿರಾಯನ ಕಾಲದ ಮರ್ಮಗಲ್ಲುಗಳು

ಉಜ್ಬೆಕಿಸ್ತಾನದ ಓಬಿ ರಕ್ಮತ್ ಉತ್ಖನನದಲ್ಲಿ ದೊರೆತ ಕಲ್ಲುಗಳು ಪುರಾತತ್ವಜ್ಞರ ಬಾಣದ ಕಲ್ಪನೆಯನ್ನು ಗರಿಗೆದರುವಂತೆ ಮಾಡಿವೆ.ಫ್ರಾನ್ಸಿನ ಬೋರ್ಡೆಕ್ ವಿಶ್ವವಿದ್ಯಾನಿಲಯದ ತಂಡವು ಉಜ್ಬೆಕಿಸ್ತಾನದ ಈ ಕಲ್ಲುಗಳ ಬಗೆಗೆ ಹ್ಯೂಗ್ಸ್ ಪ್ಲಿಸನ್ ನೇತೃತ್ವದಲ್ಲಿ ಅಧ್ಯಯನ ಮಾಡಿ ಫಲಿತ ಪ್ರಕಟಿಸಿದೆ.ಓಬಿ ರಕ್ಮತ್ ಉತ್ಖನನದಲ್ಲಿ ಕಲ್ಲನ್ನು ತೆಳ್ಳಗೆ ಕತ್ತಿಯಂತೆ ಬಳಸಲು ಮಾಡಿದ್ದು ಹಾಗೂ ಇತರ ಕಲ್ಲಿನ ಆಯುಧಗಳು ಸಿಕ್ಕಿವೆ. ಅವುಗಳಲ್ಲಿ ಬಹು ಸಂಖ್ಯೆಯಲ್ಲಿ ಸಿಕ್ಕ ಮುಕ್ಕೋಣ

ಪುತ್ತೂರು :ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ.ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು.

ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ” ಆಮಂತ್ರಣ ಬಿಡುಗಡೆ…

ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಯನ್ನು ಸೆ.21 ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಯುವಜನತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ‘ಗುರು ಸಂದೇಶ ಸಾಮರಸ್ಯ ಜಾಥಾ’ದ ಆಮಂತ್ರಣ ಪತ್ರಿಕೆ ಬಿಡುಗಡೆ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ನಡೆಯಿತು.ರಘು ಪೂಜಾರಿ ಕಲಂಜೆ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರವೀಣ್ ಎಂ. ಪೂಜಾರಿ ಅವರು, ನಾರಾಯಣಗುರು ಸಂದೇಶ

ಮೂಡುಬಿದಿರೆ ; ಸಾವ೯ಜನಿಕ ಶ್ರೀ ಗಣೇಶೋತ್ಸವ ಹಸಿರು ಹೊರೆಕಾಣಿಕೆ ಮೆರವಣಿಗೆ

ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್

ಮೂಡುಬಿದಿರೆ :ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2025

ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

ಉಡುಪಿ:ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ವತಿಯಿಂದ ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ಕಾರ್ಯಕ್ರಮ

ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ ಪೂಜಾರಿ ಜಾಥಾ ಕಾರ್ಯಕ್ರಮದಲ್ಲಿ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟ ಸ್ಪರ್ಧೆ

ಮೂಡುಬಿದಿರೆ ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ 4ಕಿಮೀ ಓಟದಲ್ಲಿ ದಿಶಾ ಆರನೇ ಸ್ಥಾನ ಪಡೆದರು.ಆ ಮೂಲಕ 14 ಹಾಗೂ 17 ವರ್ಷ