Home Archive by category karavali (Page 2)

ಡಿ.12ಕ್ಕೆ ಬಹುನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ

ತಟಸ್ಥವಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ! ಸದನದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಪದಗ್ರಹಣ: ಕಾರ್ಮಿಕರಿಗೆ ಉಚಿತ ಕಾನೂನು ನೆರವು ಘಟಕ ರಚನೆ ಘೋಷಣೆ

ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC) ಜಿಲ್ಲಾ ಯುವ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಅವರು ಪದಗ್ರಹಣ ಮಾಡಿದ್ದು, ಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ ಕಾನೂನು ಸಮಸ್ಯೆಗಳಿಗೆ ಉಚಿತ ಕಾನೂನು ಸಲಹೆ ಮತ್ತು ಅಗತ್ಯವಿದ್ದರೆ ಉಚಿತ ಮೊಕದ್ದಮೆ ಸೌಲಭ್ಯ ಒದಗಿಸಲು ಒಂದು ಕಾನೂನು ನೆರವು ಘಟಕವನ್ನು ರೂಪಿಸುವುದಾಗಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಪದಗ್ರಹಣ ಸಮಾರಂಭದ ಬಳಿಕ ಮಾತನಾಡಿದ ಅವರು,

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ — ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟನೆ

ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರವು ಡಿಸೆಂಬರ್ 08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟನೆಯಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ. ಅವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ, ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ಈ ಶಿಬಿರವನ್ನು ಸಂಸ್ಕೃತ ಭಾರತೀ ಕಾಸರಗೋಡು–ಮಂಗಳೂರು ಗ್ರಾಮಾಂತರ ವಿಭಾಗದ ಪ್ರಶಿಕ್ಷಕಿಯಾಗಿರುವ

ರಾಷ್ಟ್ರೀಯ ಈಜುಸ್ಪರ್ಧೆಯಲ್ಲಿಆಯ್ಕೆಯಾದ ಮಂಗಳಾ ಈಜು ಕ್ಲಬ್ ಸದಸ್ಯೆಯರಾದ ಚಾರ್ವಿ ಎಂ ಹಾಗೂ ಪ್ರಾಪ್ತಿ ಜೆ.ಪಿ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಸದಸ್ಯೆಯಾದ ಕು| ಚಾರ್ವಿ ಎಂ (ಲೇಡಿಹಿಲ್ಲ್ ವಿಕ್ಟೋರಿಯ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿನಿ) ಇವರು 14 ವರ್ಷದ ಬಾಲಕಿಯರ ವಿಭಾಗದಲ್ಲಿ 2 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿದಂತೆ ಒಟ್ಟು 5 ಪದಕಗಳನ್ನು ಮತ್ತು ಮಂಗಳಾ ಈಜು ಕ್ಲಬ್ನ ಇನ್ನೋರ್ವ ಸದಸ್ಯೆಯಾದ ಕು| ಪ್ರಾಪ್ತಿ ಜೆ.ಪಿ. (ಸೈಂಟ್ ಅಲೋಸಿಯಸ್ ಹೈಯರ್ ಪ್ರೈಮರಿ ಸ್ಕೂಲ್,

ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ೨೦೨೫ರ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಳ್ಳಾರಿಯ ಲೋಹಿಯಾ ಪ್ರಕಾಶನದ ಚೆನ್ನಬಸವಣ್ಣ ಅವರಿಗೆ, ಧಾರವಾಡದ ಹಿರಿಯ ಸಾಹಿತಿ ಡಾ.ಜಿ.ಎಂ. ಹೆಗಡೆ ಅವರ ದತ್ತಿನಿಧಿಯ

ಜುಡಿತ್ ಓಲ್ಗ ಮಾರ್ಗರೇಟ್ ಕ್ರಾಸ್ತಾ ಇವರಿಗೆ ಪೊಲೀಸ್ ಇಲಾಖೆಯ ವತಿಯಿಂದ ಸನ್ಮಾನ

ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂ.ಡಿ.ಎಂ.ಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ದಿನಾಂಕ 6.12.2025 ರಂದು

ನಂದಾ ದೀಪ ಸೇವಾ ಟ್ರಸ್ಟ್ ವತಿಯಿಂದ ದಾನಿಗಳ ನೆರವಿನಿಂದ ದಿನಸಿ ವಿತರಣೆ

ಕಾಪು:ನಂದಾ ದೀಪ ಸೇವಾ ಟ್ರಸ್ಟ್ ನ ಸದಸ್ಯರಾದ ರವಿ ಶೆಟ್ಟಿ ಪಡುಬಿದ್ರಿಯವರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ಕಾಪುವಿನ ತೀರಾ ಬಡತನದಿಂದ ಬಳಲುತ್ತಿರುವ ಗಂಗಮ್ಮ ಶೆಟ್ಟಿಯವರಿಗೆ ದಿನಸಿ ಸಾಮಾನುಗಳನ್ನು ದಿನಾಂಕ 08/12/2025 ರ ಸೋಮವಾರದಂದು ವಿತರಣೆ ಮಾಡಲಾಯಿತು. ಕಳೆದ 3 ತಿಂಗಳಿಂದ ಗಂಗಮ್ಮ ಶೆಟ್ಟಿಯವರಿಗೆ ಮನೆಯ ದಿನಸಿ ಸಾಮಾನುಗಳನ್ನು ನೀಡುತ್ತಾ ಬರುತ್ತಿದ್ದು ಈ ತಿಂಗಳ ದಿನಸಿಯನ್ನು ನಂದಾ ದೀಪ ಸೇವಾ ಟ್ರಸ್ಟ್ ನ ಸದಸ್ಯರಾದ ಸಾದಿಕ್ ಕಂಚಿನಡ್ಕ ವತಿಯಿಂದ

ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಗಂತ್ ವಿ ಎಸ್ ಗೆ ಈಜು ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ

ಪುತ್ತೂರು: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI), ಡೈರೆಕ್ಟೊರೇಟ್ ಆಫ್ ಎಜುಕೇಶನ್, GNCT ಆಫ್ ಡೆಲ್ಲಿ ಇದರ ಆಶ್ರಯದಲ್ಲಿದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ನ 30 ರಿಂದ ಡಿ 5 ರವರೆಗೆ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ 2025 – 26 ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ದಿಗಂತ್ ವಿ ಎಸ್ 100ಮೀ ಬ್ಯಾಕ್ ಸ್ಟ್ರೋಕ್ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

ವಿಕಲ ಚೇತನರಿಗೆ ಸೌಲಭ್ಯಗಳನ್ನು ತಲುಪಿಸಿ: ನ್ಯಾ. ಜೈಬುನ್ನಿಸಾ |ಐಕ್ಯಂ ಸಂಸ್ಥೆಯಲ್ಲಿ ವಿಕಲಚೇತನರ ದಿನಾಚರಣೆ

ಮಂಗಳೂರು : ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಸೀನಿಯರ್ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ಜೈಬುನ್ನಿಸಾ ಅವರು ಹೇಳಿದರು. ಅವರು ಮಂಗಳೂರಿನ ಕುಲ ಶೇಖರ ಕಲ್ಪನೆಯಲ್ಲಿ ಐಕ್ಯಂ ವಿಕಲಚೇತನರ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ವಿಕಲಚೇತನರ ದಿನಾಚರಣೆಯ