ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ
ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್
ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.
ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ ಪೂಜಾರಿ ಜಾಥಾ ಕಾರ್ಯಕ್ರಮದಲ್ಲಿ
ಮೂಡುಬಿದಿರೆ ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ 4ಕಿಮೀ ಓಟದಲ್ಲಿ ದಿಶಾ ಆರನೇ ಸ್ಥಾನ ಪಡೆದರು.ಆ ಮೂಲಕ 14 ಹಾಗೂ 17 ವರ್ಷ
ಸಂಸ್ಕೃತ ಭಾಷೆಯು ಸಮುದ್ರದ ಆಳದಿಂದ ಹುಟ್ಟುವ ಮುತ್ತಿನಂತೆ. ಮುತ್ತನ್ನು ಪಡೆಯಲು ಚಿಪ್ಪನ್ನು ಒಡೆದು ನೋಡುವ ಅಗತ್ಯವಿದ್ದಂತೆ ಸಂಸ್ಕೃತವನ್ನು ಅರಿಯಲು ಅದರ ಪಾಠಪುಸ್ತಕದ ಚಿಪ್ಪುಗಳನ್ನು ಮೀರಿ ಒಳನೋಟ ಬೀರಿದರೆ ಅದರ ನಿಜವಾದ ಮೌಲ್ಯವು ನಮ್ಮ ಜೀವನವನ್ನು ಅಂದಗೊಳಿಸುತ್ತದೆ.ಭಾಷೆಯು ವ್ಯಕ್ತಿಗೆ ಆತ್ಮವಿಶ್ವಾಸ ತುಂಬಿ ನೈತಿಕ ನೆಲೆಯಲ್ಲಿ ಬದುಕಿಗೆ ಪ್ರೇರಣೆಯಾಗಿ ಜೀವನದ ಎಲ್ಲಬಾಗಿಲುಗಳನ್ನು ತೆರೆಯುವ ಕೀಲಿಕೈ ಇದ್ದಂತೆ. ಭಾರತೀಯ ಜ್ಞಾನ ಪರಂಪರೆಗಳ ಮೂಲಾಧಾರವಾದ
ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 25-08-2025 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಶಾಲಾ ವಠಾರದಲ್ಲಿ ಸಂಭ್ರಮದಲ್ಲಿ ನಡೆಯಿತು ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರತು, ಸೋಲು–ಗೆಲುವು ಮುಖ್ಯವಲ್ಲ.
ಜೀರಿಗೆ ಬೆಳೆಯ ಹಳೆಯ ದಾಖಲೆ ಈಜಿಪ್ತಿನಲ್ಲಿ ಸಿಕ್ಕಿದ್ದರೂ ಲೋಕದಲ್ಲಿ ಈಗ ಅತಿ ಹೆಚ್ಚು ಜೀರಿಗೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ ಭಾರತ.ಭಾರತವು ಜಾಗತಿಕ ಉತ್ಪಾದನೆಯ 60 ಶೇಕಡಾ ಜೀರಿಗೆ ಬೆಳೆಯುತ್ತದೆ. ಭಾರತದ ಒಟ್ಟು ಜೀರಿಗೆ ಬೆಳೆಯಲ್ಲಿ 65 ಶೇಕಡಾ ರಾಜಸ್ತಾನದಲ್ಲಿ ಬೆಳೆಯುತ್ತದೆ. ಭಾರತವು ಬೆಳೆದ ಜೀರಿಗೆಯಲ್ಲಿ ೬೦ ಶೇಕಡಾದಷ್ಟನ್ನು ಬ್ರಿಟನ್, ಯುಎಸ್ಎ ಮೊದಲಾದ ದೇಶಗಳಿಗೆ ರಫ್ತು ಮಾಡುತ್ತದೆ. ಐದು ಪ್ರಮುಖ ಜೀರಿಗೆ ಬೆಳೆಯುವ ದೇಶಗಳು ಮತ್ತು ಪ್ರಮಾಣ




























