ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ , ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗದಣದಲ್ಲಿ ಡಿ.25 ಮತ್ತು 26 ರಂದು ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಡಿ.25 ಗುರುವಾರದಂದು ಖ್ಯಾತ ಲೇಖಕಿ ಬಾನು ಮುಷ್ತಾಕ್ ರವರ ಕತೆಯಾಧಾರಿಸಿ ಡಾ.ಎಂ.ಗಣೇಶ್ ನಿರ್ದೇಶಿಸಿದ ಹೃದಯದ ತೀರ್ಪು ಎಂಬ
ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಪ್ರಫುಲ್ಲ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕಿನ
ಮೂಡುಬಿದಿರೆ : ಯುವಕರ ತಂಡವೊಂದು ಪೆಟ್ರೋಲ್ ಬಂಕ್ ನ ಸಿಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಹಲ್ಲೆಗೊಳಗಾಗಿರುವ ಸಿಬಂದಿಗಳಾದ ಸುರೇಶ್, ಮೌನೇಶ್ ಮತ್ತು ಪ್ರವೀಣ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎರಡು ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರು ಯುವಕರ ತಂಡವು ಸಿಬಂದಿ ಸುರೇಶ್ ಎಂಬಾತನ ಬಳಿ ಮಾತನಾಡಿ ಹಲ್ಲೆ ನಡೆಸಿದ್ದು ಈ ಸಂದಭ೯ ಅಲ್ಲೇ ಇದ್ದವರು ಹಿಂತಿರುಗಿ ಹೊಡೆದಿದ್ದಾರೆ. ಗಾಯಗೊಂಡಿರುವ
ಮೂಡುಬಿದಿರೆ : ಮೈಸೂರು ವಿಶ್ವವಿದ್ಯಾನಿಲಯವು 2024 – 25 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಎಮ್. ಎ ಪರೀಕ್ಷೆಯಲ್ಲಿ ಮೂಡುಬಿದಿರೆಯ ಅಯನಾ.ವಿ.ರಮಣ್ ಚಿನ್ನದ ಪದಕದೊಂದಿಗೆ ತೇರ್ಗಡೆಯಾಗಿದ್ದಾರೆ.ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಈ ಉನ್ನತ ವ್ಯಾಸಂಗ ನಡೆಸಿದ ಅಯನಾ. ವಿ. ರಮಣ್ ‘ ಅಮೆರಿಕನ್ ಲಿಟರೇಚರ್ ‘ವಿಷಯದಲ್ಲಿ ಗೋಲ್ಡ್ ಮೆಡಲ್ ಗೆದ್ದ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ
ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಕೀರ್ತನ್ KP ರವರು ಭಾರತೀಯ ವಾಯುಸೇನೆಯ ನೇಮಕಾತಿಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಉತ್ತೀರ್ಣರಾಗಿ ಆಯ್ಕೆಗೊಂಡಿರುತ್ತಾರೆ, ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳ ಆಯ್ಕೆ ಪ್ರಕ್ರಿಯೆಗಳಿಗೆ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣನಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಕೀರ್ತನ್ ರವರ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಮಂಗಳೂರಿನ ಅಮೃತ ವಿದ್ಯಾಲಯಂ ನಲ್ಲಿಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಹುಮುಖ ಪ್ರತಿಭೆಯೊಂದಿಗೆ ಉಜ್ವಲ ಭವಿಷ್ಯವನ್ನು ಕಲ್ಪಿಸಬಲ್ಲ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಂಪನ್ಮೂಲ ವ್ಯಕ್ತಿಗಳಿಂದ ದಿನಾಂಕ 9-12-2025 ರಂದು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕರಾವಳಿ ಕರ್ನಾಟಕದ ಮಾತಾಅಮೃತಾನಂದಮಯಿ ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಜ್ಯೋತಿ
ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಳಿಕ
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ
ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC) ಜಿಲ್ಲಾ ಯುವ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಅವರು ಪದಗ್ರಹಣ ಮಾಡಿದ್ದು, ಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ ಕಾನೂನು ಸಮಸ್ಯೆಗಳಿಗೆ ಉಚಿತ ಕಾನೂನು ಸಲಹೆ ಮತ್ತು ಅಗತ್ಯವಿದ್ದರೆ ಉಚಿತ ಮೊಕದ್ದಮೆ ಸೌಲಭ್ಯ ಒದಗಿಸಲು ಒಂದು ಕಾನೂನು ನೆರವು ಘಟಕವನ್ನು ರೂಪಿಸುವುದಾಗಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಪದಗ್ರಹಣ ಸಮಾರಂಭದ ಬಳಿಕ ಮಾತನಾಡಿದ ಅವರು,
ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರವು ಡಿಸೆಂಬರ್ 08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟನೆಯಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ. ಅವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ, ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ಈ ಶಿಬಿರವನ್ನು ಸಂಸ್ಕೃತ ಭಾರತೀ ಕಾಸರಗೋಡು–ಮಂಗಳೂರು ಗ್ರಾಮಾಂತರ ವಿಭಾಗದ ಪ್ರಶಿಕ್ಷಕಿಯಾಗಿರುವ




























