Home Archive by category kundapura (Page 3)

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕನ್ನಡಿಗ ಗುರುರಾಜ ಪೂಜಾರಿಗೆ ಕಂಚು

ಇಂಗ್ಲೆಂಡ್‍ನ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್‍ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ

ಕಡಲ್ಕೊರೆತ, ಸೌಪರ್ಣಿಕಾ ನದಿ ನೆರೆಹಾವಳಿ : ಸಂಕಷ್ಟ ನಿವಾರಣೆಗೆ ವರಾಹ ದೇವರಲ್ಲಿ ಪ್ರಾರ್ಥನೆ

ಬೈಂದೂರು: ಬೈಂದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಪರೀತ ರಕ್ಕಸ ಅಲೆಗಳ ಕಡಲ್ಕೊರೆತ ಸೌಪರ್ಣಿಕಾ ನದಿಯ ನೆರೆಹಾವಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗಿ ಸಾಕಷ್ಟು ಮುಗ್ಧ ಜೀವಗಳು ಮತ್ತು ಜಾನುವಾರುಗಳು ದಿನದಿಂದ ದಿನಕ್ಕೆ ಸಾವನ್ನಪ್ಪುತ್ತಿವೆ. ಅಪಘಾತಗಳು ಹೆಚ್ಚುತ್ತಿರುವುದರಿಂದ ಜನರು ಭೀತರಾಗಿದ್ದು ಸಂಕಷ್ಟದ ನಿವಾರಣೆಗೆ ಜುಲೈ 28ರಂದು ನಡೆಯುವ ಬೃಹತ್ ಜಾತ್ರಾ ಮಹೋತ್ಸವದಲ್ಲಿ ಮಾರಸ್ವಾಮಿ ವರಾಹ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದರ

ಜೆಸಿಐ ವಲಯ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ

ಜೆಸಿಐನ ವಲಯ ಎಕ್ಸ್‍ವಿ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನವು ವಿಟ್ಲದಲ್ಲಿ ನಡೆದಿದ್ದು,ಜೇಸಿಐ ಕುಂದಾಪುರ ಸಿಟಿ ಘಟಕವು ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಗೆ ಭಾಜನವಾಗಿದೆ. ಮಾತ್ರವಲ್ಲದೆ ಸುಮಾರು ಒಂದೂವರೆ ಲಕ್ಷದಷ್ಟು ದೇಣಿಗೆಯನ್ನು ಜೇಸಿಐ ಇಂಡಿಯಾ ಫೌಂಡೇಶನ್ ಗೆ ನೀಡುವುದರ ಮೂಲಕ,ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ವಲಯದಲ್ಲೇ ಟಾಪ್ ಒನ್ ಘಟಕವಾಗಿ ಮೂಡಿಬಂದಿದೆ. ಈ ಪ್ರಶಸ್ತಿಗಳನ್ನು ಸಮ್ಮೇಳನದಲ್ಲಿ ಜೇಸಿಐ ಭಾರತದ ರಾಷ್ಟ್ರೀಯ

ಬೈಂದೂರಿನ ನಾವುಂದಲ್ಲಿ ಅಪಘಾತದಲ್ಲಿ ಮೂವರಿಗೆ ಗಾಯ ಒರ್ವನ ಸ್ಥಿತಿ ಗಂಭೀರ

ಬೈಂದೂರು: ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಬಸ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತು. ಕಾರು ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್

ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಂಪನ್ನ

ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ 26 ನೇ ವರ್ಷದ ಸುಪ್ರಸಿದ್ಧ ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಕಂಬಳವು ಭಾನುವಾರ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನೆರವೇರಿತು.ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಸಾಂಪ್ರದಾಯಿಕ ಕಂಬಳೊತ್ಸವವನ್ನು ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರು ಗುತ್ತು ಪ್ರಫುಲ್ಲ ಶೆಟ್ಟಿಯವರು ಉದ್ಘಾಟಿಸಿದರು. ಬೆಳಿಗ್ಗೆ ಸಾಂಪ್ರದಾಯಿಕವಾಗಿ ನಡೆದ ಬಂಟ ಕೋಲದ ಬಳಿಕ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಯಿನಾಥ್ ಶೇಟ್ ದೈವಜ್ಞ ಬ್ರಾಹ್ಮಣ ಸಮಾಜ ಕುಂದಾಪುರ ವತಿಯಿಂದ ಸನ್ಮಾನ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಯಿನಾಥ ಶೇಟ್ ಅವರನ್ನು ದೈವಜ್ಞ ಬ್ರಾಹ್ಮಣ ಸಮಾಜ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು. ಇದೆ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸ್ವಾತಿ ಜಿ ಶೇಟ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾತ್ವಿಕ್ ಕೋಟೇಶ್ವರ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜ್ಯುವೆಲ್ ಅಸೋಸಿಯೇಷನ್ ಕುಂದಾಪುರ ಇದರ ಅಧ್ಯಕ್ಷರಾದ ಸತೀಶ್ ಶೇಟ್ ನಾಡ, ಅನುಗ್ರಹ

ಗಾಂಜಾ ಸಹಿತ ಆರೋಪಿ ವಶಕ್ಕೆ: ಕೆಜಿ ಗೂ ಅಧಿಕ ಪ್ರಮಾಣದ ಗಾಂಜಾ ವಶ

ಕುಂದಾಪುರ: ಅಕ್ರಮವಾಗಿ ಗಾಂಜಾ ಹೊಂದಿದ್ದ ವ್ಯಕ್ತಿಯೋರ್ವನನ್ನು ಕುಂದಾಪುರ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾರವಾರ ಬಿಣಗಾ ನಿವಾಸಿ ಜಾಫರ್ ಗುಡುಮಿಯಾ (28) ಬಂಧಿತ ಆರೋಪಿ. ಆರೋಪಿಯಿಂದ ಸುಮಾರು 4೦,೦೦೦ ರೂ ಮೌಲ್ಯದ ೧ಕೆಜಿ 810 ಗ್ರಾಂ ತೂಕದ ಗಾಂಜಾ, 1೦,೦೦೦ ಮೌಲ್ಯದ 1ಗ್ರಾಂ ತೂಕದ ಬ್ರೌನ್ ಶುಗರ್, 2 ಮೊಬೈಲ್ 1,5೦೦ ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ಅವರು ಸಿಬ್ಬಂದಿಗಳೊಂದಿಗೆ

ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ ಐವರು ಅರೆಸ್ಟ್!

ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತನೋರ್ವನ ಆತ್ಮಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಅವರ ಪತ್ನಿ ಸೇರಿದಂತೆ ಐವರನ್ನು ಶಂಕರನಾರಾಯಣ ಪೊಲೀಸರು ಬಂಧಿಸುವಲ್ಲಿ

ಕುಂದಾಪುರ: ತಲವಾರಿನಿಂದ ಹಲ್ಲೆ: ಗಾಯಾಳು ಯುವಕರು ಆಸ್ಪತ್ರೆಗೆ ದಾಖಲು

ಕುಂದಾಪುರ: ಬಾರ್ ಮ್ಯಾನೇಜರೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.ತಲವಾರು ದಾಳಿಗೊಳಗೊಳಗಾದ ಕಾಲ್ತೋಡು ನಿವಾಸಿ ರವಿ ಶೆಟ್ಟಿ ಹಾಗೂ ಪ್ರಶಾಂತ್ ಶೆಟ್ಟಿ ಇದೀಗ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಶಿರೂರು ಗ್ರಾಮದ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದ ಸಚಿವ ಅರಗ ಜ್ಞಾನೇಂದ್ರ

ಕುಂದಾಪುರ : ರಾಜ್ಯ ಗ್ರಹ ಸಚಿವ ಅರಗ ಜ್ಞಾನೇಂದ್ರ ಅವರು ಮಂಗಳವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಪ್ರಫುಲ್ಲಾ ಹಾಗೂ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಗೆ ಚಂಡಿಕಾ ಹೋಮ ಸಹಿತ ವಿಶೇಷ ಪೂಜೆ ಸಲ್ಲಿಸಿದರು.ಸಚಿವ ಅರಗ ಜ್ಞಾನೇಂದ್ರ ಅವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ದೇವಸ್ಥಾನದ