Home Archive by category kundapura (Page 6)

ಗಾಳಿ ಮಳೆಯಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್‌ಗೆ ಹಾನಿ

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಅರಬ್ಬಿ‌ ಸಮುದ್ರದಲ್ಲಿ ‌ಬಾರಿ ಗಾಳಿ ಮಳೆಯಾಗಿದ್ದು, ಕುಂದಾಪುರದಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಈ ಗಾಳಿ ಮಳೆಗೆ ಸಿಲುಕಿ‌‌ ಹಾನಿಗೊಳಗಾದ ಘಟನೆ ‌ನಡೆದಿದೆ. ಕುಂದಾಪುರ ತಾಲೂಕಿನ ಕಂಚಗೋಡಿನ ಹೊಸಪೇಟೆ ನಿವಾಸಿಯಾದ ನಾಗ ಖಾರ್ವಿಯವರಿಗೆ ಸೇರಿದ ಯಕ್ಷೇಶ್ವರಿ ಅನುಗ್ರಹ ದೋಣಿಯು ಗಾಳಿ ಮಳೆಗೆ ಸಿಲುಕಿ‌‌ 

ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ಬಿಡೆವು: ಸುರೇಶ್ ಕಲ್ಲಾಗರ್

ಕುಂದಾಪುರ: ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಆರೊಂಭಗೊಂಡ ದಿನದಿಂದಲೂ ಯಾವ ಸರ್ಕಾವೂ ಕಟ್ಟಡ ಕಾರ್ಮಿಕರ ಹಣದ ಮೇಲೆ ಕಣ್ಣು ಹಾಕಿಲ್ಲ. ಆದರೆ ಇದೀಗ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಹಣವನ್ನು ಲೂಟಿ ಮಾಡಲು ಮುಂದಾಗಿದೆ. ಬರೋಬ್ಬರಿ ಎರಡು ಸಾವಿರದ ಅರವತ್ತಾರು ಕೋಟಿ ರೂ. ಹಣವನ್ನು ವಿವಿಧ ಯೋಜನೆಗಳಿಗೆ ಮಂಜೂರು ಮಾಡಲು ತಯಾರಿ ನಡೆಸುತ್ತಿದೆ. ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ನಾವು ಬಿಡುವುದಿಲ್ಲ ಎಂದು ತಾಲೂಕು ಕಟ್ಟಡ ಮತ್ತು ಇತರೆ

ಅಧಿಕಾರಿಗಳು ಲಂಚದ ಪ್ರವೃತ್ತಿಯಿಂದ‌ ಹೊರಬರಬೇಕು: ಸಂಸದ ಬಿವೈ ರಾಘವೇಂದ್ರ

ಕುಂದಾಪುರ:  ಬೈಂದೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖಾಧಿಕಾರಿಗಳ ಕೆಲಸದ ವೇಗ ನಿರೀಕ್ಷಿತ ಮಟ್ಟದಲ್ಲಿ ಇರದ ಕಾರಣ ಅನುಷ್ಠಾನ ಕುಂಠಿತವಾಗುತ್ತಿದೆ. ಕಂದಾಯ ಇಲಾಖೆಯಲ್ಲಿ ಹಣ ನೀಡದೆ ಕೆಲಸ ಆಗುವುದಿಲ್ಲ. ಅಧಿಕಾರಿಗಳು ಈ ಪ್ರವೃತ್ತಿಯಿಂದ ಹೊರಬರಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಬೈಂದೂರಿನಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ

ಉಡುಪಿಯಲ್ಲಿ ಪಾಸಿಟಿವಿಟಿ ದರ ಹೆಚ್ಚಳ ಹಿನ್ನೆಲೆ: ವೀಕೆಂಡ್ ಕರ್ಫ್ಯೂ ಜಾರಿ: ಸಚಿವ ಕೋಟಾ

ಕುಂದಾಪುರ: ಪಾಸಿಟಿವಿಟಿ ದರ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉಡುಪಿ ಜಿಲ್ಲೆಯನ್ನು ಸೇರಿಸಲಾಗಿದೆ. ವಾರಾಂತ್ಯ ಕರ್ಫ್ಯೂನಿಂದ ಜನಸಾಮಾನ್ಯರಿಗೆ ತೊಂದರೆಗಳಾಗುವುದು ಸತ್ಯ. ಆದರೆ ಪಾಸಿಟಿವಿಟಿ ರೇಟ್ ಹೆಚ್ಚಳವಾಗದಂತೆ ಜಾಗೃತೆ ವಹಿಸಬೇಕಾದ ಜವಾಬ್ದಾರಿ ನಮಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಪ್ರವಾಸಿ ಮಂದಿರದಲ್ಲಿ ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿವೇಶನದ ಭೂ ಸರ್ವೆ ಯ ಕುರಿತು ಸಂಬಂಧಪಟ್ಟ

ಧಾರ್ಮಿಕ ಆಚರಣೆಯ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ: ಸಚಿವ ವಿ. ಸುನೀಲ್ ಕುಮಾರ್

ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟಲು ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ಒಂದಷ್ಟು ಮಾರ್ಗಸೂಚಿಗಳನ್ನು ಕಳುಹಿಸಿದೆ. ಧಾರ್ಮಿಕ ಆಚರಣೆಯನ್ನು ನಡೆಸುವ ಬಗ್ಗೆ ಸರಕಾರಕ್ಕೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಆಚರಣೆಯ ಜತೆಗೆ ನಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಆಚರಣೆಗಳು ಎಷ್ಟು ವೈಭವವಾಗಿ ನಡೆಯಬೇಕು ಎನ್ನುವುದನ್ನು ಅರಿತು, ಪ್ರಧಾನಿಯವರು ತಿಳಿಸಿದಂತೆ ನಾವೇ ಸ್ವತಃ ಸ್ವಯಂ ನಿಯಂತ್ರಣ ಮಾಡಿಕೊಳ್ಳಬೇಕು. ಸರಕಾರದ

ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ: ಆರೋಪಿ ಸಹಿತ ಗಾಂಜಾ ವಶಕ್ಕೆ

ಕುಂದಾಪುರ ತಾಲೂಕು ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ. ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿ ಸಹಿತ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ ಮಾರ್ಗದರ್ಶನದಲ್ಲಿ ಡಿಎಸ್ಪಿ, ಸಿಪಿಐ ಸಂತೋಷ್ ಕಾಯ್ಕಿಣಿ, ಪ್ರೊಬೆಷನರಿ ಪಿಎಸ್‌ಐ ವಿನಯ್ ಕುಮಾರ್ ಮತ್ತು ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕರಾದ ನಂಜಾನಾಯ್ಕ್ ಎನ್, ನೇತ್ರತ್ವದಲ್ಲಿ ಅಪಾದಿತರಾದ ನಿಶಾನ್ ಮತ್ತು ಪ್ರಥಮ್ ಕುಮಾರ್ ಗಾಂಜಾ ಮಾರಾಟ

ಆಕ್ಸಿಜನ್ ಉತ್ಪಾದನಾ ಘಟಕ ವೀಕ್ಷಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರ: ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ನಿಮಿಷಕ್ಕೆ ಐನೂರು ಲೀಟರ್ ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕ ಈಗಾಗಲೇ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಉದ್ಘಾಟನೆಗೆ ಪೆಟ್ರೋಲಿಯಂ ಸಚಿವರು ಬರುತ್ತಾರೆಂಬ ಮಾಹಿತಿ ಇದೆ. ಹೀಗಾಗಿ ಸ್ವಲ್ಪ ದಿನದ ಬಳಿಕ ಈ ಘಟಕವನ್ನು ಉದ್ಘಾಟನೆ ಮಾಡುತ್ತೇವೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ

ಮೋದೀಜಿ ಮಂತ್ರಿ ಮಂಡಲಕ್ಕೆ ಸಣ್ಣ ಕಪ್ಪುಚುಕ್ಕೆಯೂ ಬಾರದಂತೆ ಕೆಲಸ ಮಾಡುವೆ: ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರ: ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷದವರು ನೂತನ ಸಚಿವರ ಪರಿಚಯಕ್ಕೂ ಅವಕಾಶ ನೀಡದೆ ಗದ್ದಲ ಎಬ್ಬಿಸಿದ್ದರಿಂದ ನಮ್ಮನ್ನು ನಾವು ಪರಿಚಯಿಸಿಕೊಳ್ಳಲು ಜನಾಶೀರ್ವಾದ ಯಾತ್ರೆ ಆರಂಭಿಸಿದ್ದೇವೆ. ನರೇಂದ್ರ ಮೋದೀಜಿಯವರ ಸರ್ಕಾರಕ್ಕೆ ಚಿಕ್ಕ ಕಪ್ಪು ಚುಕ್ಕೆಯೂ ಬಾರದಂತೆ ಅತ್ಯಂತ ಪಾರದರ್ಶಕವಾಗಿ ಮಂತ್ರಿಯಾಗಿ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ ಸಚಿವೆಯಾಗಿ ಆಯ್ಕೆಗೊಂಡ ಬಳಿಕ

ಅಪಘಾತವಾದರೂ ಆಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು!

ಕುಂದಾಪುರ: ಪದವಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್ ಗಳೆರಡರ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡು ಆಂಬುಲೆನ್ಸ್ ಮೂಲಕವೇ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ಕಾಲೇಜು ವಿದ್ಯಾರ್ಥಿಗಳಾದ ಶಿರೂರು ನಿವಾಸಿ ಮಸಾಯಿದ್ ಮತ್ತು ಗಂಗೊಳ್ಳಿ ನಿವಾಸಿ ವಾಜಿದ್ ಗಾಯಗೊಂಡು ಆಂಬುಲೆನ್ಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು. ಜಿಲ್ಲೆಯ ಗಡಿಭಾಗವಾದ ಶಿರೂರಿನಿಂದ

‘ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದಡಿ ಮುನ್ನೆಡಯಬೇಕಿದೆ-ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು

ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾವೆಲ್ಲರೂ, ಪ್ರಕೃತಿಯ ಮುಂದೆ ನಮ್ಮ ಸೀಮಿತ ಸಾಮರ್ಥ್ಯ ಮತ್ತೆ ಮತ್ತೆ ಸಾಬೀತಾಗಿರುವುದನ್ನು ಮನಗಂಡು, ‘ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದಡಿ ಮುನ್ನೆಡಯಬೇಕಿದೆ. ಕರಾವಳಿಯ ನೆಲ- ಜಲದ ಸಂರಕ್ಷಣೆಯೊಂದಿಗೆ ಕೃಷಿ – ಪ್ರವಾಸೋದ್ಯಮ, ಯುವಜನ ಸಬಲೀಕರಣ – ಕೌಶಲಾಭಿವೃದ್ಧಿಯ ಕ್ಷೇತ್ರಗಳಿಗೆ ಆದ್ಯತೆ ನೀಡಲು ಆಡಳಿತ ಬದ್ಧ ಎಂದು ಕುಂದಾಪುರ ಉಪ ವಿಭಾಗದ ಸಹಾಯಕ