Home Archive by category mangaluru

ಸೌಹಾರ್ದತೆ ಬದುಕಿನ ಧ್ಯೇಯವಾಗಲಿ: ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ

ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ

ಪತ್ರಿಕಾ ದಿನಾಚರಣೆ :ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ – ಸದಾಶಿವ ಉಳ್ಳಾಲ್

ಮಂಗಳೂರು : ಕನ್ನಡದ ಪ್ರಥಮ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಅಭಿಪ್ರಾಯಪಟ್ಟರು.ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರಿನ ಬಲ್ಮಠದ ಥೀಯೊಲಾಜಿಕಲ್ ಕಾಲೇಜು ಆವರಣದಲ್ಲಿ ಏರ್ಪಡಿಸಿದ ಸಂಪಾದಕ

ಡಾ|ತುಂಬೆ ಮೊಯ್ದಿನ್ ಅವರಿಗೆ ಪೋಲಂಡ್‌ನ ಲ್ಯುಬ್ಲಿನ್ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್

ತುಂಬೆ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ|ತುಂಬೆ ಮೊಯ್ದಿನ್ ಅವರಿಗೆ ಪೋಲಂಡ್‌ನ ಲ್ಯುಬ್ಲಿನ್ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ. ಜಾಗತಿಕ ಆರೋಗ್ಯ ಸೇವೆ, ವ್ಯೆದ್ಯಕೀಯ ಶಿಕ್ಷಣ ಹಾಗೂ ಸಮುದಾಯ ಅಭಿವೃದ್ಧಿ ಉದ್ದೇಶದ ಸಂಶೋಧನಾ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಆಧರಿಸಿ ಈ ಗೌರವ ನೀಡಲಾಗಿದೆ. ಇದು ಅವರಿಗೆ ಲಭಿಸುತ್ತಿರುವ ಐದನೇ ಗೌರವ ಡಾಕ್ಟರೇಟ್. ಸಮುದಾಯ ಪ್ರಗತಿಗೆ ಡಾ|ಮೊಯ್ದಿನ್ ಅವರ ಪ್ರಯತ್ನ ಮತ್ತು ಅದಕ್ಕಾಗಿ ತುಂಬೆ ಇಂಟರ್‌ನ್ಯಾಷನಲ್

ಮಂಗಳೂರು: ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರದಲ್ಲಿ ಯೋಗ ತರಬೇತಿ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಹಾಗೂ ಆವಿಷ್ಕಾರ ಯೋಗ ಮಂಗಳೂರು ಇದರ ಸಹಯೋಗದಲ್ಲಿ ಜೂನ್ 17 ರಿಂದ 21ರ ವರೆಗೆ ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರ ಬಿಜೈ ಮತ್ತು ಬಂಟ್ಸ್ ಹಾಸ್ಟೆಲ್‌ನಲ್ಲಿ ಯೋಗ ದಿನದ ಸಾಮಾನ್ಯ ಪ್ರೊಟೋಕಾಲ್‌ನ ಯೋಗ ತರಬೇತಿಯು ನಡೆಯಲಿದೆ. ಈ ಶಿಬಿರ ಉಚಿತವಾಗಿದ್ದು ಸಾರ್ವಜನಿಕರು ತರಬೇತಿಗೆ ಭಾಗವಹಿಸಬಹುದು. ತರಬೇತಿ ಸಿಗುವ ಸಮಯ ಬೆಳಿಗ್ಗೆ 6 ರಿಂದ 7 ಕ್ಕೆ, 11ರಿಂದ 12ರವರೆಗೆ ಹಾಗೂ ಸಂಜೆ 6 ರಿಂದ 7ಕ್ಕೆ. ಹೆಸರು ನೊಂದಾಯಿಸಲು ಸಂಪರ್ಕಿಸಿ

ಯಕ್ಷ ಧ್ರುವ ಪಟ್ಲ ಫೌಂಡೇಷನ್ ದಶಮಾನೋತ್ಸವ ಸಂಭ್ರಮ – ಒಂದೇ ದಿನದಲ್ಲಿ 2158 ಕಲಾವಿದರಿಗೆ ಅಂಚೆ ಅಪಘಾತ ವಿಮಾ ಸುರಕ್ಷೆ : ಪಟ್ಲ ಫೌಂಡೇಷನ್ ವತಿಯಿಂದ ಪ್ರಾಯೋಜಕತ್ವ

ಕಳೆದ ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಯಕ್ಷ ಧ್ರುವ ಪಟ್ಲ ಫೌಂಡೇಷನ್ ನ ದಶಮಾನೋತ್ಸವದ ಅಂಗವಾಗಿ 2158 ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕಲಾವಿದರಿಗೆ ಅಂಚೆ ಅಪಘಾತ ವಿಮೆಯನ್ನು ಮಾಡಿಸುವ ಮೂಲಕ ಅವರ ಕುಟುಂಬಕ್ಕೆ ತಲಾ 10 ಲಕ್ಷದ ಸುರಕ್ಷತೆಯನ್ನು ಒದಗಿಸಲಾಯಿತು. ವಿಮಾ ಪ್ರೀಮಿಯಂ ನ್ನು ಪಟ್ಲ ಫೌಂಡೇಷನ್ ಪ್ರಾಯೋಜಿಸಿದ್ದು ಮಂಗಳೂರು ಅಂಚೆ ವಿಭಾಗದ ಸುಮಾರು 150 ಸಿಬ್ಬಂದಿಗಳು ಈ ಕಾರ್ಯಕ್ರಮವನ್ನು ಅತ್ಯಂತ ಶಿಸ್ತು ಮತ್ತು ಸಂಯಮದಿಂದ

ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆ: ಸಾನ್ವಿ ಶರಣ್ ಶೆಟ್ಟಿಗೆ ರಜತ ಪದಕ

ಮಂಗಳೂರು: ತಮಿಳುನಾಡಿನ ಕೆಎಸ್‌ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ ಸ್ಪರ್ಧೆಯೊಡ್ಡಿ ಉತ್ತಮ ಸಾಧನೆ ಮೆರೆದಿದ್ದಾರೆ.

ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಲ್ಲಿ ವಿಶಿಷ್ಟವಾಗಿ ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳೂರಿನ ಫಳ್ನೀರ್‌ನ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ ಗ್ರಾಹಕರಿಗೆ ಗಿಡಗಳನ್ನ ವಿತರಿಸುವ ಮೂಲಕ ಪರಿಸರ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಈಗಾಗಲೇ ಚಿನ್ನಾಭರಣ ಹಾಗೂ ವಜ್ರಾಭರಣ ಮಾರಾಟದಲ್ಲೇ ಹೆಸ್ರು ಪಡೆದುಕೊಂಡಿರುವ ನಗರದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಹಕರಿಗೆ ಗಿಡಗಳನ್ನು ವಿತರಿಸುವ ಮೂಲ ಕ ಪರಿಸರ ಪ್ರೇಮವನ್ನ ತೋರಿಸಿದರು. ಹಲವಾರು

ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್‌ ಸ್ಕೂಲ್‌ ನ ಮಾಲಕ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್‌ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.ಈ ಬಳಿಕ

ಮಂಗಳೂರು : ವಾಮಂಜೂರಿನ ಎಸ್‌ಜೆಇಸಿಯಲ್ಲಿ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ವಿದಾಯ ಕಾರ್ಯಕ್ರಮ

ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್‌ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಸರಳಾಯ ಅವರು ಅಭಿನಂದನಾ ಭಾಷಣ ಮಾಡಿದರು.ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸರ್ವಿಕಾ ಮತ್ತು

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್- 6 ಮಂದಿಯ ಬಂಧನ

ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ ನಗರ ಆಯುಕ್ತರು, ಪ್ರಚೋದನಾಕಾರಿ ಪೋಸ್ಟ್‌ಗಳಿಗೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು