Home Archive by category mangaluru (Page 20)

ಬೈಂದೂರು : ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಶಾಲಾ ವಠಾರದಲ್ಲಿ ಸಂಭ್ರಮದಲ್ಲಿ ನಡೆಯಿತು ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಕಾರ್ಯಕ್ರಮವನ್ನು

ಬ್ರಹ್ಮಾವರ :ಬಿರ್ತಿಯ ಅರ್ವಿಶ್ ಕೈಚಳಕದಲ್ಲಿ ಮೂಡಿದ ಗಣಪ

ವಿಶ್ವದಾದ್ಯಂತ ಮುಂದಿನವಾರದಿಂದ ನಡೆಯುವ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ಗಣಪತಿ ವಿಗ್ರಹ ರಚನೆಗಳು ಬಹುತೇಕ ಕಡೆಯಲ್ಲಿ ಅಂತಿಮ ಹಂತ ನಡೆಯುತ್ತಿದ್ದರೆ ಬ್ರಹ್ಮಾವರ ಬಿರ್ತಿಯ 1 ನೇತರಗತಿಯ ವಿದ್ಯಾರ್ಥಿ ಅರ್ವಿಶ್ ಶಾಲಾ ಸಮಯದ ಬಳಿಕ ಮನೆಯಲ್ಲಿ ನಾನಾ ಗಣಪತಿಯನ್ನು ರಚನೆ ಮಾಡಿ ಗಮನಸೆಳೆಯುತ್ತಿದ್ದಾನೆ. ಎಸ್ ಎಂ ಎಸ್.ಸಿಬಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಈತ ಬಾಲ್ಯದಿಂದಲೂ ಚಿತ್ರ ರಚನೆ ರಕ್ತಗತವಾಗಿ ಬಂದಿದ್ದು, ಕಳೆದ 2 ವರ್ಷದಿಂದ ಚೌತಿಯ

ತೋಕೂರು: ಗಿಡಗಳನ್ನು ಮಕ್ಕಳಂತೆ ಪೋಷಿಸಿ ಬೆಳಸಿ – ಶ್ರೀ ನಿಂಗಪ್ಪ ವಾಲಿ

ತೋಕೂರು: ಮೂಲ್ಕಿ ಹೋಬಳಿ ಒಂಬತ್ತು ಮಾಗಣೆ ಮುಂಡಾಲ ಸಮಾಜ ಸೇವಾ ಟ್ರಸ್ಟ್ (ರಿ) ಓಂಕಾರೇಶ್ವರಿನಗರ 10ನೇ ತೋಕೂರು, ಹಳೆಯಂಗಡಿ ಇದರ ಪ್ರಾಯೋಜಕತ್ವದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು, ಓಂಕಾರೇಶ್ವರಿ ಮಂದಿರ ತೋಕೂರು ಮತ್ತು ಅರಣ್ಯ ಇಲಾಖೆ ಮೂಡಬಿದ್ರಿ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಮತ್ತು ಉಚಿತ ಸಸಿ ವಿತರಣಾ ಕಾರ್ಯಕ್ರಮವನ್ನು ಶ್ರೀ ಓಂಕಾರೇಶ್ವ ರೀ ಮಂದಿರದ ಅಧ್ಯಕ್ಷರಾದ ಶ್ರೀ ಸದಾಶಿವ ಟಿ ಕುಂದರ್ ಇವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು,

ಮಂಗಳೂರು : ಅಂತರಾಷ್ಟ್ರೀಯ ವೇದಿಕೆಯಲ್ಲಿ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಕೀರ್ತಿ ತಂದ ಮಂಗಳೂರಿನ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್

ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆ (ಆಗಸ್ಟ್ 13ರಿಂದ 17, ವಿಯೆಟ್ನಾಂ)ನಲ್ಲಿ ನಡೆದಿತ್ತು ಈ ಸ್ಪರ್ಧೆಗೆ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಇಂದು ಮಂಗಳೂರಿಗೆ ಬಂದಿಲಿದಿದ್ದು ಮಂಗಳೂರಿನ ವಿಮಾನ ನಿಲ್ದಾಣ ದಲ್ಲಿ ಹೂಗುಚ್ಚ ನೀಡಿ ಕುಟುಂಸ್ಥರು ಸ್ವಾಗತಕೋರಿದರು.ಮಂಗಳೂರು ಕುಲಶೇಖರ ಮೂಲದ, ಕೇವಲ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್, ಅಂತರಾಷ್ಟ್ರೀಯ ಫ್ಯಾಷನ್ ಮತ್ತು ಪ್ರತಿಭಾ ವೇದಿಕೆಯಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದಾನೆ. ಬೆಜೈಯ ಲೂರ್ಡ್ಸ್

ಮೂಡುಬಿದಿರೆ:ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಇದರ ಜನ ಮಂಗಳ ಕಾರ್ಯಕ್ರಮ ದಡಿಯಲ್ಲಿ ಕಡಂದಲೆ ಗ್ರಾಮದ ವಿಕಲಚೇತನ ಕೀರ್ತಿಕಾ ಅವರಿಗೆ ವಾಟರ್ ಬೆಡ್ ನ್ನು ತಾಲೂಕಿನ ಯೋಜನಾಧಿಕಾರಿ ಧನಂಜಯ ಅವರು ವಿತರಿಸಿದರು.ಒಕ್ಕೂಟದ ಪದಾಧಿಕಾರಿ ಸುಶೀಲ ಹಾಗೂ ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಹಾಗೂ ಸೇವಾಪ್ರತಿನಿಧಿ ವಸಂತಿ ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು

ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಶ್ ಎಂ.ಕಾಮತ್ ಗೆ  ಗೋಲ್ಡ್ ಅವಾರ್ಡ್ 

ಉಡುಪಿ: ನಗರದ ಹೆಸರಾಂತ ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಶ್ ಎಂ.ಕಾಮತ್ ಕೀನ್ಯಾದ ಮಸೈಮಾರಾದಲ್ಲಿ ಸೆರೆಹಿಡಿದಿರುವ ಎರಡು ಚೀತಾಗಳು ತನ್ನ ಬೇಟೆಯನ್ನು ಬೆನ್ನು ಹತ್ತುವ “ಹಂಗರ್ ವರ್ಸಸ್ ಹೋಪ್” ಛಾಯಾಚಿತ್ರಕ್ಕೆ ಓರಾ ಡಿ ಫ್ರೇಮ್ ಸರ್ಕ್ಯುಟ್ ಆಯೋಜಿಸಿದ ಛಾಯಾಚಿತ್ರ ಸ್ಪರ್ಧೆಯ ವನ್ಯಜೀವಿ ವಿಭಾಗದಲ್ಲಿ ಕ್ಲಬ್ ಗೋಲ್ಡ್ ಅವಾರ್ಡ್ ಪಡೆದಿರುತ್ತಾರೆ. ಐವತ್ತಕ್ಕೂ ಹೆಚ್ಚು ದೇಶಗಳ ಛಾಯಾಗ್ರಾಹಕರು ಭಾಗವಹಿಸಿರುವ ಈ ಸ್ಪರ್ಧೆಯು ಪ್ರತಿಷ್ಟಿತ ಎಫ್. ಐ. ಎ. ಪಿ

ಮಂಗಳೂರು: ಪಂಪವೆಲ್ ರೋಹನ್ ಸ್ಕ್ವೇರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ

ತುಳು ಭಾಷೆಗೆ ಶೀಘ್ರ ಅಧಿಕೃತ ಸ್ಥಾನಮಾನ ಲಭಿಸಲಿ : ಚಂದ್ರಕಲಾ ನಂದಾವರ

ಮಂಗಳೂರು: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಅವರು ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಸಹಯೋಗದಲ್ಲಿ ಶನಿವಾರ ಉರ್ವ ತುಳು ಭವನದಲ್ಲಿ ಆಯೋಜಿಸಿದ

ಕುಮಾರ್ ಪೆರ್ನಾಜೆ, ಸೌಮ್ಯ ದಂಪತಿಗಳು ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿಗೆ ಆಯ್ಕೆ

ವಿಶಿಷ್ಟ ವಿಶೇಷ ಬರಹಗಾರ, ಖ್ಯಾತ ಜೇನು ಕೃಷಿಕರಾದ ಶ್ರೀ ಕುಮಾರ್ ಪೆರ್ನಾಜೆ ಮತ್ತು ಶ್ರೀಮತಿ ಸೌಮ್ಯ ಆವರು ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ “ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ” ಗೆ ಆಯ್ಕೆಯಾಗಿದ್ದಾರೆ. ದಿನಾಂಕ 3- 8 – 2025 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಖ್ಯಾತ ಸಾಹಿತಿಗಳಾದ ಪ್ರಭಾಕರ

ಮಂಗಳೂರು : ಆ.8ರಂದು ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ…!

ಮಂಗಳೂರು ; ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಗ್ರಾಮೋತ್ಸವದ ಪ್ರಯುಕ್ತ 2001ರಿಂದ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, 2025ರ ಗ್ರಾಮೋತ್ಸವದ ಕಾರ್ಯಕ್ರಮಗಳು ದಿನಾಂಕ 08.08.2025ರಂದು ಶ್ರೀ ಸಂಸ್ಥಾನದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜರಗಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಸುರೇಶ್ ರೈ ಯವರುವ ತಿಳಿಸಿದ್ದಾರೆ. ಗ್ರಾಮೋತ್ಸವದ ಪೂರ್ವಭಾವಿಯಾಗಿ ಈಗಾಗಲೇ ವಿವಿಧ ಭಾಗಗಳಲ್ಲಿ ವೈದ್ಯಕೀಯ ಮತ್ತು ರಕ್ತದಾನ