Home Archive by category mangaluru (Page 24)

ಮಂಗಳೂರು: ಮಿಸ್ಟರ್, ಮಿಸ್, ಮಿಸ್ಟರ್ ತುಳುನಾಡು-2025 ಸೀಸನ್ 4

ಅಲ್ಲೊಂದು ಸುಂದರ ಫ್ಯಾಷನ್ ಜಗತ್ತು ಅನಾವರಣಗೊಂಡಿತು. ಇನ್ನು ಕಲರ್ ಕಲರ್ ಬಟ್ಟೆಗಳಿಂದ ಯುವಕ-ಯುವತಿಯರಿಂದ ರ್‍ಯಾಂಪ್ ವಾಕ್ ಕೂಡ ಎಲ್ಲರ್ ಗಮನ ಸೆಳೆಯಿತು. ಎನ್‌ಬಿ ಗ್ರೂಫ್ ಅರ್ಪಿಸುವ ಅಸ್ತ್ರ ಮಿಸ್ಟರ್, ಮಿಸ್, ಮಿಸ್ ಟೀನ್, ಮಿಸೆಸ್ ತುಳುನಾಡು ಸೀಸನ್ – 4ರ ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಉಚ್ಚಿಲದ ಕಿಯಾಂಜಾ ಗಾರ್ಡನ್ ನ ವೇದಿಕೆಯಲ್ಲಿ ಸಂಭ್ರಮದಿಂದ

ರೂ.1200 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ
ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ

113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ. ಕಳೆದ

ಮಂಗಳೂರು : ಎ.ಜೆ.ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಪರೂಪದ ಗಾಲಿಯಂ-68 ಟ್ರೈವಿಹೆಕ್ಸಿನ್ PET-CT ಸ್ಕ್ಯಾನ್ ಯಶಸ್ವಿ ನಿರ್ವಹಣೆ

ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ಅಪರೂಪದ ಮತ್ತು ಸುಧಾರಿತ PET-CT ಸ್ಕ್ಯಾನ್  (Gallium-68 Trivehexin) ಯಶಸ್ವಿಯಾಗಿ ನಡೆಸಿರುವುದನ್ನು ಘೋಷಿಸುತ್ತದೆ. ಇದು ನಿರ್ಧಾರಾತ್ಮಕ ಇಮೇಜಿಂಗ್ ಕ್ಷೇತ್ರದಲ್ಲಿ  ಮಹತ್ವದ ಮೈಲಿಗಲ್ಲಾಗಿದೆ. Gallium-68 Trivehexin ಸ್ಕ್ಯಾನ್ ಅನ್ನು ಪ್ರಾಥಮಿಕ ಹೈಪರ್‌ಪ್ಯಾರಾಥೈರಾಯಿಡಿಸಂ (PHPT) ಕಾಯಿಲೆಯಿಂದ ಪೀಡಿತ ರೋಗಿಗಳಲ್ಲಿ ಹೈಪರ್‌ಫಂಕ್ಷನಿಂಗ್

ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ 47ನೇ ವರ್ಷದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಮಂಗಳೂರು ವಿಶ್ವವಿದ್ಯಾನಿಲಯ, ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ನಲವತ್ತೇಳನೇ ವರ್ಷದ ವಾರ್ಷಿಕ ವಿಶೇಷ ಶಿಬಿರವು ಫೆ. 22ನೇ ಶನಿವಾರದಿಂದ ಫೆ. 28 ಶುಕ್ರವಾರದವರೆಗೆ ಮಂಡೆಕೋಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾನದಲ್ಲಿ ನಡೆಯುತ್ತಿದ್ದು ಈ ಶಿಬಿರವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ| ರುದ್ರಕುಮಾರ್ ಎಂ. ಎಂ.,

ಸುಳ್ಯ. ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,  v4 ನ್ಯೂಸ್  ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ‌ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ  ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅರೆಭಾಷೆಯ ಸಂಸ್ಕೃತಿ ಆಚಾರ

ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಾಲಾಲಯ ಪ್ರತಿಷ್ಠೆ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ ವಿಧಿ ವಿಧಾನಗಳನ್ನು ನಡೆಸಿ ಶ್ರೀ ಕೃಷ್ಣದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ

ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ಮೇಲ್ಛಾವಣಿ ಅಭಿವೃದ್ಧಿ – ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದ್ದು ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಾ ಬಂದಿದೆ. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು

ಮಂಗಳೂರು: ಫೆ.21ಕ್ಕೆ ಭಾವನೆಗಳೇ ಜೀವಾಳವಾಗಿರುವ “ಭಾವ ತೀರ ಯಾನ” ತೆರೆಗೆ!

ಮಂಗಳೂರು: ಆರೋಹ ಫಿಲಂಸ್ ಬ್ಯಾನರ್‌ನ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿರುವ ‘ಭಾವ ತೀರ ಯಾನ’ ಸಿನಿಮಾ ಇದೇ ತಿಂಗಳ 21ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ“ ಎಂದು ಚಿತ್ರ ನಿರ್ದೇಶಕ ಮಯೂರ್ ಅಂಬೆಕಲ್ಲು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ತಾರಾಗಣದಲ್ಲಿ ರಮೇಶ್ ಭಟ್, ವಿದ್ಯಾಮೂರ್ತಿ, ತೇಜಸ್ ಕಿರಣ್, ಆರೋಹಿ ನೈನ, ಅನೂಷಾ ಕೃಷ್ಣ, ಚಂದನಾ ಅನಂತಕೃಷ್ಣ, ಸಂದೀಪ್ ರಾಜಗೋಪಾಲ್, ಸಿತಾರಾ, ಶ್ರೀನಿವಾಸ ಕೆಸ್ತೂರ್,

ಮಂಗಳೂರು: ನಾಳೆಯಿಂದ ಮಂಗಳೂರಿನಲ್ಲಿ ಐಸ್ ಕ್ರೀಮ್ ಪರ್ಬ-2025

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆಬ್ರವರಿ 7, 8 ಮತ್ತು 9ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಅಯೋಜಿಸಲಾಗಿದೆ. 2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕಿರಣ್ ಶೆಣೈ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಮಂಗಳೂರನ್ನು ಐಸ್