Home Archive by category Manjeshwara (Page 4)

ಮಂಜೇಶ್ವರ : ತಲಪಾಡಿ ಟೋಲ್ ಗೇಟ್ ವಿಚಾರವಾಗಿ ಗಡಿನಾಡ ಕನ್ನಡಿಗರು ಗರಂ

ಮಂಜೇಶ್ವರ: ತಲಪಾಡಿ ಟೋಲ್ ಗೇಟಿನಲ್ಲಿ ಕರ್ನಾಟಕದ 5 ಕಿ.ಮೀ. ವ್ಯಾಪ್ತಿಯ ಸ್ಥಳೀಯರಿಗೆ ಉಚಿತ ಪ್ರಯಾಣಕ್ಕೆ ಅನುಮತಿಯನ್ನು ನೀಡಿದ ರೀತಿಯಲ್ಲಿ ಗಡಿನಾಡ ಕನ್ನಡಿಗರು ವಾಸವಾಗಿರುವ ಕೇರಳದ 5 ಕಿ.ಲೋ. ಮೀಟರ್ ವ್ಯಾಪ್ತಿಯಲ್ಲಿರುವವರಿಗೂ ಉಚಿತ ಪ್ರಯಾಣಕ್ಕೆ ಅನುಮತಿ ಕೋರಿ ಮಂಜೇಶ್ವರ ಗ್ರಾ.ಪಂ. ಅಧ್ಯಕ್ಷರು ಎಲ್ಲಾ ಸದಸ್ಯರು ಹಾಗೂ ಪೀಪಲ್ಸ್ ಯೂನಿಯನ್ ಆಫ್ ಮಂಜೇಶ್ವರ

ಮಂಜೇಶ್ವರ :ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಹೆಸರನ್ನು ಒಳಪಡಿಸಬೇಕು- ಉಪವಾಸ ಸತ್ಯಾಗ್ರಹ

ಮoಜೇಶ್ವರ: ಕೇರಳ ಸರಕಾರ ಕೇಂದ್ರ ಸರಕಾರಕ್ಕೆ ನೀಡಲಿರುವ ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆಯ ಹೆಸರನ್ನು ಕೂಡಾ ಒಳಪಡಿಸಬೇಕೆಂದು ಆಗ್ರಹಿಸಿ ತಿರುವನಂತಪುರ ಸೆಕ್ರಟರಿಯೇಟ್ ಮುಂಭಾಗದಲ್ಲಿ ಸಾಮಾಜಿಕ ಹೋರಾಟಗಾರ್ತಿ ದಯಾ ಬಾಯ್ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮುಸ್ಲಿಂ ಯೂತ್ ಲೀಗ್ ಮಂಜೇಶ್ವರ ಪಂಚಾಯತ್ ಸಮಿತಿಯ ವತಿಯಿಂದ ಆಹೋ ರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಯಿತು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್

ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಪ್ರತಿಭಟನೆ : 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

ಮಂಜೇಶ್ವರ: ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ 11 ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಸಮಿತಿಯ ನೇತಾರ ಸಂಜೀವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ 11 ನೇ ದಿನದ ಧರಣಿ ಸತ್ಯಾಗ್ರಹವನ್ನು ಉದ್ಯಾವರ ಶ್ರೀ ಅರಸು ಮಂಜಿಷ್ಟಾರ್ ಕ್ಷೇತ್ರದ ಪಾತ್ರಿ ರಾಜ ಬೆಲ್ಚಾಡ ರವರು ಉದ್ಘಾಟಿಸಿದರು. ಈ ಸಂದರ್ಭ ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯ ಕುಟುಂಬ ಶ್ರೀ ಸದಸ್ಯರು ಧರಣಿಯಲ್ಲಿ

ಅಡುಗೆ ಅನಿಲ ವಿತರಣೆಯಲ್ಲಿ ಅಕ್ರಮ ಆರೋಪ : ವೀಡಿಯೋ ವೈರಲ್

ಮಂಜೇಶ್ವರಂ: ಮಂಜೇಶ್ವರ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಅನಂತ ಗ್ಯಾಸ್ ಏಜೆನ್ಸಿ ಮೂಲಕ ವಿತರಿಸಲಾಗುತ್ತಿರುವ ಅಡುಗೆ ಅನಿಲ ವಿತರಣೆಯಲ್ಲಿ ತೂಕ ಕಡಿಮೆ ಇರುವುದಾಗಿ ಆರೋಪಿಸಿ ಗ್ರಾಹಕರೊಬ್ಬರು ವೀಡಿಯೋ ಒಂದನ್ನು ವೈರಲ್ ಮಾಡಿದ ಬೆನ್ನಲ್ಲೇ ಗ್ರಾಹಕರಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು.ಆದರೆ ಏಜನ್ಸಿ ಕಚೇರಿ ಮುಂಬಾಗದಲ್ಲಿ ಇರಿಸಲಾಗಿದ್ದ ತೂಕ ಕಡಿಮೆ ಕಂಡು ಬಂದ ಅಡುಗೆ ಅನಿಲವನ್ನು ಬೇರೆಯೇ ಇಡಲಾಗಿತ್ತೆಂದೂ ಅದನ್ನು ವಿತರಿಸುವ ಉದ್ದೇಶವಿರಲಿಲ್ಲವೆಂದೂ ಗ್ಯಾಸ್

ಮಂಜೆಶ್ವರ : ರಸ್ತೆ ಬದಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ

ಮಂಜೇಶ್ವರ: ಕರ್ನಾಟಕ ನಿವಾಸಿಯಾದ ಕೂಲಿ ಕಾರ್ಮಿಕನೊಬ್ಬನನ್ನು ರಸ್ತೆ ಬದಿಯಲ್ಲಿ ಗಾಯಗಳೊಂದಿಗೆ ರಕ್ತಸಿಕ್ತವಾದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕರ್ನಾಟಕ ಬೆಳ್ಗಾಂ ನಿವಾಸಿ ಬಸಪ್ಪ ರಾಜು ಸಾವನ್ನಪ್ಪಿದ ದುರ್ದೈವಿ. ಮಂಜೇಶ್ವರ ಪಾವೂರು ಸೂಪಿ ನಗರ ರಸ್ತೆ ಬದಿಯಲ್ಲಿ ದಾರಿಹೋಕನೊಬ್ಬ ಈ ದೃಶ್ಯವನ್ನು ಕಂಡು ಮಾಹಿತಿ ನೀಡಿದ್ದಾನೆ.ಎರಡು ದಿವಸಕ್ಕೆ ಮೊದಲು ಸೂಪಿ ನಗರ ನಿವಾಸಿಯೊಬ್ಬರು ಮಂಗಳೂರಿನಿಂದ ತೋಟದ ಕೆಲಸಕ್ಕಾಗಿ ಬಸಪ್ಪ ರಾಜುನನ್ನು ಕರೆ ತಂದಿದ್ದರು. ತೋಟದ

ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ರಿಟರ್ನ್ ಹಾಲ್ ಬಿರುಕು

ಮಂಜೇಶ್ವರ: ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿರುವ ಮಧ್ಯ ತಲಪ್ಪಾಡಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿರ್ಮಿಸಿರುವ ರಿಟರ್ನ್ ಹಾಲ್ ಬಿರುಕು ಬಿಟ್ಟಿರುವುರಾಗಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಯಾವುದೇ ಮಾಹಿತಿ ನೀಡದೆ ಕಾಮಗಾರಿ ಮುಂದುವರಿಸುತ್ತಿರುವ ಗುತ್ತಿಗೆದಾರರು ಬಿರುಕು ಬಿಟ್ಟಿರುವ ಬಗ್ಗೆ ಸ್ಥಳೀಯರ ಪ್ರಶ್ನೆಗಳಿಗೆ ಸ್ಪಂದಿಸದಿರುವುದು ಜನರ ಆತಂಕ ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿ

ತಲಪಾಡಿ : ಸ್ಥಳೀಯರಿಗೆ ಶಾಪವಾದ ರಸ್ತೆ ಸಮಸ್ಯೆ

ಮಂಜೇಶ್ವರ : ತಪಾಡಿಯಿಂದ ಕಾಸರಗೋಡು ತನಕದ ರಾ.ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಬೃಹತಕಾರದ ಹೊಂಡಗಳನ್ನು ಜಲ್ಲಿ ಕಲ್ಲು ಹಾಗೂ ಜಲ್ಲಿ ಹುಡಿಯನ್ನು ಹಾಕಿ ಮುಚ್ಚುತ್ತಿರುವುದು ಪ್ರಯಾಣಿಕರಿಗೂ ಸ್ಥಳೀಯರಿಗೂ ಶಾಪವಾಗಿ ಪರಿಣಮಿಸಿದೆ.ರಾಷ್ಟ್ರೀಯ ಹೆದ್ದಾರಿ ಪುನರ್ ನವೀಕರಣದ ಭಾಗವಾಗಿ ರಸ್ತೆ ನಿರ್ಮಾಣ ನಡೆಯುತ್ತಿರುವ ಭಾಗಗಳಲ್ಲಿ ಮಳೆಗಾಲದಲ್ಲಿ ಮಳೆ ನೀರು ಕಟ್ಟಿ ನಿಂತು ರಸ್ತೆ ಬಹುತೇಕ ಭಾಗಗಳಲ್ಲಿ ಕುಸಿದು ಹೋಗಿತ್ತು. ರಾ.ಹೆದ್ದಾರಿ ನಿರ್ಮಾಣದ ಕಾಮಗಾರಿಯಲ್ಲಿ ಹಲವು

ಮಂಜೇಶ್ವರ : ಶಸ್ತ್ರಾಸ್ತ್ರದೊಂದಿಗೆ ತಿರುಗಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಜೇಶ್ವರ: ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಬಂದೂಕು ಹಾಗೂ ಶಸ್ತ್ರಾಸ್ತ್ರದೊಂದಿಗೆ ಉಪ್ಪಳದಲ್ಲಿ ತಿರುಗಾಡುತಿದ್ದ ಮೂವರನ್ನು ಮಂಜೇಶ್ವರ ಎಸ್ಸೈ ಅನ್ಸಾರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಈ ತಂಡದಲ್ಲಿದ್ದ ಪ್ರಮುಖ ಆರೋಪಿ ಅಯಾಝ್ ಎಂಬಾತನನ್ನು ಆತನ ಸಹೋದರ ಪೊಲೀಸರಲ್ಲಿ ಬಲ ಪ್ರಯೋಗಿಸಿ ಬಿಡಿಸಿರುವುದಾಗಿ ಆರೋಪಿಸಲಾಗಿದೆ. ಬಳಿಕ ಹೆಚ್ಚಿನ ಪೊಲೀಸರು ಸ್ಥಳಕ್ಕಾಗಮಿಸಿ ಆಟೋ ರಿಕ್ಷಾದಲ್ಲಿದ್ದ ಇಬ್ಬರನ್ನು ಹಾಗೂ ಆಯಾಝ್ ನ ಸಹೋದರನನ್ನು ಬಂಧಿಸಿದ್ದಾರೆ.

ಮಂಜೇಶ್ವರ : ಜ್ವಲಂತ ಸಮಸ್ಯೆಗಳಿಗೆ ಕಿವಿಕೊಡದ ಅಧಿಕಾರಿಗಳು

ಮಂಜೇಶ್ವರ :ರಾಷ್ಟೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಅವೈಜ್ಞಾನಿಕ ನಿರ್ಮಾಣ ಸೇರಿದಂತೆ ಪ್ರತಿಯೊಂದು ವಿಷಯದಲ್ಲೂ ಮಂಜೇಶ್ವರದ ಕೂಗಿಗೆ ಕಿಂಚತ್ತೂ ಬೆಲೆಯನ್ನು ಕಲ್ಪಿಸದ ಅಧಿಕಾರಿಗಳ, ಜನಪ್ರತಿನಿಧಿಗಳ ಕಣ್ಣು ಮುಚ್ಚಾಲೆಯಾಟದಿಂದ ಬೇಸೆತ್ತಿರುವ ಮಂಜೇಶ್ವರದ ಸಮಾನ ಮನಸ್ಕರು ಸೇರಿ ಕೊಂಡು ಹೊಸಂಗಡಿಯ ವ್ಯಾಪಾರಿ ಭವಣದಲ್ಲಿ ಮಂಜೇಶ್ವರ ನಾಗರಿಕ ಹಿತರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ನೂತನ ಸಂಘಟನೆಯೊಂದಕ್ಕೆ ರೂಪು ನೀಡಿದ್ದಾರೆ. ಈಗಾಗಲೇ ಮಂಜೇಶ್ವರ ರೈಲು ನಿಲ್ದಾಣ

ಅವಕಾಶಗಳ ಆಕಾಶವೇ ನಮ್ಮ ಮುಂದಿದೆ : ನಟ ಪ್ರಕಾಶ್ ತೂಮಿನಾಡು

ವಿದ್ಯೆಯೂ ಕಲೆಯೂ ಜೊತೆ ಜೊತೆಯಾಗಿ ಸಾಗಲಿ. ಇಂದು ಅವಕಾಶಗಳ ಆಕಾಶವೇ ನಮ್ಮ ಮುಂದಿದೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು’ಎಂಬುದಾಗಿ ರಂಗಭೂಮಿ ಕಲಾವಿದ,ಚಲನಚಿತ್ರ ನಟ ಶ್ರೀ ಪ್ರಕಾಶ್ ತೂಮಿನಾಡು ನುಡಿದರು.ಅವರು ಮಂಜೇಶ್ವರ ಉಪಜಿಲ್ಲಾಮಟ್ಟದ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ 2022-23ನೇ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳನ್ನು ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.ಶಾಲೆಯ ಹಳೆ ವಿದ್ಯಾರ್ಥಿಯೂ ಆಗಿರುವ