Home Archive by category moodabidre

ಮೂಡುಬಿದಿರೆಯ ಯುವ ಲೇಖಕಿ ರೇಶಲ್ ಫೆರ್ನಾಂಡಿಸ್ ಗೆ ಅಂತರಾಷ್ಟ್ರೀಯ ಮನ್ನಣೆ

ಮೂಡುಬಿದಿರೆ: ಕರಾವಳಿಯ ಪ್ರತಿಭೆ, ಯುವ ಲೇಖಕಿ ಹಾಗೂ ವಾಗ್ಮಿ ರೇಶಲ್ ಫೆರ್ನಾಂಡಿಸ್ ಅವರು ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆಗಳಲ್ಲಿ ನಡೆಸುತ್ತಿರುವ ನಿರಂತರ ಸಾಧನೆಗೆ ಈಗ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ಲಭಿಸಿದೆ. ರಾಜ್ಯಮಟ್ಟದ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ ಪುರಸ್ಕೃತರಾದ ಇವರು, ತಮ್ಮ ಸಾಹಿತ್ಯಿಕ ಕೊಡುಗೆಗಳ ಮೂಲಕ ಜಾಗತಿಕ ಗಮನ

ಮೂಡುಬಿದಿರೆ: ಇಬ್ಬರು ಕೃಷಿಕ ಸಾಧಕರಿಗೆ ಮೈಸೂರು ವಿಭಾಗ ಮಟ್ಟದ ಕೃಷಿ ಪುರಸ್ಕಾರ

ದರೆಗುಡ್ಡೆಯ ನಾಗಪ್ಪ ಪೂಜಾರಿಯವರಿಗೆ ‘ಅತ್ಯುತ್ತಮ ಕೃಷಿ ಸಾಧಕ ಪುರಸ್ಕಾರ ಹಾಗೂ ಪುತ್ತಿಗೆ ಗ್ರಾಮದ ಪಾದೆಮನೆ ನಿವಾಸಿ ಗಂಗಯ್ಯ ಗೌಡ ಅವರು ‘ಅತ್ಯುತ್ತಮ ಕೃಷಿ ಕಾರ್ಮಿಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ, ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ಜನವರಿ 10, 11 ಮತ್ತು 12ರಂದು ನಡೆಯಲಿರುವ

ರಿಶಲ್ ಫೆರ್ನಾಂಡಿಸ್‌ಗೆ `ದೇಶ್ ರತ್ನಾ ಪ್ರಶಸ್ತಿ

ಮೂಡುಬಿದಿರೆ: ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನದೇಶ್ ರತ್ನಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೆಹಲಿಯಭಾರತ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ರಿಶಲ್ ಬ್ರಿಟ್ನಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಸಾಧನೆಗಳನ್ನು ಗುರುತಿಸಿ ಭಾರತೀಯ ಯುವ

ಅಂತರ್ ಜಿಲ್ಲಾ ಮಟ್ಟದ ಕ್ರೀಡಾಕೂಟ ಕೇಮಾರಿನ ರಶ್ಮಿತಾ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ : ದ.ಕ ಉಡುಪಿ ಮತ್ತು ‌ಕೊಡಗು ಅಂತರ್ ಜಿಲ್ಲಾ ಮಟ್ಟದ 18ನೇ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೇಮಾರಿನ ರಶ್ಮಿತಾ ಶೆಟ್ಟಿ ಯವರು ತ್ರಿವಿಧ ಜಿಗಿತ ಪ್ರಥಮ,ಈಟಿ ಎಸೆತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಮಾಸ್ಟರ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಲವಾರು ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿರುವ ಇವರು ಕಳೆದ ವರ್ಷವೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ವನ್ನು

ಕಾಂತಾವರ ಕನ್ನಡ ಸಂಘದ 20225ರ ಸಾಲಿನ ವಾರ್ಷಿಕ ಪ್ರಶಸ್ತಿಗಳ ಘೋಷಣೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಯನ್ನು ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ ಅವರಿಗೆ, ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗಸನ್ಮಾನ ಪ್ರಶಸ್ತಿ’ಯನ್ನು ಮಂಗಳೂರಿನ ರಂಗಕರ್ಮಿ ಶ್ರೀ ಶಶಿರಾಜ ಕಾವೂರು ಅವರಿಗೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸರೋಜಿನಿ ನಾಗಪ್ಪಯ್ಯ ಈಶ್ವರ ಮಂಗಲ ಅವರ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ

ಡಿ.25,26 ಆಳ್ವಾಸ್ ನಲ್ಲಿ ನೀನಾಸಂ ನಾಟಕಗಳು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ , ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗದಣದಲ್ಲಿ ಡಿ.25 ಮತ್ತು 26 ರಂದು ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಡಿ.25 ಗುರುವಾರದಂದು ಖ್ಯಾತ ಲೇಖಕಿ ಬಾನು ಮುಷ್ತಾಕ್ ರವರ ಕತೆಯಾಧಾರಿಸಿ ಡಾ.ಎಂ.ಗಣೇಶ್ ನಿರ್ದೇಶಿಸಿದ ಹೃದಯದ ತೀರ್ಪು ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.26 ಶುಕ್ರವಾರದಂದು ಮಲೆಯಾಳ ಮೂಲ ಜಿ. ಶಂಕರ್ ಪಿಳ್ಳೈ ರಚಿಸಿದ ,

ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಪ್ರಫುಲ್ಲ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕಿನ

ಯುವಕರ ತಂಡದಿಂದ ಪೆಟ್ರೋಲ್ ಬಂಕ್ ನ ಸಿಬಂದಿಗೆ ಹಲ್ಲೆ

ಮೂಡುಬಿದಿರೆ : ಯುವಕರ ತಂಡವೊಂದು ಪೆಟ್ರೋಲ್ ಬಂಕ್ ನ ಸಿಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಹಲ್ಲೆಗೊಳಗಾಗಿರುವ ಸಿಬಂದಿಗಳಾದ ಸುರೇಶ್, ಮೌನೇಶ್ ಮತ್ತು ಪ್ರವೀಣ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎರಡು ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರು ಯುವಕರ ತಂಡವು ಸಿಬಂದಿ ಸುರೇಶ್ ಎಂಬಾತನ ಬಳಿ ಮಾತನಾಡಿ ಹಲ್ಲೆ ನಡೆಸಿದ್ದು ಈ ಸಂದಭ೯ ಅಲ್ಲೇ ಇದ್ದವರು ಹಿಂತಿರುಗಿ ಹೊಡೆದಿದ್ದಾರೆ. ಗಾಯಗೊಂಡಿರುವ

ಅಯನಾ.ವಿ.ರಮಣ್ ಗೆ ಇಂಗ್ಲಿಷ್ ಎಮ್. ಎ ಯಲ್ಲಿ ಚಿನ್ನದ ಪದಕ

ಮೂಡುಬಿದಿರೆ : ಮೈಸೂರು ವಿಶ್ವವಿದ್ಯಾನಿಲಯವು 2024 – 25 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಎಮ್. ಎ ಪರೀಕ್ಷೆಯಲ್ಲಿ ಮೂಡುಬಿದಿರೆಯ ಅಯನಾ.ವಿ.ರಮಣ್ ಚಿನ್ನದ ಪದಕದೊಂದಿಗೆ ತೇರ್ಗಡೆಯಾಗಿದ್ದಾರೆ.ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಈ ಉನ್ನತ ವ್ಯಾಸಂಗ ನಡೆಸಿದ ಅಯನಾ. ವಿ. ರಮಣ್ ‘ ಅಮೆರಿಕನ್ ಲಿಟರೇಚರ್ ‘ವಿಷಯದಲ್ಲಿ ಗೋಲ್ಡ್ ಮೆಡಲ್ ಗೆದ್ದ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ

ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ೨೦೨೫ರ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಳ್ಳಾರಿಯ ಲೋಹಿಯಾ ಪ್ರಕಾಶನದ ಚೆನ್ನಬಸವಣ್ಣ ಅವರಿಗೆ, ಧಾರವಾಡದ ಹಿರಿಯ ಸಾಹಿತಿ ಡಾ.ಜಿ.ಎಂ. ಹೆಗಡೆ ಅವರ ದತ್ತಿನಿಧಿಯ