ಮೂಡುಬಿದಿರೆ: 2022-23ನ ಸಾಲಿನಲ್ಲಿ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಭತ್ತ( ಮುಂಗಾರು- ಮಳೆಯಾಶ್ರಿತ)ದಲ್ಲಿ ಮಹಿಳಾ ವಿಭಾಗದಲ್ಲಿ ಮೂಡುಬಿದಿರೆ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡು ಅವರು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರನ್ನು ರೂ.1.25 ಲಕ್ಷ ನಗದು ಸಹಿತ ಗೌರವಿಸಲಾಯಿತು.ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಹಾಗೂ
ಮೂಡುಬಿದಿರೆ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂಡುಬಿದಿರೆಯ ಮೂವರು ಮಹಿಳೆಯರು ಅಬ್ಬಕ್ಕ 500-ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ ಕಾರ್ಯಕ್ರಮದಲ್ಲಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಕೃತಿ ಚಿಕಿತ್ಸೆ ಹಾಗೂ ಸಮಗ್ರ ಸ್ವಾಸ್ಥ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ವಿವೇಕ್ ಆಳ್ವ, ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ, ಮೂಡುಬಿದಿರೆ ಜೈನ ಪಿಯು
ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಬಿದ್ದ ಹಸುವೊಂದನ್ನು ಮೂಡುಬಿದಿರೆಯ ಅಗ್ನಿಶಾಮಕ ದಳದ ಸಿಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರ ನಡೆದಿದೆ. ಬಡಗಮಿಜಾರಿನ ನಿವಾಸಿ ಜಯರಾಮ್ ಗೌಡ ಎಂಬುವವರಿಗೆ ಸೇರಿದ ಸುಮಾರು ೬೦ ಅಡಿ ಆಳ ಹಾಗೂ ೫ ಅಡಿ ಅಗಲದ ಬಾವಿಗೆ ಹಸು ಆಕಸ್ಮಿಕವಾಗಿ ಬಿದ್ದಿತ್ತು. ತಕ್ಷಣ ಮನೆಯವರು ಹಾಗೂ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು.ಸ್ಥಳಕ್ಕೆ ಧಾವಿಸಿದ
ಮೂಡುಬಿದಿರೆ : ಇಲ್ಲಿನ ಪುರಸಭೆಯಲ್ಲಿ ಮೂಡುಬಿದಿರೆ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಮುಖ್ಯಾಧಿಕಾರಿ ಇಂದು ಎಂ., ಪುರಸಭಾ ಕಂದಾಯ ಅಧಿಕಾರಿ ಜ್ಯೋತಿ, ಸುಧೀಶ್ ಹೆಗ್ಡೆ, ಸಮುದಾಯ ಸಂಘಟಕ ಪ್ರಸನ್ನ, ಬಿಲ್ ಕಲೆಕ್ಟರ್ ವಿಜಯಪ್ರಕಾಶ್ ಹಾಗೂ ಪೌರಕಾಮಿ೯ಕರು ಭಾಗವಹಿಸಿದ್ದರು.
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾಲೇಜಿನ ಟ್ರಸ್ಟಿ ಮೆಹಬೂಬ್ ಬಾಷಾ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಪವಿತ್ರ ದಿನವು ನಮ್ಮ ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಏಕತೆಯ ಮಹತ್ವವನ್ನು ನೆನಪಿಸುವುದಾಗಿ ಹೇಳಿದರು. ಈ ವರ್ಷವೂ ಭಾರತವು ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗಲಿ, ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಹೊಸ ಕನಸುಗಳು, ಹೊಸ ಆಶಯಗಳು
ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಕನ್ನಡ ಭವನದಲ್ಲಿ 5 ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಗುರುವಾರ ಆರಂಭಗೊಂಡಿತು. ಮಂಗಳೂರು ಪೊಲೀಸ್ ಉಪ ಆಯುಕ್ತರಾದ ನಜ್ಮಾ ಫರೂಕಿ ಶಿಬಿರವನ್ನು ಉದ್ಘಾಟಿಸಿ ಶುಭ
ಮೂಡುಬಿದಿರೆ : ದಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಜನವರಿ ಆವೃತ್ತಿಯಲ್ಲಿ ನಡೆದ ಕಂಪೆನಿ ಸೆಕ್ರಟರೀಸ್ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪ್ರೀತA ಬಸವರಾಜ್ ಪಟ್ಟಣಶೆಟ್ಟಿ (121), ದೀಕ್ಷಿತ್ ಕುಮಾರ್ (120), ಸುಜೀತ್ ರಾಘವೇಂದ್ರ ಎ (120), ಯಶವಂತ ರೆಡ್ಡಿ ಎಸ್ (111), ರುಜುಲಾ ಕೆ (110), ದಿಯಾ
ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನ ಬೆಟ್ಟು, ಪಡುಮಾರ್ನಾಡ್ ಇದರ 87ನೇ ಸೇವಾ ಯೋಜನೆಯ ಜನವರಿ ತಿಂಗಳ 2ನೇ ಯೋಜನೆಯ 10,000ವನ್ನು ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಐಶ್ವರ್ಯ ಅವರ ಚಿಕಿತ್ಸೆಗೆ ನೀಡಲಾಯಿತು. ಐಶ್ವರ್ಯ ಅವರು ತನ್ನ ಪತಿ ಜಗದೀಶ್ ಆಚಾರ್ಯ ಅವರೊಂದಿಗೆ ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಮನೆಯಿಂದ ದ್ವಿಚಕ್ರ ವಾಹನ ದಲ್ಲಿ ಹೋಗುತ್ತಿರುವಾಗ ಮುಂಡ್ಕೂರು ದ್ವಾರದ ಬಳಿ ಅತೀ ವೇಗದಲ್ಲಿ ಬರುತ್ತಿದ್ದ ಕಾರೊಂದು ಇವರ
ಮೂಡುಬಿದಿರೆ: ವೀರರಾಣಿ ಅಬ್ಬಕ್ಕ ೫೦೦ನೇ ವರ್ಷದ ಸಂಭ್ರಮದ ಅಂಗವಾಗಿ ‘ಜವನೆರ್ ಬೆದ್ರ’ ಸಂಘಟನೆಯು ನೀಡುವ ಪ್ರತಿಷ್ಠಿತ ‘ಅಬ್ಬಕ್ಕ ಪ್ರೇರಣಾ ಪುರಸ್ಕಾರ’ಕ್ಕೆ ವಿ೪ ನ್ಯೂಸ್ನ ನಿರೂಪಕಿ ಲಿಖಿತಾ ಪ್ರಜ್ವಲ್ ಅವರು ಆಯ್ಕೆಯಾಗಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಚೌಟ ರಾಣಿ ಅಬ್ಬಕ್ಕಳ ೫೦೦ನೇ ಜನ್ಮಶತಾಭ್ದಿಯ ವರ್ಷಾಚರಣೆಯ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್(ರಿ.) ಸಂಘಟನೆಯಿAದ ೫೦ ವನಿತೆಯರಿಗೆ ‘ಚೌಟ ರಾಣಿ
ಮೂಡುಬಿದಿರೆ: ಕರಾವಳಿಯ ಪ್ರತಿಭೆ, ಯುವ ಲೇಖಕಿ ಹಾಗೂ ವಾಗ್ಮಿ ರೇಶಲ್ ಫೆರ್ನಾಂಡಿಸ್ ಅವರು ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆಗಳಲ್ಲಿ ನಡೆಸುತ್ತಿರುವ ನಿರಂತರ ಸಾಧನೆಗೆ ಈಗ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ಲಭಿಸಿದೆ. ರಾಜ್ಯಮಟ್ಟದ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ ಪುರಸ್ಕೃತರಾದ ಇವರು, ತಮ್ಮ ಸಾಹಿತ್ಯಿಕ ಕೊಡುಗೆಗಳ ಮೂಲಕ ಜಾಗತಿಕ ಗಮನ ಸೆಳೆಯುತ್ತಿದ್ದಾರೆ. ಪ್ರತಿಷ್ಠಿತ ಅಂತರರಾಷ್ಟ್ರೀಯ ಸಾಹಿತ್ಯಿಕ ಮ್ಯಾಗಜೀನ್ ‘ಲಿಟರೇಚರ್


























