ಮೂಡುಬಿದಿರೆ : ‘ಜಯ-ವಿಜಯ’ ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳವು ನ. 9ರಂದು ಶನಿವಾರ ನಡೆಯಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಚೌಟ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಂಬಳದ ಜಿಲ್ಲಾ ತೀರ್ಪುಗಾರರ ಸಂಚಾಲಕ ವಿಜಯ್ ಕುಮಾರ್ ಜೈನ್ ಕಂಗಿನಮನೆ
ಮೂಡುಬಿದಿರೆ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ” ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ಆಯ್ಕೆಯಾಗಿರುತ್ತದೆ. ಪ್ರಶಸ್ತಿಯನ್ನು ನ.10 ರಂದು ಕೋಟದ ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಹಾಯಕ ನಿರ್ದೇಶಕರು(ಪ್ರಭಾರ) ಸಾಯೀಶ ಚೌಟ ಮತ್ತು ಸದಸ್ಯರು ಮೇಘಾಲಯದ
ಮೂಡುಬಿದಿರೆ: ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಮೆರಿಕ ಸಾಮ್ರಾಜ್ಯಶಾಹಿಯ ಅಡಿಯಾಳು ಆಗಬಾರದು ಎಂದು ಸಿಪಿಐಎಂನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ್ ಶೆಟ್ಟಿ ಹೇಳಿದರು. ಅವರು ಭಾನುವಾರ ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಮೂಡುಬಿದಿರೆ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.ಪ್ಯಾಲೆಸ್ತೀನ್ ನಾಗರಿಕರನ್ನು ಅತ್ಯಂತ ಅಮಾನವೀಯವಾಗಿ ಕೊಲ್ಲುತ್ತಿರುವ ಇಸ್ರೇಲಿಗೆ ಸರ್ವ ರೀತಿಯ ಸಹಕಾರ ನೀಡುತ್ತಿರುವ ಅಮೆರಿಕ ಮತ್ತು
ಮೂಡುಬಿದಿರೆ : ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿರುವ ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇಮಾರಿನಲ್ಲಿ ಶುಕ್ರವಾರ ಬೆಳಿಗ್ಗೆ ತಿಳಿದು ಬಂದಿದೆ.ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಡಿಹಿಲ್ಲು ನಿವಾಸಿ ಪ್ರಮೀಳಾ (36ವ)ಅವರು ಮಾಡಿಕೊಂಡ ಮಹಿಳೆ. ಈಕೆ ಗಂಡನನ್ನು ಕಳೆದುಕೊಂಡ ಮೇಲೆ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಕುಡಿತದ ಚಟವನ್ನು ಹೊಂದಿದ್ದ ಪ್ರಮೀಳಾ ಅವರು ಜೀವನದಲ್ಲಿ ಜಿಗುಪ್ಸೆಗೊಂಡು
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ ಅವರ ‘ಒಲವ ಒರತೆಯ ಜಾಡಿನಲ್ಲಿ’ ಎಂಬ ಎರಡು ಹಸ್ತಪ್ರತಿಗಳು ಗೆದ್ದುಕೊಂಡಿವೆ. ಈ ಎರಡೂ ಹಸ್ತಪ್ರತಿಗಳು ತೀರ್ಪುಗಾರರಿಂದ ಸಮಾನ ಅಂಕಗಳನ್ನು ಪಡೆದಿರುವುದರಿಂದ ಎರಡು ಹಸ್ತಪ್ರತಿಗಳನ್ನು ಕೂಡಾ ಪ್ರಶಸ್ತಿಗೆ
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು.ಫಲಿತಾಂಶ : ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ –
ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಸ್ಥಾಪಕ ಸದಸ್ಯರಾಗಿದ್ದ ಅವರು 20 ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ
ಮೂಡುಬಿದಿರೆ: ಜೈನ ಬಾಂಧವರು ಆಚರಿಸಿಕೊಂಡು ಬರುವ ಹೊಸ ತೆನೆ ಹಬ್ಬ(ಕುರಾಲ್ ಪರ್ಬ) ಜೈನ ಕಾಶಿ ಮೂಡುಬಿದಿರೆಯಲ್ಲಿ ರವಿವಾರ ಜರಗಿತು. ಬೆಟ್ಟೇರಿಯಲ್ಲಿರುವ, ಮಹಾವೀರ ಸಂಘ ದವರ ‘ಕೊರಲ್ ಕಟ್ಟೆ’ಯಲ್ಲಿ ಹೊಸ ತೆನೆರಾಶಿ ಹಾಕಿ 18 ಬಸದಿಗಳ ಇಂದ್ರರು ಪೂಜೆ ಸಲ್ಲಿಸಿದರು. ಶ್ರೀಮಠದಲ್ಲಿ ಪಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ಸ್ವಾಮೀಜಿ ಪಾವನ ಸಾನ್ನಿಧ್ಯ ಮಾರ್ಗದರ್ಶನದಲ್ಲಿ 18ಬಸದಿಗಳ ದೇವಕಾರ್ಯ ನೆರವೇರಿಸಿ ಅರ್ಚಕರಿಗೆ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ




























