Home Archive by category moodabidre (Page 16)

ಅಯೋಧ್ಯೆಯಲ್ಲಿ ಪಲ್ಲಕಿ ಸೇವೆಗೈದ ಮೂಡುವೇಣುಪುರದೊಡೆಯನ ಸೇವಕರು

ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲ ಪೂಜೆ ಮತ್ತು ಉತ್ಸವದಲ್ಲಿ, ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹನುಮಂತ ದೇವಸ್ಥಾನದ ಸ್ವಯಂಸೇವಕರ ತಂಡ ನಿರಂತರ 3 ದಿನಗಳ ಕಾಲ ಪಲ್ಲಕ್ಕಿ ಹೊರುವ ಸೇವೆಯಲ್ಲಿ ಪಾಲ್ಗೊಂಡರು. ಮದ್ವ ನವಮಿ ಶುಭ

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್: ಕಬಡ್ಡಿ ಚಾಂಪಿಯನ್‌ಶಿಫ್ :ಮಂಗಳೂರು ವಿವಿಗೆ ಚಾಂಪಿಯನ್ಸ್ ಪಟ್ಟ

ಮೂಡುಬಿದಿರೆ: ಅಸ್ಸಾಂನ ಗೌಹಾಟಿಯಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿರ್ಸಿಟಿ ಗೇಮ್ಸ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕಬಡ್ಡಿ ತಂಡವು ಚಿನ್ನದ ಪದಕವನ್ನು ಗಳಿಸಿದೆ. ಅಂತರ್ ವಿಶ್ವಿದ್ಯಾಲಯಗಳ ಕಬಡ್ಡಿ ಚಾಂಪಿಯನ್‌ಶಿಫ್‌ನಲ್ಲಿ ಅಂತಿಮ ಎಂಟರ ಘಟ್ಟಕ್ಕೆ ಆಯ್ಕೆಯಾದ ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ಮಂಗಳೂರು ವಿವಿಯು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಸೆಮಿಫೈನಲ್ ಲಗ್ಗೆ ಇಟ್ಟಿತ್ತು. ಸೆಮಿಫೈನಲ್‌ನಲ್ಲಿ ಹರಿಯಾಣದ ಚೌಧರಿ ಬನ್ಸಿಲಾಲ್ ವಿವಿಯ

ಮೂಡುಬಿದಿರೆ: ನಿಮೋನಿಯಾಕ್ಕೆ ವಿದ್ಯಾರ್ಥಿನಿ ಬಲಿ

ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಅಶ್ರಿಜಾ ನಿಮೋನಿಯಾಕ್ಕೆ ತುತ್ತಾಗಿ ಮೃತಪಟ್ಟಿದ್ದಾಳೆ.ಬೆಳ್ತಂಗಡಿ ತಾಲೂಕಿನ ನಿವಾಸಿ ಮರೋಡಿ ನಿವಾಸಿಗಳಾದ ಜಯಾನಂದ ರಾಜಶ್ರೀ ದಂಪತಿಯ ಪುತ್ರಿಯಾಗಿರುವ ಈಕೆ ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ.ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ

ಶಿಬರೂರು: “ಬಾಲೆಗ್ ಒಲಿಯಿನ ಭ್ರಾಮರಿ” ತುಳು ನಾಟಕಕ್ಕೆ ಮುಹೂರ್ತ

ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ

ಮೂಡುಬಿದಿರೆ: ಬೈಲ ಕುರಲ್ ಖ್ಯಾತಿಯ “ಭಾಷಾ” ಇನ್ನಿಲ್ಲ

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ “ಭಾಷಾ” ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(52) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು.ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ

ಮೂಡುಬಿದ್ರಿ : ಬಂಟರ ಸಂಘ ಮಹಿಳಾ ಘಟಕದ ಪ್ರಥಮ ವಾರ್ಷಿಕೋತ್ಸವ

ಬಂಟರ ಸಂಘ ಮಹಿಳಾ ಘಟಕ ಮೂಡುಬಿದ್ರಿ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭವು ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣ ವಿದ್ಯಾಗಿರಿ ಮೂಡುಬಿದ್ರಿ ಇಲ್ಲಿ ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭಾ ಎಸ್ ಹೆಗ್ಡೆ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟರ ಸಂಘ ಮೂಡುಬಿದರೆ (ರಿ) ಇದರ ಅಧ್ಯಕ್ಷರಾದ ಶ್ರೀ ತಿಮ್ಮಯ್ಯ ಶೆಟ್ಟಿ ಅವರು ವಹಿಸಿದ್ದರು. ಸಮಾರಂಭದ ಉದ್ಘಾಟನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಇದರ ಅಧ್ಯಕ್ಷರಾದ

ಮೂಡುಬಿದಿರೆ: ಶಾರದಾದಾಸ್ ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷ ಕೆ. ಸುಂದರ ಹೆಗ್ಡೆ ನಿಧನ

ಮೂಡುಬಿದಿರೆ:ಪಡುಕೊಣಾಜೆ ಗ್ರಾಮದ ಕೊಣಾಜೆ ಕಲ್ಲು ಶಾರದಾದಾಸ್ ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷ ಕಲ್ಲಬೆಟ್ಟು ಗ್ರಾಮದ ಸಾಗಿನಬೆಟ್ಟು ಕೆ. ಸುಂದರ ಹೆಗ್ಡೆ (87) ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕೃಷಿಕರಾಗಿದ್ದ ಅವರು ಹೌದಾಲಿನಲ್ಲಿ ಹಲವು ವರ್ಷ ದಿನಸಿ ವ್ಯಾಪಾರ ಮಾಡಿಕೊಂಡು ಬಂದಿದ್ದರು. ಐತಿಹಾಸಿಕ ಹಿನ್ನೆಲೆಯ ಕೊಣಾಜೆಕಲ್ಲು ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷರಾಗಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ವರ್ಷ ದುಡಿದಿದ್ದರು. ನಡ್ಯೋಡಿ ಸರಕಾರಿ ಪ್ರಾಥಮಿಕ

ಮೂಡುಬಿದಿರೆ: ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪುರಸಭಾ ಅಧಿಕಾರಿಗೆ ಚಾಟಿ ಬೀಸಿದ ಲೋಕಾಯುಕ್ತ ಅಧಿಕಾರಿಗಳು

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರಾದ ಸದಾನಂದ ನಾರಾವಿ ಅವರು ಗುರುವಾರ ಆಡಳಿತ ಸೌಧದಲ್ಲಿ ನಡೆದ

ಮೂಡುಬಿದಿರೆ : ಜೆಇಇ ಮೈನ್ಸ್ ಫಲಿತಾಂಶ:ಆಳ್ವಾಸ್ ಪದವಿಪೂರ್ವ ಕಾಲೇಜಿನ 53 ವಿದ್ಯಾರ್ಥಿಗಳಿಗೆ 95ಕ್ಕೂ ಅಧಿಕ ಪರ್ಸಂಟೈಲ್

ಮೂಡುಬಿದಿರೆ : ಜೆಇಇ ಮೈನ್ಸ್ ಫೆಸ್-1 ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್ (ಭೌತಶಾಸ್ತ್ರ- 97.2200028, ರಸಾಯನಶಾಸ್ತ್ರ – 97.1516355 ಹಾಗೂ ಗಣಿತ- 99.537079)

ಮೂಡುಬಿದಿರೆ: “ಬೇಟಿ ಬಚಾವೋ ಭೇಟಿ ಪಢಾವೋ” ಜಾಗೃತಿ ಜಾಥಾ ಅರಿವು ಕಾರ್ಯಕ್ರಮ, ಸನ್ಮಾನ

ಮೂಡುಬಿದಿರೆ: ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಗ್ರಾಮಾಂತರ ಇವುಗಳ ಆಶ್ರಯದಲ್ಲಿ “ಬೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮದಡಿ ಜಾಗೃತಿ ಜಾಥಾ, ಅರಿವು ಕಾರ್ಯಕ್ರಮ ಹಾಗೂ ಸಾಧನೆ ಮಾಡಿದ ಹೆಣ್ಣು ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಸಮಾಜ ಮಂದಿರದಲ್ಲಿ ನಡೆಯಿತು. ಮೂಡುಬಿದಿರೆ ತಾಲೂಕು ಉಪ ತಹಶೀಲ್ದಾರ್ ರಾಮ್ ಅವರು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ನೋಟರಿ ವಕೀಲೆ ಶ್ವೇತಾ