ಮೂಡುಬಿದಿರೆ: ಹಿರಿಯ ದಂತವೈದ್ಯ ಡಾ.ಪೆರುವಾಯಿ ಗುತ್ತು ಬಾಲಕೃಷ್ಣ ಆಳ್ವ( 72) ಅಲ್ಪಕಾಲದ ಅಸ್ವಾಸ್ಥ್ಯದಿಂದ ಬೆಂಗಳೂರಿನ ತನ್ನ ಬೆಂಗಳೂರಿನಲ್ಲಿರುವ ತನ್ನ ಪುತ್ರನ ಮನೆಯಲ್ಲಿ ಮಾ 3ರಂದು ನಿಧನ ಹೊಂದಿದರು.ಅವರು ಪತ್ನಿ ,ಪುತ್ರ ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯ ಅರಿವಳಿಕೆ , ತೀವ್ರನಿಗಾ ತಜ್ಞ , ಮುಖ್ಯಸ್ಥ ಡಾ.ಅರ್ಜುನ್ ಆಳ್ವ ಸಹಿತ ಬಂಧು ವರ್ಗವನ್ನು
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣ ಪಡೆಯಲು ರಾಜ್ಯದ ವಿದ್ಯಾರ್ಥಿಗಳಿಗೆ ಭಾನುವಾರದಂದು ಪ್ರವೇಶ ಪರೀಕ್ಷೆ ನಡೆಸಿದ್ದು ನಾಡಿನ ಮೂಲೆ ಮೂಲೆಯಿಂದ ವಿದ್ಯಾಗಿರಿಗೆ 15,986 ಹೆಚ್ಚಿನ ವಿದ್ಯಾರ್ಥಿಗಳು ಅವರ ಪೋಷಕರು, ಜತೆಗೂಡಿ ಆಗಮಿಸಿ ವಿದ್ಯಾಗಿರಿ ಮತ್ತು ಪುತ್ತಿಗೆಯಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ. ಪ್ರತೀ ವರ್ಷದಂತೆ ಈ ಬಾರಿಯೂ ತನ್ನ ಕನಸಿನ ನಾಡಿನ ಏಕೈಕ ಶೂನ್ಯ ಶುಲ್ಕದ ಕನ್ನಡ ಮಾಧ್ಯಮ ಶಾಲೆಗೆ ಉಚಿತ ದಾಖಲಾತಿ
ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲ ಪೂಜೆ ಮತ್ತು ಉತ್ಸವದಲ್ಲಿ, ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹನುಮಂತ ದೇವಸ್ಥಾನದ ಸ್ವಯಂಸೇವಕರ ತಂಡ ನಿರಂತರ 3 ದಿನಗಳ ಕಾಲ ಪಲ್ಲಕ್ಕಿ ಹೊರುವ ಸೇವೆಯಲ್ಲಿ ಪಾಲ್ಗೊಂಡರು. ಮದ್ವ ನವಮಿ ಶುಭ ಸಂದರ್ಭದಲ್ಲಿ ಮೂಲ ಮೂರ್ತಿ ಶ್ರೀ ಬಾಲ ರಾಮನಿಗೆ ಭೋಗ ನೈವೇದ್ಯವನ್ನು ನೀಡುವ ಅವಕಾಶವನ್ನೂ ಪಡೆದು
ಮೂಡುಬಿದಿರೆ: ಅಸ್ಸಾಂನ ಗೌಹಾಟಿಯಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿರ್ಸಿಟಿ ಗೇಮ್ಸ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕಬಡ್ಡಿ ತಂಡವು ಚಿನ್ನದ ಪದಕವನ್ನು ಗಳಿಸಿದೆ. ಅಂತರ್ ವಿಶ್ವಿದ್ಯಾಲಯಗಳ ಕಬಡ್ಡಿ ಚಾಂಪಿಯನ್ಶಿಫ್ನಲ್ಲಿ ಅಂತಿಮ ಎಂಟರ ಘಟ್ಟಕ್ಕೆ ಆಯ್ಕೆಯಾದ ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ಮಂಗಳೂರು ವಿವಿಯು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಸೆಮಿಫೈನಲ್ ಲಗ್ಗೆ ಇಟ್ಟಿತ್ತು. ಸೆಮಿಫೈನಲ್ನಲ್ಲಿ ಹರಿಯಾಣದ ಚೌಧರಿ ಬನ್ಸಿಲಾಲ್ ವಿವಿಯ
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಅಶ್ರಿಜಾ ನಿಮೋನಿಯಾಕ್ಕೆ ತುತ್ತಾಗಿ ಮೃತಪಟ್ಟಿದ್ದಾಳೆ.ಬೆಳ್ತಂಗಡಿ ತಾಲೂಕಿನ ನಿವಾಸಿ ಮರೋಡಿ ನಿವಾಸಿಗಳಾದ ಜಯಾನಂದ ರಾಜಶ್ರೀ ದಂಪತಿಯ ಪುತ್ರಿಯಾಗಿರುವ ಈಕೆ ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ.ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ
ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ
ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ “ಭಾಷಾ” ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(52) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು.ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ
ಬಂಟರ ಸಂಘ ಮಹಿಳಾ ಘಟಕ ಮೂಡುಬಿದ್ರಿ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭವು ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣ ವಿದ್ಯಾಗಿರಿ ಮೂಡುಬಿದ್ರಿ ಇಲ್ಲಿ ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭಾ ಎಸ್ ಹೆಗ್ಡೆ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟರ ಸಂಘ ಮೂಡುಬಿದರೆ (ರಿ) ಇದರ ಅಧ್ಯಕ್ಷರಾದ ಶ್ರೀ ತಿಮ್ಮಯ್ಯ ಶೆಟ್ಟಿ ಅವರು ವಹಿಸಿದ್ದರು. ಸಮಾರಂಭದ ಉದ್ಘಾಟನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಇದರ ಅಧ್ಯಕ್ಷರಾದ
ಮೂಡುಬಿದಿರೆ:ಪಡುಕೊಣಾಜೆ ಗ್ರಾಮದ ಕೊಣಾಜೆ ಕಲ್ಲು ಶಾರದಾದಾಸ್ ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷ ಕಲ್ಲಬೆಟ್ಟು ಗ್ರಾಮದ ಸಾಗಿನಬೆಟ್ಟು ಕೆ. ಸುಂದರ ಹೆಗ್ಡೆ (87) ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕೃಷಿಕರಾಗಿದ್ದ ಅವರು ಹೌದಾಲಿನಲ್ಲಿ ಹಲವು ವರ್ಷ ದಿನಸಿ ವ್ಯಾಪಾರ ಮಾಡಿಕೊಂಡು ಬಂದಿದ್ದರು. ಐತಿಹಾಸಿಕ ಹಿನ್ನೆಲೆಯ ಕೊಣಾಜೆಕಲ್ಲು ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷರಾಗಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ವರ್ಷ ದುಡಿದಿದ್ದರು. ನಡ್ಯೋಡಿ ಸರಕಾರಿ ಪ್ರಾಥಮಿಕ
ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರಾದ ಸದಾನಂದ ನಾರಾವಿ ಅವರು ಗುರುವಾರ ಆಡಳಿತ ಸೌಧದಲ್ಲಿ ನಡೆದ




























