ಮೂಡುಬಿದಿರೆ: ಗದಗದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17
ಮೂಡುಬಿದಿರೆ: ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ-ಬಾಲಕಿಯರು) ಮತ್ತು ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ಲಿಫ್ಟಿಂಗ್ ಚಾಂಪಿಯನ್ಷಿಪ್ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಳ್ವಾಸ್ ಕಾಲೇಜು ಸ್ಪರ್ಧಿಗಳು, ಸ್ಪರ್ಧೆಯಲ್ಲಿನ ಎಲ್ಲ ಆರು ವಿಭಾಗಗಳಾದ ಜೂನಿಯರ್ ಬಾಲಕರು, ಜೂನಿಯರ್ ಬಾಲಕಿಯರು, ಸಬ್ ಜೂನಿಯರ್ ಬಾಲಕರು, ಸಬ್ ಜೂನಿಯರ್ ಬಾಲಕಿಯರು, ಸೀನಿಯರ್
ಮೂಡುಬಿದಿರೆ: ಮಕ್ಕಳಲ್ಲಿ ಯಕ್ಷಗಾನದ ಒಲವನ್ನು ತುಂಬಿದಾಗ ತುಳುನಾಡಿನಲ್ಲಿ ಯಕ್ಷಗಾನ ಕಲೆ ಇನ್ನಷ್ಟು ಶ್ರೀಮಂತ ಕಲೆಯಾಗಿ ಬೆಳೆಯಲು ಸಾಧ್ಯ ಎಂದು ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಶ್ರೀ ಯಕ್ಷನಿಧಿ ಮೂಡುಬಿದಿರೆ ಇದರ ದಶಮಾನೋತ್ಸವದ ಅಂಗವಾಗಿ ಸಮಾಜ ಮಂದಿರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಭಾ ಕಾಯ೯ಕ್ರಮದಲ್ಲಿ ಆಶೀರ್ವಚನ ನೀಡಿದರು. ಜೈನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾತ್ ಕುಮಾರ್ ಬಲ್ನಾಡ್ ಮುಖ್ಯ ಅತಿಥಿಯಾಗಿ
ಮೂಡುಬಿದಿರೆ : ಸಮಾಜ ಸೇವಕ, ಪಡುಮಾರ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ಮೂಡುಮಾನಾ೯ಡಿನ ನಿವಾಸಿ ಶ್ರೀನಾಥ್ ಸುವಣ೯ ಅವರ ಮೃತದೇಹವು ಶ್ಮಶಾನಕ್ಕಾಗಿ ಮೀಸಲಿಟ್ಟ ಪಡ್ಡೇಲು ಎಂಬ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಕಳೆದ ಹಲವು ವಷ೯ಗಳಿಂದ ಬಿಜೆಪಿ ಕಾಯ೯ಕತ೯ರಾಗಿದ್ದ ಶ್ರೀನಾಥ್ ಸುವರ್ಣ ಅವರು ನಂತರ ಪಡುಮಾನಾ೯ಡು ಗ್ರಾ. ಪಂ.ನಲ್ಲಿ ಸ್ಪಧಿ೯ಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದೀಗ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆೆ ಎಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು ೨೮ ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್) ಮತ್ತು ಹೊಸ
ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ.ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ.ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ
ಮೂಡುಬಿದಿರೆ: ಕಾರ್ಕಳದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಅವರ ಪುತ್ರ ಸಾತ್ವಿಕ್ ಕುಲಾಲ್ ಅವರ ಚಿಕಿತ್ಸೆಗೆ ದಾನಿಗಳು ಮತ್ತು ಸಾರ್ವಜನಿಕರು ಮಾನವೀಯ ನೆರವು ನೀಡಿ ಸಹಕರಿಸುವ ಅಗತ್ಯವಿದೆ. ಕುಟುಂಬವು ಆರ್ಥಿಕವಾಗಿ ಬಹಳ ದುರ್ಬಲವಾಗಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಗಳ
ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ, ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದಿರೆ ಸಂಯುಕ್ತ ಆಶ್ರಯದಲ್ಲಿ ನಡೆದ
ಮೂಡಬಿದಿರೆ: ಮಂಗಳೂರಿನ ಬೆಸೆಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು.ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು
ಮೂಡುಬಿದಿರೆ : ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು. ದ. ಕ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಸುನೀಲ್ ಅಳ್ವ, ಶಾಂತಿಪ್ರಸಾದ್ ಹೆಗ್ಡೆ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ




























