Home Archive by category padubidri

ಯುವ ವಾಹಿನಿ ಪಡುಬಿದ್ರಿ ಘಟಕ ಬಿಲ್ಲವ “ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್” ಪೋಸ್ಟರ್ ಬಿಡುಗಡೆ

ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ ಪೂರ್ವಬಾವಿಯಾಗಿ ಅದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆಯಿತು.

ಪಡುಬಿದ್ರಿ: ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆ ಅವಲೋಕನ ಸಭೆ

ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು ದೇಣಿಗೆಯೊಂದಿಗಿನ ಸಹಕಾರದಿಂದ ದೇವಾಲಯದ ಪುನ‌ರ್ ನಿರ್ಮಾಣ ಆಗಬೇಕಿದೆ’ ಸಕಲ ಅಡೆತಡೆಗಳ ಮೀರಿ

ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ನಿಧಿ ವಿತರಣೆ ಕಾರ್ಯಕ್ರಮ ಆ. 24 ಆದಿತ್ಯವಾರ ಮಧ್ಯಾಹ್ನ ಗಂಟೆ 2 ಕ್ಕೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಲಿದೆ. ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷೆ ಶಶಿಕಲಾ ಯಶೋಧರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಕಣ್ಣಂಗಾರು

ಹೆಜಮಾಡಿ: ಮಟ್ಟು ಗ್ರಾಮದ ಹೆಮ್ಮೆಯ ಯೋಧ ಚೇತನ್ ಶ್ರೀಯನ್ ರವರಿಗೆ ಕೋಟೆ ಮಟ್ಟು ಬಿಜೆಪಿ ವತಿಯಿಂದ ಸನ್ಮಾನ

ಹೆಜಮಾಡಿ: 79ನೇ ಸ್ವತಂತ್ರ ದಿನಾಚರಣೆಯ ಶುಭ ಸಂದರ್ಭದಲ್ಲಿ ಭಾರತೀಯ ಸೇನೆಯ ಆರ್ಟಿಲರಿ ವಿಭಾಗದಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಮ್ಮ ಮಟ್ಟು ಗ್ರಾಮದ ಹೆಮ್ಮೆಯ ಯೋಧ ಚೇತನ್ ಶ್ರೀಯನ್ ರವರಿಗೆ ಕೋಟೆ ಮಟ್ಟು ಬಿಜೆಪಿ ವತಿಯಿಂದ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀ ಗೋಪಾಲ್ ಕೃಷ್ಣ ರಾವ್ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಯೋಧ ಚೇತನ್ ಶ್ರೀಯನ್ ರವರ ಬಗ್ಗೆ ಕೋಟೆ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್ ಸುವರ್ಣ ರವರು

ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ

ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಾಜಿ ಅಧ್ಯಕ್ಷರಾದ ಕುರ್ಕಾಲು ಮಹೇಶ್ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷರಾದ ನತಾಲಿಯ ಮಾರ್ಟಿಸ್,ಸದಸ್ಯರಾದ ಸರೋಜಾ ಪೂಜಾರಿ, ಅಧ್ಯಕ್ಷರಾದ ಮಂಜೇಶ್ ಗಿರಿನಗರ,ಅಂಗನವಾಡಿ ಕಾರ್ಯಕರ್ತೆ ಸುಶೀಲಾ,ಹಿರಿಯರಾದ ಕೊರಗಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ

ಬೆಂಗಳೂರು: ದ.ಕ, ಉಡುಪಿ ಜಿಲ್ಲೆಯ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ , ಅಧಿಕಾರಿಗಳ ಸಭೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲೆಯಲ್ಲಿನ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಇಂದು ವಿಧಾನಸೌಧದ ಕೊಠಡಿ ಸಂಖ್ಯೆ106ರಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಕೆಂಪು ಕಲ್ಲು ಹಾಗೂ ಮರಳು ಗಣಿಗಾರಿಕೆಗೆ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಪಡುಬಿದ್ರಿ ಸಂತೆಕಟ್ಟೆ ದೈವರಾಜ ಕೋರ್ದಬ್ಬು ದೈವಸ್ಥಾನ ಅಧ್ಯಕ್ಷರಾಗಿ ಶಶಿಕಾಂತ್ ಪಡುಬಿದ್ರಿ ಆಯ್ಕೆ

ಪಡುಬಿದ್ರಿ: ಸಂತೆಕಟ್ಟೆ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ಕಾರ್ಯಕಾರಿ ಸಮಿತಿಯ ವಾರ್ಷಿಕ ಮಹಾ ಸಭೆಯು ನಡೆಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಮಾಜಿ ಜಿ. ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ ಆಯ್ಕೆಯಾದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಬಿ. ದಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರವಿರಾಜ್ ಕೋಟ್ಯಾನ್, ಜತೆ ಕಾರ್ಯದರ್ಶಿಯಾಗಿ ಯತೀಶ್ ದೇವಾಡಿಗ, ಕೋಶಾಧಿಕಾರಿಯಾಗಿ ಚಿತ್ರಾಕ್ಷಿ ಕೆ. ಕೋಟ್ಯಾನ್, ಜತೆ ಕೋಶಾಧಿಕಾರಿಯಾಗಿ

ಉಡುಪಿ: ಕ್ರೈಸ್ತ ಭಗಿನಿಯರ ಬಂಧನ ಖಂಡನೀಯ – ವಿನಯ್ ಕುಮಾರ್ ಸೊರಕೆ

ಛತ್ತೀಸ್‌ಗಢದಲ್ಲಿ ಇಬ್ಬರು ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಆಧಾರದ ಮೇಲೆ ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ತೀವ್ರವಾಗಿ ಖಂಡಿಸಿದ್ದಾರೆ. ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕುಲೇಟ್ ಆಫ್ ಅಸಿಸ್ಸಿ ಸಂಸ್ಥೆಯ ಸದಸ್ಯರಾದ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್ ಪ್ರೀತಿ ಮೇರಿ ಅವರನ್ನು ಮಾನವ ಕಳ್ಳಸಾಗಣೆ ಹಾಗೂ ಧಾರ್ಮಿಕ ಮತಾಂತರದ

ಪಡುಬಿದ್ರಿ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನಿಂದ ಸಮವಸ್ತ್ರ ವಿತರಣೆ

ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನ ವತಿಯಿಂದ ಸಮವಸ್ತ್ರವನ್ನು ವಿತರಣ ಕಾರ್ಯಕ್ರಮ ನಡೆಯಿತು. “ಬಾಲ್ಯದಲ್ಲಿ ವಿದ್ಯಾಭ್ಯಾಸ ಮಾಡಿದ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ನೀಡುವ ಯೋಗ ನಮಗೆ ದೊರಕಿದೆ. ಇದು ನಿಜಕ್ಕೂ ಸೌಭಾಗ್ಯ. ಶಾಲೆಯ ಋಣ ಬಹಳ ದೊಡ್ಡದು. ಈಗ ಈ ಮೂಲಕ ಋಣವನ್ನು ತೀರಿಸುವ ಅವಕಾಶ ದೊರೆತಿದೆ ” ಎಂದು