ಜೆಸಿಐ ಭಾರತದ ವಲಯ 15 ರ 2024 ರ ಸಾಲಿನಲ್ಲಿ ಕೊಡಮಾಡುವ ಈ ವರ್ಷದ ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು ಜೇಸಿ ಸುಧಾಕರ್ ಪೂಜಾರಿ ಯವರು 2007 ರಿಂದ ವ್ಯಕ್ತಿತ್ವ ವಿಕಸನ ತರಬೇತುಧಾರರಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ, ಉದ್ಯಮಿಗಳಿಗೆ ಜೇಸಿ loins ರೋಟರಿ ಸದಸ್ಯರಿಗೆ, ವಿವಿಧ
ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಶಾಖೆಯು ಶಿರ್ವದ ಸುವರ್ಣ ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಿರ್ವ ಶಾಖೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಸೇಫ್ ಲಾಕರನ್ನು ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ
ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್. ನಿಧಿಯಡಿ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೊಡಮಾಡಿದ 5,20,750ರೂ. ವೆಚ್ಚದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಬ್ಯಾಂಕಿನ ಅಧಿಕಾರಿಗಳು ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರಿಗೆ ಹಸ್ತಾಂತರಿಸಿದರು. ವಾಹನವನ್ನು ಸ್ವೀಕರಿಸಿದ ನಾಡೋಜ ಡಾ| ಜಿ. ಶಂಕರ್ ಮಾತನಾಡಿ, ದ.ಕ. ಮೊಗವೀರ ಮಹಾಜನ ಸಂಘ ಮತ್ತು ಕ್ಷೇತ್ರಾಡಳಿತ ಮಂಡಳಿ ಮೂಲಕ ನಾವು ಮಾಡಿಕೊಂಡಿರುವ ಮನವಿಗೆ
ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಭಾರತ ರತ್ನ ದಿ. ಸರ್ವಪಳ್ಳಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಫೇಮಸ್
ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆನೆಯ ಅಂಗವಾಗಿ ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ನಿ. ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೆರ್ ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ವಿತರಣೆ ನಡೆಸಿದ್ದು, ಮುಂದಿನ ದಿನದಲ್ಲಿ ಇದರ ಅಗತ್ಯ ವಿದ್ದವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್. ವಸಂತ ಬರ್ನಾರ್ಡ್ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ
ಪಡುಬಿದ್ರಿ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದೊಂದು ಮೃಗೀಯ ವರ್ತನೆಯಾಗಿದ್ದು ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ. ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ, ಅದನ್ನೇ ತಪ್ಪು ಎಂಬುದಾಗಿ ಬಿಂಬಿಸಿ ಅವರ ಮನೆಯ ಮೇಲೆ ದಾಳಿ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದ್ದು, ಈ ಕೃತ್ಯದ ಹಿಂದಿರುವ ಎಲ್ಲಾ ಪುಢಾರಿಗಳನ್ನು
ವಿದ್ಯುತ್ ಪ್ರವಹಿಸುತ್ತಿದ್ದ ವಿದ್ಯುತ್ ಕಂಬಕೇರಿದ ಗುತ್ತಿಗೆ ಕಾರ್ಮಿಕನೋರ್ವ ವಿದ್ಯುತ್ ಶ್ವಾಕ್ ನಿಂದ ಕಂಬದಿಂದ ಕೆಳಗೆಬಿದ್ದು ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿಯ ನಡಿಪಟ್ಣ ಎಂಬಲ್ಲಿ ನಡೆದಿದೆ. ಕಡಲು ಕೊರೆತ ಹಿನ್ನಲೆಯಲ್ಲಿ ಕಂಬ ಬದಲಿಸುವ ಗುತ್ತಿಗೆಯನ್ನು ಕಾರ್ಕಳ ಮೂಲದ ಅಕ್ಷತ್ ಕುಮಾರ್ ಎಂಬವರಿಗೆ ನೀಡಿದ್ದು, ಅವರ ಸೂಚನೆಯಂತೆ ಕಾರ್ಕಳ ಮೂಲದ ರಕ್ಷಿತ್(27) ಕೆಲಸಕ್ಕಾಗಿ ಬಂದಿದ್ದು, ಪಡುಬಿದ್ರಿ ಮೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿ ಇವರಿಗೆ ನೀಡ
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸೀದಿ ಸಮೀಪ ಹೆದ್ದಾರಿಯ ಹೊಂಡ ತಪ್ಪಿಸಲು ಹೋದ ಕಾರು ಚಾಲಕನೋರ್ವ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಕೂಟರ್ ದಾಖಲೆ ಪರಿಶೀಲನೆ ಮಾಡಿದ ಸ್ಥಳೀಯ ಅದಮಾರು ನಿವಾಸಿ ನವನೀತ್ ಪಿ. ಎಂಬವರಿಗೆ ಸೇರಿದ್ದಾಗಿದ್ದು, ಅವರೇ ಈ ಸ್ಕೂಟರನ್ನು ಚಲಸಯಿಸುತ್ತಿದ್ದರೋ ಎಂಬುದು ದೃಢಪಟ್ಟಿಲ್ಲ. ಅದಮಾರು
ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಅಡ್ವೆ ಶ್ರೀಬ್ರಹ್ಮ ಬೈದರ್ಕಳ ಗರೋಡಿ ಗದ್ದೆಯಲ್ಲಿ ಹತ್ತನೇ ವರ್ಷದ ಅಂಗವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗರೋಡಿಯ ಮುಖ್ಯ ಅರ್ಚಕರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಅಡ್ವೆ ಘಟಕದ ಅಧ್ಯಕ್ಷ ಸಚಿನ್ ಎಸ್. ಕರ್ಕೇರ ಇವರ ನೇತ್ರತ್ವದಲ್ಲಿ ಪ್ರಪ್ರಥಮ ಬಾರಿಗೆ ಈ ಕೆಸರು ಗದ್ದೆ ಕ್ರೀಢಾಕೂಟ ಆಯೋಜಿಸಲಾಗಿದ್ದು, ಸುತ್ತಲ ಗ್ರಾಮಗಳಿಂದ ನೂರಾರು ಮಂದಿ
ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ ನಡೆದಿದೆ. ಈ ಅಪಘಾತಕ್ಕೆ




























