ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮ ಡಿಸೆಂಬರ್ 20 ರಂದು ಸಂಜೆ 4.30
ಪುತ್ತೂರು:ಕಳೆದ ಎರಡು ದಿನಗಳಿಂದ ಪುತ್ತೂರಿನ ಬಸ್ ನಿಲ್ದಾಣ ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಆಶ್ರಯವಿಲ್ಲದೆ ತಂಗುತ್ತಿದ್ದ ಒಂಟಿ ಮಹಿಳೆಯೊಬ್ಬರನ್ನು ರೋಟರಿ ಕ್ಲಬ್ ಪುತ್ತೂರು ಯುವದ ಮಾನವೀಯ ಕಾರ್ಯಚಟುವಟಿಕೆಯ ಮೂಲಕ ರಕ್ಷಿಸಿ, ಸೂಕ್ತ ಪುನರ್ವಸತಿ ಕಲ್ಪಿಸಿದ ಘಟನೆ ಸಮಾಜಕ್ಕೆ ಆಶಾಕಿರಣವಾಗಿ ಪರಿಣಮಿಸಿದೆ. ರೋಟರಿ ಕ್ಲಬ್ ಪುತ್ತೂರು ಯುವದ ಮಾಜಿ ಅಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದರೂ ಈಗಾಗಲೇ ಸುಮಾರು 150ಕ್ಕೂ ಅಧಿಕ
ಪುತ್ತೂರು: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಅಂತರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಪುತ್ತೂರಿನ ಧೀರಜ್ ಕೆಮ್ಮಿಂಜೆಯವರು ಶಾಟ್ಪುಟ್ ಮತ್ತು 100 ಮೀ ಓಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಜಯಪ್ರಕಾಶ್ ಮರೀಲ್ ಮತ್ತು ಉಷಾರಾಣಿ ದಂಪತಿಯ ಪುತ್ರ. ಇವರು ರಾಮಕ್ಷತ್ರಿಯ ಸೇವಾ ಸಂಘ ಪುತ್ತೂರಿನ ಸದಸ್ಯ ಹಾಗೂ ರಾಮಕ್ಷತ್ರಿಯ ಯುವ ವೃoದದ ಸದಸ್ಯರು ಆಗಿರುತ್ತಾರೆ.
ಪುತ್ತೂರು; ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವAತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.ಆ ಭಾಗದಲ್ಲಿ ಬಹು ವರ್ಷಗಳಿಂದ ರಸ್ತೆ ಬೇಡಿಕೆ ಇತ್ಗು.ಇಷ್ಟು ವರ್ಷ ಯಾರಿಂದಲೂ ಆ ಭಾಗದ ರಸ್ತೆ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಶಾಸಕರು ಮುತುವರ್ಜಿ
ರೈತರಿಗೆ ಬೆಲೆ ವಿಮೆ ಹಣ ಜಮಾ ಕಡಿಮೆ ಪಾವತಿಯ ಕುರಿತು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಹಾಗೂ ಸುಳ್ಯ ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರ ಸಭೆ ನಡೆಸಿ, ತೋಟಗಾರಿಕಾ ಇಲಾಖೆಯ ನಿರ್ಲಕ್ಷದಿಂದ ರೈತರಿಗೆ ಆದ ಅನ್ಯಾಯದ ಕುರಿತು ಗ್ರಾಮ ಮಟ್ಟದಿಂದ ಸಂಗ್ರಹಿಸಿದ ಮಾಹಿತಿಯನ್ನು, ಬೆಳಗಾವಿ ಅಧಿವೇಶನದಲ್ಲಿ ರೈತರ ಬೆಲೆ ವಿಮೆ ಪಾವತಿ ವಿಳಂಬ ಹಾಗೂ ತಾರತಮ್ಯದ ವಿರುದ್ಧ
ಪುತ್ತೂರು: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI), ಡೈರೆಕ್ಟೊರೇಟ್ ಆಫ್ ಎಜುಕೇಶನ್, GNCT ಆಫ್ ಡೆಲ್ಲಿ ಇದರ ಆಶ್ರಯದಲ್ಲಿದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ನ 30 ರಿಂದ ಡಿ 5 ರವರೆಗೆ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ 2025 – 26 ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ದಿಗಂತ್ ವಿ ಎಸ್ 100ಮೀ ಬ್ಯಾಕ್ ಸ್ಟ್ರೋಕ್ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನೆಲೆ-ಈಶಾನ್ಯ ಬದಿಯ ಕಟ್ಟೆ ನಿರ್ಮಾಣಕ್ಕೆ ಬೆಂಗಳೂರಿನ ಉದ್ಯಮಿ ನಾಗೇಶ್ ರಾವ್ ಅತ್ತಾಳ ಸುಜಾತ ದಂಪತಿಯಿಂದ ರೂ.25ಲಕ್ಷ ದೇಣಿಗೆ ಸಮರ್ಪಣೆ. ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಬಗ್ಗೆ ದೇವಳದ ಈಶಾನ್ಯ ಬದಿಯ ಕಟ್ಟೆ ನಿರ್ಮಾಣಕ್ಕಾಗಿ ನಾಗೇಶ್ ರಾವ್ ಅತ್ತಾಳ ಮತ್ತು ಸುಜಾತ ರಾವ್ ಅವರು ರೂ.25 ಲಕ್ಷ
ಈ ವಿಶೇಷ ಪ್ರದರ್ಶನಕ್ಕೆ MG Motors Mangalore ಪ್ರಾಯೋಜಕತ್ವ ವಹಿಸಿಕೊಂಡಿದ್ದು, ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಹಾಗೂ ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳನ್ನು ಮಾತ್ರ ಗುರಿಯಾಗಿಸಿಕೊಂಡು ಈ ಶೋ ನಿಗದಿಪಡಿಸಲಾಯಿತು. ಪತ್ರಕರ್ತರ ಸೇವೆಯನ್ನು ಗೌರವಿಸುವ ಉದ್ದೇಶದಿಂದ, ಮಾಧ್ಯಮ ಪ್ರತಿನಿಧಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು,
ಸಂವಿಧಾನದ ಆಶಯಗಳನ್ನು ಗೌರವಿಸಿರಿ: ಕೃಷ್ಣ ಪ್ರಸಾದ ಆಳ್ವ ಸಂವಿಧಾನದ ಜಾಗೃತಿ ಮೂಡಿಸುವ, ಬ್ಲಾಕ್ ಕಾಂಗ್ರೆಸ್ಸಿನ ಕಾರ್ಯ ಶ್ಲಾಘನೀಯ:ನೂರುದ್ದೀನ್ ಸಾಲ್ಮರಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ಸಿನ ವತಿಯಿಂದ, ಕಾಂಗ್ರೆಸ್ ಕಚೇರಿಯಲ್ಲಿ ಇಂದು, ಸಂವಿಧಾನ ದಿನಾಚರಣೆಯನ್ನು ಆಚರಿಸಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ಬರೆದ “ಸಂವಿಧಾನ ಓದು” ಎಂಬ ಪುಸ್ತಕವನ್ನು, ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ
ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ . ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಗೆ .ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆ ಪ್ರಕಾರ ದಿನಾಂಕ: 27ನೇ ಮತ್ತು 28 ನವೆಂಬರ್ 2025 ರಂದು ಬೆಳಗ್ಗೆ 9 ಗಂಟೆಗೆ ಭಾರತೀಯ ಕ್ರೀಡಾ



























