Home Archive by category Puttur (Page 10)

ಖ್ಯಾತ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ನಿಧನ

ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅಸೌಖ್ಯದಿಂದ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ದಕ್ಷಿಣ ಕನ್ನಡದ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ ಗೌಡರ ಹಾಗೂ ಗೌರಮ್ಮನವರ ತೃತೀಯ ಪುತ್ರರಾಗಿ 1931 ಮೇ 30 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ

ಪುತ್ತೂರು ಉಪ ವಿಭಾಗದ DYSP ಯಾಗಿದ್ದ ಡಾ. ಗಾನಾ ಪಿ. ಕುಮಾರ್ ವರ್ಗಾವಣೆ.

ಪುತ್ತೂರು : ಪುತ್ತೂರು ಉಪ ವಿಭಾಗದ ಡಿವೈಎಸ್ಪಿಯಾಗಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಕರ್ನಾಟಕ ರಾಜ್ಯದ ಪೊಲೀಸ್‌ ಮಹಾನಿರ್ದೇಶಕರು ಆ 19 ರಂದು ಆದೇಶ ಹೊರಡಿಸಿದ್ದಾರೆ. ಅವರ ಜಾಗಕ್ಕೆ ಪ್ರಸ್ತುತ ಬೆಂಗಳೂರಿನಲ್ಲಿಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ ಅವರನ್ನು ನೇಮಕ ಮಾಡಲಾಗಿದೆ. 2020ರ ಸೆಪ್ಟಂಬರ್‌ ತಿಂಗಳಿನಲ್ಲಿ ಡಾ.ಗಾನಾ ಪಿ.ಕುಮಾರ್ ಅವರು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ

ಸ್ವಾಮೀಜಿಗಳಿಂದ ಅನಾಗರಿಕ ವರ್ತನೆ ಸರಿಯಲ್ಲ, ಹೆಚ್.ಡಿ. ಕುಮಾರಸ್ವಾಮಿ ಆರೋಪ

ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂಬ ಹೇಳಿ ನೀಡಿರುವ ಕಾಳಿ ಸ್ವಾಮಿ ವರ್ತನೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅವರು ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮಂದೊಂದಿಗೆ ಮಾತನಾಡಿದರು. ಇಂತಹ ಹೇಳಿಕೆ ನೀಡುವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ. ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ

ಮೌಲಾನಾ ಅಝಾದ್ ಮಾದರಿ ಶಾಲಾ ಕಟ್ಟಡ ಉದ್ಘಾಟನೆ : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಮಹತ್ವ ನೀಡುವ ನಿಟ್ಟಿನಲ್ಲಿ ಕ್ರಮ ಮಾದರಿ ಶಾಲೆ

ಶಿಕ್ಷಣ ಎಂಬುದು ಬದುಕಿಗೆ ಬೆಳಕು ನೀಡುವ ಕ್ಷೇತ್ರವಾಗಿದೆ. ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಅಝಾದ್‍ನಂತಹ ಮಾದರಿ ಶಾಲೆಗಳನ್ನು ಸ್ಥಾಪಿಸಿ ಮುನ್ನಡೆಸುತ್ತಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು , ಪುತ್ತೂರು ನಗರದ ಪಡೀಲ್‍ನಲ್ಲಿ ರೂ. 2.35 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಮೌಲಾನಾ ಆಝಾದ್ ಮಾದರಿ

ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಖಂಡಿಸಿ : ಪುತ್ತೂರಿನಲ್ಲಿ ಹಿಂಜಾವೆಯಿಂದ ದೊಂದಿ ಹಿಡಿದು ಪ್ರತಿಭಟನೆ

ಪುತ್ತೂರು: ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ದರ್ಬೆಯಲ್ಲಿ ರಸ್ತೆಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ನಡೆಸಿದರು. ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ , ಅಜಿತ್ ರೈ ಹೊಸಮನೆ, ಚಿನ್ಮಯ್ ಈಶ್ವರಮಂಗಲ, ನರಸಿಂಹ ಮಾಣಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿಯಿಂದ ದೇಶಕ್ಕೆ ಮಾರಕವಾಗಿರಲಿಲ್ಲ : ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿಕೆ

ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯನ್ನು ಕರಾಳದಿನ ಎಂದು ಬಿಂಬಿಸುತ್ತಿದೆ. ಆದರೆ ಅದು ಕರಾಳದಿನವಾಗಿರಲಿಲ್ಲ. ಇಂದಿರಾ ಗಾಂಧಿ ಸರಕಾರ ಉರುಳಿದ