Home Archive by category Puttur (Page 2)

ಪುತ್ತೂರು: ಶ್ರೀ ರಾಮಶ್ವ ಯಾತ್ರೆಗೆ ಚಾಲನೆ

ಪುತ್ತೂರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀ ರಾಮಲಲ್ಲ,ನ ಪ್ರತಿಷ್ಠಾಪನ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಸೀಮೆಗೆ ಸಂಬಂಧಿಸಿ ಮೂರು ದಿವಸ ಪುತ್ತೂರು ತಾಲೂಕಿನ ದೇವಸ್ಥಾನಗಳಿಗೆ ಭೇಟಿ ನೀಡಲಿರುವ ಶ್ರೀ ರಾಮಶ್ವ ಯಾತ್ರೆಗೆ ದೇವಳದ ರಥ ಬೀದಿಯಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ

ಪುತ್ತೂರು: ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ, ತೋಟ ನಾಶ

ಪುತ್ತೂರು : ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ ಮಾಡಿದ್ದು, ಅಪಾರ ನಷ್ಟ ಸಂಭಸಿದೆ ತೋಟದಲ್ಲಿದ್ದ ಅಡಿಕೆ,ಬಾಳೆ,ತೆಂಗು ಗಿಡಗಳು ನಾಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪುತ್ತೂರು ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರಗೊಂಡಿದ್ದು ಜನತೆ ಅದರಲ್ಲೂ ಕೃಷಿಕರು ಆನೆ ದಾಳಿಯಿಂದ ಕಂಗಲಾಗಿದ್ದಾರೆ. ಪುತ್ತೂರಿನ ಪೆರ್ನಾಜೆ ಎಂಬಲ್ಲಿ ಬುಧವಾರ ತಡರಾತ್ರಿ ಕಾಡಾನೆ ಯೋಟಕ್ಕೆ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ಗಿಡ ಮರಗಳನ್ನು ನಾಶ ಮಾಡಿದೆ.

ಪುತ್ತೂರು: ಅ.22ರಂದು ಪುತ್ತೂರುದ ಪಿಲಿರಂಗ್‍ನ ಸೀಸನ್ -2

ಪುತ್ತೂರು: ಹುಲಿ ಕುಣಿತದಂತಹ ಸಾಂಸ್ಕೃತಿಕ ಕಲೆ ನಮ್ಮ ಊರಿಗೂ ಬರಲಿ ಎಂಬ ಉದ್ದೇಶದಿಂದ ಆರಂಭಗೊಂಡಿರುವ ಪುತ್ತೂರುದ ಪಿಲಿರಂಗ್‍ನ ಸೀಸನ್ -2 ಪುತ್ತೂರು ಕಿಲ್ಲೆ ಮೈದಾನದಲ್ಲಿ ಅ. 22ರಂದು ನಡೆಯಲಿದೆ ಎಂದು ಪಿಲಿರಂಗ್ ಸಾರಥ್ಯ ವಹಿಸಿರುವ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪುತ್ತೂರಿಗೆ ಹೆಸರು ಬರಬೇಕು ಎಂಬ ನಿಟ್ಟಿನಲ್ಲಿ ಪಿಲಿರಂಗ್ ಆರಂಭ ಮಾಡಿದ್ದೇವೆ. ಜಾತ್ಯಾತೀತ, ಪಕ್ಷಾತೀತ

ಮಾ.11ಕ್ಕೆ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿಕೆ

ಪುತ್ತೂರು: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಹಮ್ಮಿಕೊಂಡಿರುವ ಪ್ರಜಾ ಧ್ವನಿ ಯಾತ್ರೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಬೆಳಿಗ್ಗೆ ಉಪ್ಪಿನಂಗಡಿ, ವಿಟ್ಲ, ಮಧ್ಯಾಹ್ನ ಕುಂಬ್ರ ಜಂಕ್ಷನ್ ಸಂಜೆ ಪುತ್ತೂರು ಕಿಲ್ಲೆ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಅವರು ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಬೇರೆ ಬೇರೆ ಆಶ್ವಾಸನೆಗಳಿಂದ ಕೋಮು ಭಾವನೆ

ಪುತ್ತೂರಿನಲ್ಲಿ ಎಸ್‍ಟಿ ಮೋರ್ಚಾದ ಜಿಲ್ಲಾ ಸಮಾವೇಶ

ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು.ಅವರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಸಾಮಾಜಿಕ ನ್ಯಾಯ ನೀಡಲು ಪೂರಕವಾಗಿ

ಪುತ್ತೂರು: ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ -ನ.14 : ಡಾ.ಶಿವರಾಮ ಕಾರಂತ ಬಾಲವನದಲ್ಲಿ ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ.ಶಿವರಾಮ ಕಾರಂತ ಬಾಲವನ ಸಮಿತಿ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯದ ಜಂಟಿ ಆಶ್ರಯದಲ್ಲಿ “ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ ನ.14 ಸೋಮವಾರ ಬೆಳಗ್ಗೆ 9 ರಿಂದ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣ ಯೋಜನೆ

ಪುತ್ತೂರು:ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಪುತ್ತೂರಿನಲ್ಲಿ ನಿರ್ಮಿಸುವ ಯೋಜನೆಯಿದ್ದು, ಈಗಾಗಲೇ ನಗರಸಭೆ ಈ ಕುರಿತು ಆಸಕ್ತಿ ವಹಿಸಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಪುತ್ತೂರು ನಗರಸಭೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಥೀಮ್ ಪಾರ್ಕ್ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ರಥವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಾಗತಿಸಿ, ಬಳಿಕ ನಟರಾಜ ವೇದಿಕೆಯಲ್ಲಿ ನಡೆದ ಸಭಾ

ಪುತ್ತೂರು : ಪುತ್ತೂರಿನಲ್ಲಿ ನ.13ರ ವರೆಗೆ ಕಾನೂನು ಅರಿವು-ನಾಗರಿಕ ಸಬಲೀಕರಣ ಅಭಿಯಾನ

ಪುತ್ತೂರು: ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಅ. 31 ರಿಂದ ನ.13 ರ ವರೆಗೆ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಅಭಿಯಾನವನ್ನು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗು ಇತರ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಹಯೋಗದೊಂದಿಗೆ ನಡೆಸಲಾಗುವುದು. ಸಾರ್ವಜನಿಕರು ಈ ಅಭಿಯಾನದ ಪ್ರಯೋಜನ ಪಡೆಯುವಂತೆ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿ ಹಾಗು

ಪುತ್ತೂರು : ಕಾಂತಾರ ಚಲನಚಿತ್ರ ವೀಕ್ಷಿಸಲಿರುವ ಕೋಟ ಶ್ರೀನಿವಾಸ ಪೂಜಾರಿ

ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ದೈವ ನರ್ತಕರು, ದರ್ಶನ ಪಾತ್ರಿಗಳೊಂದಿಗೆ, ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸಲ್ಲಿದ್ದಾರೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮೂಡಿಬಂದ ತುಳುನಾಡಿನ ದೈವಾರಾಧನೆ, ಕಂಬಳ ಸಹಿತ ಕರಾವಳಿ ಸಂಸ್ಕೃತಿಯನ್ನು ಬಿಂಬಿಸುವ ಕಾಂತಾರ ಸಿನಿಮಾವನ್ನು

ಪುತ್ತೂರು : ಶಾಂತಾ ಪುತ್ತೂರು ಇವರಿಗೆ ಕೆಂಪಮ್ಮ ರಾಜ್ಯ ಪುರಸ್ಕಾರ

ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕಾರ್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ ಕೆಂಪಮ್ಮ ರಾಜ್ಯ ಪ್ರಶಸ್ತಿ ಶಾಂತಾ ಪುತ್ತೂರು ರವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ ಲಭಿಸಿದೆ. ಶಾಂತಾ ಪುತ್ತೂರು ಶಿಕ್ಷಕಿಯಾಗಿದ್ದು ಪ್ರಸ್ತುತ ಸರಕಾರಿ ಪ್ರೌಢಶಾಲೆ ಕಬಕ ದಲ್ಲಿ ಸೇವೆಸಲ್ಲಿಸುತ್ತಿದ್ದಾರೆ.ಸ್ನಾತಕೋತ್ತರ ಪದವೀಧರರಾಗಿದ್ದು