Home Archive by category Puttur (Page 6)

ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡ್ ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್ ರವರು 34

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ

ಪುತ್ತೂರಿನ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ,ಕೆ ಸೀತಾರಾಮ ರೈ ಸವಣೂರು ಮಾಹಿತಿ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]

ಉಪ್ಪಿನಂಗಡಿಯ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ

ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ. ಪೃಥ್ವಿ ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಮೊದಲಿಗೆ ಫ್ಯಾನ್ಸಿ ಅಂಗಡಿಯಿಂದ ಹೊಗೆ ಕಾಣಿಸಿಕೊಂಡಿತ್ತು ಬಳಿಕ ಬೆಂಕಿ ವ್ಯಾಪಿಸಿತ್ತು ಎಂದು ಸ್ಥಳೀಯರು

ಉಪ್ಪಿನಂಗಡಿ : ರಾತ್ರೋ ರಾತ್ರಿ ಮಹಿಳೆಯ ಕತ್ತು ಹಿಸುಕಿ ಕೊಲೆ

ಮಹಿಳೆಯೋರ್ವರನ್ನು ಕತ್ತು ಹಿಸುಕಿ ಕೊಲೆಗೈದ ಘಟನೆ ಪೆರ್ನೆ ಗ್ರಾ.ಪಂ ವ್ಯಾಪ್ತಿಯ ಬಿಳಿಯೂರಿನ ದರ್ಖಾಸ್ ನಲ್ಲಿ ನಡೆದಿದೆ. ಕೊಲೆಯ ಬಗ್ಗೆ ಅಕ್ಕನ ಮಗನಾದ ಅಪ್ರಾಪ್ತ ಬಾಲಕನ ಮೇಲೆ ತೀವ್ರ ಸಂಶಯ ವ್ಯಕ್ತವಾಗಿದೆ. ದರ್ಖಾಸ್ ನ ಹೇಮಾವತಿ ಮೃತ ಮಹಿಳೆಯಾಗಿದ್ದು, ಜೂನ್ 16 ರಂದು ಮಧ್ಯರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಮೂಡಿದ್ದರಿಂದ ಪೊಲೀಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿದ್ದಾರೆ. ಈ

ಪುತ್ತೂರು: ಕಳೆದುಹೋಗಿದ್ದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ

ಪುತ್ತೂರು ತಾಲೂಕು ಕುಂಬ್ರ ನಿವಾಸಿ ವಿದ್ಯಾ ರೈ ಎಂಬವರ ಸುಮಾರು 27 ಗ್ರಾಂ ತೂಕದ ಚಿನ್ನದ ಸರ ಪುತ್ತೂರು ಗಾಂಧಿ ಕಟ್ಟೆ ಬಳಿ ಕಳೆದುಕೊಂಡಿದ್ದರು. ಈ ಬಂಗಾರದ ಸರ ಕೊಡಿಪಾಡಿ ನಿವಾಸಿ ದಿನೇಶ್ ಭವನ ಲಾಡ್ಜ್ ನೌಕರರಿಗೆ ಸಿಕ್ಕಿದ್ದು ಅದನ್ನು ಪ್ರಾಮಾಣಿಕತೆಯಿಂದ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದು ಬಳಿಕ ವಿದ್ಯಾ ರೈ ಅವರನ್ನು ಠಾಣೆಗೆ ಕರೆಯಿಸಿ ಅವರಿಗೆ ಹಸ್ತಾಂತರಿಸಿದ್ದಾರೆ.

ಪುತ್ತೂರು: ರೈ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ

ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ .ಪ್ರಾ . ಶಾಲೆ ಯ ವಿದ್ಯಾರ್ಥಿ ಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಇಬ್ರಾಹಿಂ , ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಇವರು ಕೊಡೆಗಳನ್ನು ಕೊಡುಗೆಯಾಗಿ

ಪುತ್ತೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ – ಪ್ರತಾಪ ಸಿಂಹ ನಾಯಕ್ ವಿಶ್ವಾಸ

ಪುತ್ತೂರು: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಮಹಾಸಭೆ

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅದ್ಯಕ್ಷ ಕಾರ್ಯದರ್ಶಿ ಕಾರ್ಯಕಾರಿ ಸಮೀತಿ ರಚಿಸಲಾಯಿತು. ಶಿಕ್ಷಣ ಸಂಪನ್ಮೂಲ ಒಕ್ಕೂಟದ ಪ್ರತಿನಿಧಿಯಾಗಿ ನಾರಾಯಣ ಕಿಲಂಗೊಡಿ ಆಗಮಿಸಿದ್ದರು. ಸಲಹಾ ಸಮೀತಿಗೆ ಕಸ್ತೂರಿ ಬೊಳುವಾರ್ ಮತ್ತು ನಯನಾ ರೈ, ಪತ್ರಕರ್ತ ಸಂಶುದ್ದೀನ್ ಸಂಪ್ಯ, ನೋಟರಿ ಸಾಹಿರಾ ಜುಬೈರ್ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಅದ್ಯಕ್ಷರಾಗಿ ಮೊಹಮ್ಮದ್ ರಫೀಕ್ ದರ್ಬೆ, ಉಪಾದ್ಯಕ್ಷರಾಗಿ ರೋಹಿಣಿ ರಾಘವ,