Home Archive by category Puttur (Page 7)

ಸದನದಲ್ಲಿ ತುಳುವಿಗಾಗಿ ಹೋರಾಟ – ತುಳು ಅಕಾಡೆಮಿಯಿಂದ ಶಾಸಕರಿಗೆ ಸನ್ಮಾನ

ಪುತ್ತೂರು: ವಿಧಾನಸಭಾ ಅಧಿವೇಶನದಲ್ಲಿ ತುಳು ವಿನಲ್ಲೇ ಮಾತನಾಡುವ ಮೂಲಕ ,ತಾನು ಶಾಸಕನಾಗಿ ಆಯ್ಕೆಯಾದ ಮೊದಲ ಅಧಿವೇಶನದಲ್ಲೂ ತುಳು ಬಗ್ಗೆ ಸದನಕ್ಕೆ ಪರಿಚಯಿಸುವ ಮೂಲಕ ತುಳುವಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಕರ್ನಾಟಕ ರಾಜ್ಯ ತುಳು ಅಕಾಡೆಮಿಯಿಂದ ಗೌರವ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.ಕರ್ನಾಟಕ ತುಳು ಅಕಾಡೆಮಿ

ಪುತ್ತೂರು: ಸರ್ವೆ ಗೌರಿ ಹೊಳೆ ಬಳಿ ನಾಪತ್ತೆಯಾಗಿದ್ದ ಸನ್ಮಿತ್‌ ಮೃತದೇಹ ಪತ್ತೆ

ಪುತ್ತೂರು: ಸರ್ವೆ ಗೌರಿ ಹೊಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್‌ (21) ಮೃತದೇಹ ಪತ್ತೆಯಾಗಿದೆ.ಸರ್ವೆಯ ಗೌರಿ ಹೊಳೆಯ ಸೇತುವೆಯ ಬಳಿ ಮೃತದೇಹ ಪತ್ತೆಯಾಗಿದೆ. ಜು.19ರ ರಾತ್ರಿಯಿಂದ ಸನ್ಮಿತ್‌ ಕಾಣೆಯಾಗಿದ್ದು, ಆತನ ಸ್ಕೂಟರ್‌ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್‌ ತಂದೆ ಚಂದ್ರಗೌಡ ನೀಡಿದ ದೂರಿನಂತೆ ನಿನ್ನೆ ಬೆಳಿಗ್ಗಿನಿಂದಲೇ ಪೊಲೀಸರು ಮತ್ತು

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಶ್ರೀ ಸುಂದರ ಗೌಡ ಅವರಿಗೆ ಎವಿಜಿ ಶಾಲೆಯಲ್ಲಿ ಅಭಿನಂದನೆ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ – ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು

ಗ್ರಾಪಂ ಕಚೇರಿಯಲ್ಲಿ ನಡೆಯುತ್ತಿದ್ದ 9/11 ನ್ನು ಮುಡಾಕ್ಕೆ ಮಾಡಿಸಿದ್ದೇ ಬಿಜೆಪಿ ಸರಕಾರ

ಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಸರಕಾರ ಎಂದಿಗೂ ಜನರಿಗೆ ತೊಂದರೆ ಕೊಡುವುದೇ ಇಲ್ಲ. ಬಿಜೆಪಿ ಸರಕಾರ

ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡ್ ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ನೂತನ ಕೇಂದ್ರದಲ್ಲಿ 18 ವರ್ಷ

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್ ರವರು 34

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ

ಪುತ್ತೂರಿನ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ,ಕೆ ಸೀತಾರಾಮ ರೈ ಸವಣೂರು ಮಾಹಿತಿ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]

ಉಪ್ಪಿನಂಗಡಿಯ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ

ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ. ಪೃಥ್ವಿ ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಮೊದಲಿಗೆ ಫ್ಯಾನ್ಸಿ ಅಂಗಡಿಯಿಂದ ಹೊಗೆ ಕಾಣಿಸಿಕೊಂಡಿತ್ತು ಬಳಿಕ ಬೆಂಕಿ ವ್ಯಾಪಿಸಿತ್ತು ಎಂದು ಸ್ಥಳೀಯರು