Home Lifestyle Archive by category Health

ಮಂಗಳೂರು : ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ ಉದ್ಘಾಟನೆ

ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತುಗಳಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಸಚಿವರು ಮತ್ತು ಅತಿಥಿಗಳು ನೂತನ, ಸರ್ವಸಜ್ಜಿತ

ಹೆಬ್ಬೆರಳು ಚೀಪುವುದು ಯಾಕೆ?

ಸಣ್ಣ ಮಕ್ಕಳು ಬಾಯಲ್ಲಿ ಕೈಬೆರಳು ಹಾಕಿ ಚೀಪುವುದು ಸಾಮಾನ್ಯ ಲಕ್ಷಣ. ಇದೇನೂ ಬಹಳ ದೊಡ್ಡ ಸಮಸ್ಯೆ ಏನಲ್ಲ. ಸಾಮಾನ್ಯವಾಗಿ ಚಿಕ್ಕ ಮಕ್ಕಳು ಸುಸ್ತಾದಾಗ, ಬೇಸರವಾದಾಗ, ನಿದ್ದೆ ಬರುವ ಹೊತ್ತಲ್ಲಿ, ಸಾಂತ್ವನದ ಅವಶ್ಯಕತೆ ಇದ್ದಾಗ ಹೆಬ್ಬೆರಳನ್ನು ಚೀಪುವುದು ಕಂಡು ಬರುತ್ತದೆ. ಈ ಬೆರಳು ಚೀಪುವ ಅಭ್ಯಾಸ ಗರ್ಭಾವಸ್ಥೆಯ (15ನೇ ವಾರದಲ್ಲಿ) ಆರಂಭವಾಗುತ್ತದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಗರ್ಭಾಶಯದ ಒಳಗೆ ಮಗು ದಿನಕ್ಕೆ ನೂರಾರು ಬಾರಿ ಆಕಳಿಸುತ್ತದೆ ಎಂದೂ

ಫೋರ್ಡೇಸ್ ಸ್ಪಾಟ್ಸ್

ಫೋರ್ಡೇಸ್ ಸ್ಪಾಟ್ಸ್ ಎನ್ನುವುದು ಬಾಯಿಯ ಒಳಗೆ ಕೆನ್ನೆಯ ಒಳಭಾಗದಲ್ಲಿ, ತುಟಿಗಳ ಒಳಭಾಗದಲ್ಲಿ ಕಂಡು ಬರುವ ಬಿಳಿ ಮತ್ತು ಹಳದಿ ಮಿಶ್ರಿತ ಚಿಕ್ಕದಾದ ಉಬ್ಬುಗಳಾಗಿರುತ್ತದೆ. ನೋಡಲು ಒಂದು ರೀತಿಯಲ್ಲಿ ಅಸಹ್ಯವಾಗಿ ಕಾಣುವ ಈ ಸ್ಪಾಟ್‍ಗಳು, ರೋಗಿಗಳನ್ನು ಕೆಲವೊಮ್ಮೆ ದಿಗಿಲುಗೊಳಿಸಿ ಕ್ಯಾನ್ಸರ್ ಎಂದು ತಲೆÀಕೆಡಿಸಿಕೊಂಡು ದಂತ ವೈದ್ಯರನ್ನು ಸತಾಯಿಸುವುದು ಕಂಡುಬಂದಿದೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಗಳ ಬಾಯಿಯೊಳಗಿನ ಕೆನ್ನೆಯ ಒಳಭಾಗ, ತುಟಿಗಳ ಒ¼ಭಾಗ

ನಾಲಿಗೆ ಹೇಳುವ ವೈದ್ಯ ಲೋಕದ ಸತ್ಯಗಳು

ರೋಗ ಪತ್ತೆಗೆ ರಹದಾರಿ ನೀಡುವ ನಾಲಗೆನಾಲಗೆ ನಮ್ಮ ದೇಹದ ಬಹಳ ಮುಖ್ಯವಾದ ಅಂಗ. ಜೀರ್ಣಾಂಗ ವ್ಯವಸ್ಥೆಯು ಪ್ರಾಥಮಿಕ ಹಂತದಲ್ಲಿ ಅಂದರೆ ಹೆಬ್ಬಾಗಿಲಿನಲ್ಲಿ ಇರುವ ನಾಲಗೆ, ಜೀರ್ಣ ಪ್ರಕ್ರಿಯೆಗೆ ಅತೀ ಅಗತ್ಯ. ನಾವು ತಿನ್ನುವ ಆಹಾರದ ರುಚಿ ಸವಿಯಲು, ಆಹಾರ ಪದಾರ್ಥಗಳನ್ನು ಸೂಕ್ತವಾಗಿ ಜಗಿಯಲು, ಸ್ಪಷ್ಟವಾಗಿ ಮಾತನಾಡಲು ನಾಲಗೆಯ ಸಹಕಾರ ಅತೀ ಅಗತ್ಯ. ಈ ಕಾರಣದಿಂದಲೇ ನಮ್ಮ ಹಿರಿಯರು “ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ” ಎಂದು ಹೇಳಿದ ಮಾತು ಬಹಳ

ವಿಶ್ವ ಬೊಜ್ಜು ಜಾಗ್ರತಿದಿನ..ಅಕ್ಟೋಬರ್26

ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26 ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆ ಯನ್ನು ವಿಶ್ವ ಆರೋಗ್ಯ ಸಂಸ್ಥೆ 2015 ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ

ಲೀಚ್ ಥೆರಪಿ

ಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ ಬಳಸುತ್ತಾರೆ. ಕಾಡು ಪ್ರದೇಶಗಳಲ್ಲಿ ತೇವವಿರುವ ಜಾಗಗಳಲ್ಲಿ ಹೇರಳವಾಗಿ ಕಂಡು ಬರುವ ಈ

ವಿಶ್ವ ರೇಬಿಸ್ ದಿನ, ಸೆಪ್ಟಂಬರ್ 28

ಪ್ರತಿ ವರ್ಷ ಸೆಪ್ಟಂಬರ್ 28ರಂದು ವಿಶ್ವದಾದ್ಯಂತ ವಿಶ್ವ ರೇಬಿಸ್ ದಿನ ಎಂದು ಆಚರಿಸಿ, ರೇಬಿಸ್ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. 2007ನೇ ವರ್ಷದಿಂದ ಈ ಆಚರಣೆ ಜಾರಿಗೆ ಬಂದಿತು. 2023ನೇ ವರ್ಷದ ಆಚರಣೆಯ ಧ್ಯೇಯ ವಾಕ್ಯ “Rabies one health, Zero Deaths” ಅಂದರೆ “ರೇಬಿಸ್ ಒಂದೇ ಆರೋಗ್ಯ, ಶೂನ್ಯ ಸಾವು” ಎಂಬುದಾಗಿದೆ. ಸೆಪ್ಟಂಬರ್ 28ರಂದು ಮೊದಲ ರೇಬಿಸ್ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ ಪ್ರೆಂಚ್ ರಸಾಯನ ಶಾಸ್ತ್ರ ತಜ್ಞ ಹಾಗೂ ಸೂಕ್ಷ್ಮ

ಆಲ್ಜೀಮರ್ಸ್ ಎಂಬ ಅರುಳು ಮರುಳು ರೋಗ

ನಾವೆಲ್ಲಾ ಆಲ್ಜೀಮರ್ಸ್ ಬಗ್ಗೆ ಬಹಳಷ್ಟು ವಿಚಾರ ತಿಳಿದು ಕೊಂಡಿದ್ದರೂ, ಸಂಪೂರ್ಣವಾದ ನಿಖರವಾದ ಮಾಹಿತಿ ಯಾರ ಬಳಿಯೂ ಇಲ್ಲದಿರುವುದೇ ವಿಷಾದದ ವಿಚಾರ. ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳನ್ನು ಅಲ್ಜೀಮರ್ಸ್ ತಿಳುವಳಿಕಾ ತಿಂಗಳು ಮತ್ತು ಸೆಪ್ಟೆಂಬರ್ 21 ರಂದು ಅಲ್ಜೀಮರ್ಸ್ ತಿಳುವಳಿಕಾ ದಿನ ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಹೆಚ್ಚಿನ ಜನರು ಈ ರೋಗ ಇಳಿ ವಯಸ್ಸಿನ ಜನರಲ್ಲಿ ಮಾತ್ರ ಬರುತ್ತದೆ ಎಂದು ತಪ್ಪು ಕಲ್ಪನೆಯನ್ನು ಹೊಂದಿದ್ದಾರೆ. ತಮ್ಮ

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ಜೂನ್ 26 ರಂದು ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ ಜೂನ್ 26 ರ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಸಭಾಂಗಣದಲ್ಲಿ ಜರಗಲಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.

ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯ ಮಾಹೆ ಮಣಿಪಾಲದ ಸಂಸ್ಥಾಪಕರಾದ ಡಾ. ಟಿ.ಎಂ.ಎ.ಪೈ ಅವರ 125ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ, ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಮಂಗಳವಾರದಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ, ಈ ವರ್ಷ ನಮ್ಮ ದೂರದೃಷ್ಟಿಯ ಸಂಸ್ಥಾಪಕ ನಾಯಕ ಡಾ. ಟಿ. ಎಂ. ಎ. ಪೈ ಅವರ 125 ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಅವರ ಉದಾತ್ತ