Home Archive by category udupi (Page 12)

ಕುಂದಾಪುರ: ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ತಿರುಮಲ ಕಾಂಪ್ಲೆಕ್ಸ್‍ನಲ್ಲಿ ಹರೀಶ್ ಮಾಲೀಕತ್ವದ ನೂತನವಾಗಿ ಆರಂಭಗೊಂಡಿರುವ ಬೆಂಗಳೂರು ಅಯ್ಯಂಗಾರ್ ಬೇಕರಿ ಅದ್ದೂರಿಯಾಗಿ ಶುಭಾರಂಭಗೊಂಡಿದೆ ಅಯ್ಯಂಗಾರ್ ಬೇಕರಿ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಬೇಕರಿ

ಡಾ. ನರೇಶ್ಚಂದ್ ಹೆಗ್ಡೆ ಪರ ಉಡುಪಿಯಲ್ಲಿ ನಟ ಅರವಿಂದ ಬೋಳಾರ್ ಪ್ರಚಾರ

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದು ಅವರ ಪರವಾಗಿ ಉಡುಪಿಯಲ್ಲಿ ನಟ ಅರವಿಂದ ಬೋಳಾರ್ ಅವರು ಮತಪ್ರಚಾರ ಮಾಡಿದರು. ಶಿಕ್ಷಕರ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಲೆಂದು ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದಾರೆ. ಅವರನ್ನು ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಹಲವಾರು ಮಂದಿ ಪಣತೊಟ್ಟಿದ್ದಾರೆ. ಡಾ.

ಉಡುಪಿ: ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ

ಉಡುಪಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ – ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ

ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲೆಯ ಕುಡಿಯುವ ನೀರಿನ

ಶ್ರೀ ಶಾರದ ಸದ್ವಿದ್ಯಾ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮ

ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕøತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ ಮತ್ತು ವೇದ ಶಾಸ್ತ್ರ ಸೇರಿದಂತೆ ಸನಾತನ ಪರಂಪರೆನ್ನು ಹೊಂದಿರುವ ಭಾರತೀಯ ವಿದ್ಯೆಗೆ ಆಧುನಿಕ

ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಹಾಗೂ ಜನಪ್ರಿಯ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಮುಂಜಾಜೆ ಬೆಂಗಳೂರಿನ ಅವರ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ ಅವರಿಗೆ 67 ವರ್ಷ ಪ್ರಾಯವಾಗಿತ್ತು. ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು. ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ

ಕರಾವಳಿ ಯಾವತ್ತೂ ಭಾಗದಲ್ಲಿ ಜಾತಿ ರಾಜಕಾರಣ ನಡೆಯುದಿಲ್ಲ : ಗುರ್ಮೆ ಸುರೇಶ್ ಶೆಟ್ಟಿ

ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಭಾವನೆಯಿಂದ ಹೊರ ಬರ ಬೇಕಾಗಿದೆ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ. ಜನ ಜಾತಿ ನೋಡಿ ಮತ ಚಲಾಯಿಸಿದ್ದರೆ ನಾನು ಶಾಸಕನಾಗಿ

ಉಡುಪಿ: ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್

ಉಡುಪಿಯಲ್ಲಿರುವ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್‌ನ್ನು ಆಯೋಜಿಸಿದ್ದಾರೆ. ಉಡುಪಿಯ ಪ್ರಸಿದ್ಧ ಹೋಟೆಲ್‌ಗಳಲ್ಲಿ ಒಂದಾದ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ವಿಶೇಷ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸ್ಪಷೆಲ್ ಡಿನ್ನರ್ ಬಫೆಟ್‌ನ್ನು ಖಾದ್ಯ ಪ್ರೀಯರಿಗಾಗಿ ಆಯೋಜಿಸುತ್ತಿದ್ದಾರೆ. ಶಮಿ ಟಿಕ್ಕಿ, ಕಾಬೂಲಿ ಚಾನಾ ಕಬಾಬ್, ಸೂಕಿ ಖಾಲ ಚಾನಾ, ಆಲೂ ತಮಾಟರಿ ಕರಿ, ಪನೀರ್ ಕೋಫ್ತಾ, ರಾಜ್ಮಾ ಕರಿ, ಸಿಂಗಾರ ಪುರಿ, ರೈಸ್ ಕೀರ್,

ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು

ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದು ನಾನು ಹೇಳಿದ್ದೆ. ಈ ಮಾತು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೋಪಾಲ ಪೂಜಾರಿ ಅವರ ಮಾತಿಗೆ ತಿರುಗೇಟು

ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು