Home Archive by category ullala

ಉಳ್ಳಾಲ: ಬೈಕ್ ಢಿಕ್ಕಿ- ಪಾದಚಾರಿ ಬೇಕರಿ ಮಾಲೀಕ ಸಾವು

ಉಳ್ಳಾಲ: ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49)ಮೃತರು. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿ ಬೇಕರಿ ಇದ್ದು, ಎದುರಿನ ಹೆದ್ದಾರಿ ಬದಿಯಲ್ಲೇ ಮನೆಯಿದೆ. ಭಾನುವಾರದಂದು ತಲಪಾಡಿ

ಉಳ್ಳಾಲ: ಮೂಲಭೂತ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಯು.ಟಿ ಖಾದರ್

ಉಳ್ಳಾಲ: ಚುನಾವಣಾ ಸಂದರ್ಭದಲ್ಲಿ ಅಭಿವೃದ್ಧಿ ಗೆ ಸಂಬಂಧಿಸಿದಂತೆ ಯಾವುದೆಲ್ಲ ಭರವಸೆ ನೀಡಿದ್ದೇನೆ ಯೊ ಅದನ್ನು ಮುಂದಿನ ವರ್ಷದಲ್ಲಿ ಕಾರ್ಯಗತ ಗೊಳಿಸಲಾಗುವುದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.ಅವರು ಕೋಟೆಕಾರ್ ಪ.ಪಂ‌ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ರಸ್ತೆಗಳ ಅಭಿವೃದ್ಧಿ ಆಗಿದೆ.ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಗೆ 70 ಕೋಟಿ ರೂ. ಮಂಜೂರು ಮಾಡಲಾಗಿದೆ.ಈ ಪೈಕಿ 25 ಕೋಟಿ ರೂ

ನರಿಂಗಾನದ ಕಲ್ಲರಕೋಡಿಯಲ್ಲಿ ಅಂಗನವಾಡಿ ಕೇಂದ್ರದ ಡಿಜಿಟಲ್ ವ್ಯವಸ್ಥೆ ಉದ್ಘಾಟನೆ

ಸ್ವಂತ ಕಟ್ಟಡಗಳು ಇರುವ ಅಂಗನವಾಡಿಗಳಿಗೆ ಡಿಜಿಟಲ್ ವ್ಯವಸ್ಥೆ ಆಗಿದೆ. ಉಳಿದ ಕೇಂದ್ರಗಳಿಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಬೇಕಿದೆ. ನರಿಂಗಾನದಲ್ಲಿ ಗ್ರಾಮ ಪಂಚಾಯಿತಿ ಮುತುವರ್ಜಿ ವಹಿಸಿರುವುದು ಉತ್ತಮ ಬೆಳವಣಿಗೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.ನರಿಂಗಾನದ ಕಲ್ಲರಕೋಡಿಯಲ್ಲಿ ಅಂಗನವಾಡಿ ಕೇಂದ್ರದ ಡಿಜಿಟಲ್ ವ್ಯವಸ್ಥೆ ಶನಿವಾರ ಉದ್ಘಾಟಿಸಿ ಮಾತನಾಡಿದರು.ಸ್ಥಳದಾನಿಗಳಾದ ಮಹಮ್ಮದ್ ಪಾರೆ, ರಝಾಕ್ ಪಾರೆ, ಮಜೀದ್ ಪಾರೆ, ಜನಶಿಕ್ಷಣ

ಉಳ್ಳಾಲ: ಅಸೈಗೋಳಿಯಲ್ಲಿ ಬಸ್ ನಿಲ್ದಾಣ ಲೋಕಾರ್ಪಣೆ

ಉಳ್ಳಾಲ: ಗ್ರಾಮೀಣ ಭಾಗದಲ್ಲಿ ವಿಶೇಷ ಸಾಮಾಜಿಕ ಕಳಕಳಿಯೊಂದಿಗೆ ಬಾಳಿ ಇತರರಿಗೆ ಮಾದರಿಯಾದವರು. ಅವರ ಹೆಸರಿನಲ್ಲಿ ಮಕ್ಕಳು ಸಮಾಜಕ್ಕೆ ಬಸ್ಸು ನಿಲ್ದಾಣವನ್ನು ಕೊಟ್ಟಿರುವುದು ಹೆತ್ತವರಿಗೆ ಕೊಡುವ ಬಹುದೊಡ್ಡ ಗೌರವವಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಮಂಜನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸೈಗೋಳಿಯಲ್ಲಿ ದಿ| ಪಟ್ಟೋರಿ ಮೊಯ್ದೀನ್ ಕುಂಞಿ ಸ್ಮಾರಕ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಅಗಲಿದ ಪಟ್ಟೋರಿ

ಮುಡಿಪು : ಕುರ್ನಾಡು ಗ್ರಾ.ಪಂ ಎದುರು ಪ್ರತಿಭಟನೆ

ಮುಡಿಪು : ಪೌರಕಾರ್ಮಿಕನಾಗಿ ಕಳೆದ 20 ವರ್ಷಗಳಿಂದ ದುಡಿಯುತ್ತಿದ್ದ ಬಾಬಣ್ಣ ಅವರನ್ನು ಏಕಾಏಕಿ ಕೆಲಸದಿಂದ ತೆಗೆದು, ಯಾವುದೇ ಸರಕಾರಿ ಸೌಲಭ್ಯವನ್ನು ನೀಡದ ಕುರ್ನಾಡು ಗ್ರಾಮದ ಅಭಿವೃದ್ಧಿ ಅಧಿಕಾರಿ ಹಾಗೂ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಮುಡಿಪು ಕುರ್ನಾಡುವಿನ ಗ್ರಾ.ಪಂ ಕಚೇರಿಯೆದುರು ಪ್ರತಿಭಟನೆ ನಡೆಯಿತು. ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಪ್ರತಿಭಟೆನೆ ಉದ್ದೇಶಿಸಿ ಮಾತನಾಡಿ, ಕೊರಗ ಸಮುದಾಯದ ಬಾಬಣ್ಣ

ಉಳ್ಳಾಲ: ಕಾರ್, ಬೈಕ್ ಗೆ ಢಿಕ್ಕಿ: ಕೊಲ್ಯ ನಿವಾಸಿ ದಾರುಣ ಸಾವು

ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ

ನಾಪತ್ತೆಯಾದ ವಿವಾಹಿತನ ಮೃತದೇಹ ಪತ್ತೆ

ಉಳ್ಳಾಲ: ಕಳೆದ ಸೋಮವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಠೆ , ಕಲಶಾಭಿಷೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ

ಉಳ್ಳಾಲ: ಗಾಂಜಾ ಮತ್ತಿನಲ್ಲಿ ದಾಂಧಲೆ: ಸಾರ್ವಜನಿಕರಿಂದ ತರಾಟೆ, ಪೊಲೀಸರಿಂದ ಬಂಧನ

ಉಳ್ಳಾಲ: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸಿದ್ದು, ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮದ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ

ಉಳ್ಳಾಲ: ಯುವಕನ ಕೊಲೆಯತ್ನ : ಆರೋಪಿ ಬಂಧನ

ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಕುಂಪಲ ನಿವಾಸಿ ಮಹಮ್ಮದ್ ಆರೀಫ್(29)ಇರಿತಕ್ಕೊಳಗಾದ ಯುವಕ.ಆರೀಫ್ ಶುಕ್ರವಾರ ಬೆಳಿಗ್ಗೆ ಕೊಲ್ಯದಿಂದ-ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ಧಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ-ಕೊಲ್ಯ ಕಡೆಗೆ ಬೈಕಿನಲ್ಲಿ

ತೊಕ್ಕೊಟ್ಟು: ಐಸ್ ಕ್ರೀಮ್ ಪಾರ್ಲರ್ ವೈಟರ್ ಆತ್ಮಹತ್ಯೆ

ಉಳ್ಳಾಲ: ಐಸ್ ಕ್ರೀಮ್ ಪಾರ್ಲರ್ ಒಂದರ ವೈಟರ್ ಆಗಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬಾತ ಪಿಲಾರ್ ನ ಗೋಡೌನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಡೌನ್ ನ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಿಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ