ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ
ಉಳ್ಳಾಲ : ಮದನಿನಗರ ಬಳಿ ಕಂಪೌಂಡ್ ವಾಲ್ ಬಿದ್ದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಉಳ್ಳಾಲ ನಗರಸಭಗೆ ಕೌನ್ಸಿಲರ್ ಓರ್ವರು ಅಪಾಯದಂಚಿನಲ್ಲಿರುವ ಮನೆಮಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದು, ಮನವಿಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಇಂದು ಮನೆ ಮಹಡಿ ಕುಸಿದು ಮನೆಯೊಳಗಿದ್ದ ಬಾಲಕಿ ಸೇರಿದಂತೆ ತಂದೆ ಗಾಯಗೊಂಡ ಘಟನೆ ಉಳ್ಳಾಲ ನಗರಸಭೆ ವ್ಯಾಪ್ತಿಯ ಮೇಲಂಗಡಿ ಮಸೀದಿ ಸಮೀಪ ನಡೆದಿದೆ. ಮನೆಯೊಳಗಿದ್ದ ಅಬ್ಬಾಸ್ ಹಾಗೂ ಅವರ ಪುತ್ರಿ ಮನೆ ಕುಸಿತದ ಸಂದರ್ಭ
ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ ಉದ್ಘಾಟನೆ ನೆರವೇರಿಸಿ ಮಾತನಾಡಿ, “ಹಿಂದಿನ ಕಾಲದಲ್ಲಿ ಆಟಿ ತಿಂಗಳು ತುಳುವರ ಕಷ್ಟದ ದಿನಗಳಾಗಿತ್ತು.
ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ
ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ (65) ಎಟ್ಟಿಕುಳದಲ್ಲಿ ಸೋಮವಾರ ವಿಧಿವಶರಾದರು.ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ಆಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಮನೆಯೊಂದರ ಗಾಡ್ರೆಜ್ನೊಳಗಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿಗಳಾದ ಶ್ರೇಯಸ್, ತೌಸೀಫ್ ಹಾಗೂ ಉರ್ವ ನಿವಾಸಿ ಪೃಥ್ವಿರಾಜ್ ಬಂಧಿತ ಮೂವರು ಆರೋಪಿಗಳು. ಧರ್ಮನಗರ ನಿವಾಸಿ ಶ್ರೀಧರ್ ಎಂಬವರ ಮನೆಯಲ್ಲಿ ಜೂನ್ 8ರ ಬೆಳಗ್ಗೆ 8ರಿಂದ ಜೂ.16ರ ಮಧ್ಯಾಹ್ನ 12ರ ನಡುವೆ ನಡುವೆ 15
ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ,ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.ಜೂ.28 ರಂದು ಗಣೇಶ ಪಾವೂರು
ಉಳ್ಳಾಲದ ಮದನಿ ನಗರದಲ್ಲಿ ಕಂಪೌoಡ್ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರ ಜೊತೆಗೆ ಸ್ಪೀಕರ್ ಖಾದರ್ ಅವರ ಜೊತೆಗಿದ್ದರು.ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಗ್ರಾ.ಪಂ ಅಧಿಕಾರಿಗಳ ಮೂಲಕ ಅಪಾಯಕಾರಿ ಪಾಯಿಂಟ್ಗಳನ್ನು ಸರ್ವೇ ನಡೆಸಲು ಸೂಚಿಸಲಾಗಿದೆ. ತೀವ್ರತರದಲ್ಲಿ ಅಪಾಯ ಇರುವ ಸ್ಥಳಗಳಲ್ಲಿ ತುರ್ತು ಪರಿಹಾರ ಕ್ರಮಕ್ಕೆ ಆದೇಶಿಸಲಾಗಿದೆ.
ಉಳ್ಳಾಲ : ನಮ್ಮ ನಾಡ ಒಕ್ಕೂಟ ಇದರ ಆಶ್ರಯದಲ್ಲಿ ಮಂಗಳೂರು ಕಮ್ಯುನಿಟಿ ಸೆಂಟರ್ ತೊಕ್ಕೊಟ್ಟುವಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಆರಂಭಗೊಂಡಿತು. ವಿಧಾನ ಸಭಾ ಸ್ವೀಕರ್ ಯು ಟಿ ಖಾದರ್ ಫರೀದ್ ಮಂಗಳೂರು ಕಮ್ಯುನಿಟಿ ಸೆಂಟರ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಜನರಿಗೆ ಮೂಲಭೂತ ಸೌಕರ್ಯ ಗಳನ್ನು ಪಡೆಯಲು ಇಂತಹ ಸೇವೆ ಅವಶ್ಯಕತೆ ಇದೆ.ಶಿಕ್ಷಣ, ಉದ್ಯೋಗ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಅಗತ್ಯ ಇರುತ್ತದೆ.ಇದನ್ನು ನಮ್ಮ ನಾಡ ಒಕ್ಕೂಟ ಉಚಿತ ವಾಗಿ
ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್ ಎಂಬವರ ಕೆ.ಕೆ.ಫ್ರೂಟ್ಸ್, ಇಂಡಿಯನ್, ಸಲಾಂ ಅವರ ಬಿ.ಎಸ್.ಆರ್, ಝುಲ್ಫೀಕರ್ ಅವರ ಪಿಕೆಎಸ್, ನಾಸೀರ್




























