ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬೊಮ್ಮಾಯಿ

ಚೈತ್ರಾ ಕುಂದಾಪುರ ಪ್ರಕರಣದ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ.ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಟಕೆಟ್ ಕೊಡಿಸುತ್ತೇವೆಂದು ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧವಿಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡುತ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧವಿಲ್ಲ. ತನಿಖೆ ಆಗಿ ಸತ್ಯ ಹೊರ ಬರಲಿ ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿ ಕುರಿತಾಗಿ ಮಾತನಾಡಿದ ಅವರು, ಇದುವರೆಗೂ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ. ಸದ್ಯ ಪ್ರಾಥಮಿಕ ಹಂತದಲ್ಲಿದೆ. ಮುಂಬರುವ ದಿನಗಳಲ್ಲಿ ವರಿಷ್ಠರು ಚರ್ಚಿಸಲಿದ್ದಾರೆ. ಮೈತ್ರಿ ಸಮಯದಲ್ಲಿ ನಮ್ಮನ್ನು ಮಾತನಾಡಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

Related Posts

Leave a Reply

Your email address will not be published.