ಸಿಎಂ ಸಿದ್ದರಾಮಯ್ಯ ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 1ರಂದು ಬೆಳಿಗ್ಗೆ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳುವರು. 12.30ಕ್ಕೆ ಉಡುಪಿ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4.15ಕ್ಕೆ ದ.ಕ. ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ದ.ಕ.ಜಿಪಂ ಸಭಾಂಗಣದಲ್ಲಿ ನಡೆಸಲಿದ್ದಾರೆ. ರಾತ್ರಿ 9.50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.