ನೆಲ್ಯಾಡಿ:ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ
ನೆಲ್ಯಾಡಿ: ಬಯಲು ಆಲಯ ಎಂದೇ ಪ್ರಖ್ಯಾತಿ ಪಡೆದಿರುವ ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ರಾಹುಲ್ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಹಾಗೂ ಅರ್ಚಕರು ಉಪಸ್ಥಿತರಿದ್ದರು.