ದೇರಳಕಟ್ಟೆ: ಕ್ಲಾಕ್ ಟವರ್ ಉದ್ಘಾಟನೆ
ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಕಣಚೂರು ‘ಕ್ಲಾಕ್ ಟವರ್’ ವೃತ್ತವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು.
ಈ ಸಂದರ್ಭ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ.ಮೋನು ಕಣಚೂರು ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಕಣಚೂರು ಸಂಸ್ಥೆಯ ಮೆಡಿಕಲ್ ಆಫೀಸರ್ ಡಾ. ರೋಹನ್ ಮೋನಿಸ್ ಮತ್ತಿತರರು ಉಪಸ್ಥಿತರಿದ್ದರು.


















