HomeFresh Newsಕಲಶ ಕಟ್ಟುತ್ತಿದ್ದಾಗ ರಥದಿಂದ ಜಾರಿ ಬಿದ್ದು ವ್ಯಕ್ತಿ ಸಾವು

ಕಲಶ ಕಟ್ಟುತ್ತಿದ್ದಾಗ ರಥದಿಂದ ಜಾರಿ ಬಿದ್ದು ವ್ಯಕ್ತಿ ಸಾವು

ವಿಜಯಪುರದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಗೊಲ್ಲಾಳೇಶ್ವರ ರಥೋತ್ಸವದ ಹಿನ್ನೆಲೆಯಲ್ಲಿ ಸಾಹೇಬಪಟೇಲ್ ಖಾಜಾಪಟೇಲ್ ಎಂಬವರು ರಥದ ತುತ್ತ ತುದಿಯಲ್ಲಿ ಕಲಶ ಕಟ್ಟುತ್ತಿದ್ದರು. ಈ ವೇಳೆ ಸಾಹೇಬಪಟೇಲ್ ಅವರು ಕಾಲು ಜಾರಿ ರಥದಿಂದ ಬಿದ್ದಿದ್ದಾರೆ ಎನ್ನಲಾಗಿದೆ.

vijayapura kalasha kattuthidhaga rathadindha vyakthi savu

ಕಲಶ ಕಟ್ಟುವಾಗ ಕೈಯಲ್ಲಿದ್ದ ಹಗ್ಗ ಜಾರಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಗ್ರಾಮಸ್ಥರು ಗಾಯಾಳು ಸಾಹೇಬಪಟೇಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯ ದೃಶ್ಯಾವಳಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಲಿಕೇರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments