HomeFresh Newsಗುರು ಬ್ರಹ್ಮ ಜನರಲ್ ಸ್ಟೋರ್ ಬೆಂಕಿಗಾಹುತಿ : ತೆಕ್ಕಟ್ಟೆ ಶ್ರೀ ಬ್ರಹ್ಮ ಸ್ಥಾನ ಸಮೀಪ...

ಗುರು ಬ್ರಹ್ಮ ಜನರಲ್ ಸ್ಟೋರ್ ಬೆಂಕಿಗಾಹುತಿ : ತೆಕ್ಕಟ್ಟೆ ಶ್ರೀ ಬ್ರಹ್ಮ ಸ್ಥಾನ ಸಮೀಪ ನಡೆದ ಘಟನೆ

ಕುಂದಾಪುರ : ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ಶ್ರೀ ಬ್ರಹ್ಮ ಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಇಡೀ ಅಂಗಡಿ, ಬೆಂಕಿಗಾಹುತಿಯಾದ ಘಟನೆ ಸೋಮವಾರ ತಡರಾತ್ರಿ ಸುಮಾರು 1.30 ಕ್ಕೆ ಸಂಭವಿಸಿದೆ.


ಅಂಗಡಿ ಮಾಲೀಕರಾದ ಸಂತೋಷ್ ಅವರು ಎಂದಿನಂತೆ ವ್ಯಾಪಾರ ಮುಗಿಸಿ ಮನೆಗೆ ತೆರಳಿದ ಬಳಿಕ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಇಡೀ ಅಂಗಡಿಗೆ ಹರಡಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಾಗ್ರಿಗಳು, ಫ್ರಿಡ್ಜ್ ಹಾಗೂ ಪೀಠೋಪಕರಣಗಳು ಬೆಂಕಿಗೆ ಭಸ್ಮವಾಗಿವೆ.


ಅಂಗಡಿಯಲ್ಲಿದ್ದ ಮೂರಕ್ಕೂ ಹೆಚ್ಚು ಫ್ರಿಡ್ಜ್ ಗಳ ಪೈಕಿ ಒಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದೆ. ಎಂದು ಶಂಕಿಸಲಾಗಿದೆ. ಈ ಅಗ್ನಿ ಅವಘಡದಿಂದ ಸುಮಾರು 40 ಲಕ್ಷಕ್ಕೂ ಅಧಿಕ ರೂಪಾಯಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments