ಹಾಸನ: ಎತ್ತಿನಹೊಳೆ ಯೋಜನೆ ಕಾಮಗಾರಿ ವೀಕ್ಷಿಸಿದ ಡಿಕೆಶಿ
ಹಾಸನ ಜಿಲ್ಲೆ ಹೆಬ್ಬಾನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಯ ವೀಕ್ಷಣೆಗೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಗಮಿಸಿದ್ದರು. ಇದೇ ವೇಳೆ ಪೆÇಲೀಸರಿಂದ ಗೌರವ ಸಮರ್ಪಣೆ ಸ್ವೀಕರಿಸಿದರು. ನಂತರ ಯೋಜನೆ ಕುರಿತಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನೆಯನ್ನು ನಡೆಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಡಾನೆ ಹಾವಳಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ಸಂಸದರಾದ ಡಿ ಕೆ ಸುರೇಶ್, ಹಾಸನ ಲೋಕಸಭಾ ಸಂಸದರಾದ ಪ್ರಜ್ವಲ್ ರೇವಣ್ಣ, ಅರಸೀಕೆರೆ ವಿಧಾನ ಸಭಾ ಕ್ಷೆತ್ರದ ಶಾಸಕರಾದ ಶಿವಲಿಂಗಗೌಡ. ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು, ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.