‘ಎಚ್ಇಎಫ್’ ರಾಷ್ಟ್ರೀಯ ಮಟ್ಟದ ಸಮ್ಮೇಳನ : ಯಶ್ ಪಾಲ್ ಸುವರ್ಣ ಭಾಗಿ

ಮಣಿಪಾಲದ ವ್ಯಾಲಿ ವ್ಯೂ ನಲ್ಲಿ ಹಿಂದೂ ಎಕನಾಮಿಕ್ ಫೋರಮ್ ರಾಷ್ಟ್ರೀಯ ಮಟ್ಟದ ಸಮ್ಮೇಳನವು ಮೇ 28, 2023 ರ ಭಾನುವಾರದಂದು ಜರುಗಿತ್ತು. ಈ ಸಮ್ಮೇಳನದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ ಪಾಲ್ ಸುವರ್ಣ ಭಾಗವಹಿಸಿ, ಸಭೆಯನ್ನುದ್ದೇಶಿಸಿ ಮಾಡನಾಡಿ ಶುಭಹಾರೈಸಿದರು. ಸಮ್ಮೇಳನದಲ್ಲಿ 200 ಕ್ಕೂ ಅಧಿಕ ವ್ಯಾಪಾರೋದ್ಯಮಿಗಳು ಭಾಗವಹಿಸಿದ್ದು, ಹಿಂದೂ ಆರ್ಥಿಕತೆಯ ಅಭಿವೃದ್ದಿಗೆ ಹೊಸ ರೂಪ ಸಿಕ್ಕಿದೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ವಿಗ್ಯಾಆನಂದ್ ಸ್ವಾಮೀಜಿ, ಹಿಂದೂ ಎಕನಾಮಿಕ್ ಫೋರಮ್ ಉಡುಪಿ ಘಟಕದ ಅಧ್ಯಕ್ಷರಾದ ಶಿರಿಯಾರ್ ಗಣೇಶ್ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದಿನೇಶ್ ಸಾಮಂತ್, ಸoಯೋಜಕರಾದ ಕು. ರಶ್ಮಿ ಸಾಮಂತ್, ಶಿವಪ್ರಸಾದ್ ಟಿ. ಆರ್ ಮತ್ತಿತರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.