HomeFresh Newsಕಡಬ: ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ: ಎಐಸಿಸಿ ಸದಸ್ಯ ಸುನಿಲ್ ಕೇದಾರ್

ಕಡಬ: ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ: ಎಐಸಿಸಿ ಸದಸ್ಯ ಸುನಿಲ್ ಕೇದಾರ್

ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿನ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ಶಮನಗೊಂಡಿದ್ದು, ಪಕ್ಷದ ಎಲ್ಲಾ  ನಾಯಕರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದು, ಈ ಬಾರಿ ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್ ಪಕ್ಷವು ಅತ್ಯದಿಕ ಮತಗಳಿಂದ ಗೆಲವು ಸಾದಿಸುವುದು ನಿಶ್ಚಿತ ಎಂದು ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿರುವ ಮಹಾರಾಷ್ಟದ ಮಾಜಿ ಸಚಿವ, ಎಐಸಿಸಿ ಸದಸ್ಯ ಸುನಿಲ್ ಕೇದಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅವರು ಬುಧವಾರ  ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ  ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ  ಜಿ. ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ  ನಂದಕುಮಾರ್ ಅವರ ಜೊತೆಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಕಾಂಗ್ರೆಸ್ ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಬಹುಮತ ಪಡೆದು ಅಽಕಾರ ವಹಿಸಿಕೊಳ್ಳಲಿದೆ. ಕರ್ನಾಟಕ ರಾಜ್ಯದ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರು ಪಕ್ಷದ ರಾಷ್ಟಿçಯ ಅಧ್ಯಕ್ಷರಾಗಿರುವುದು ರಾಜ್ಯದಲ್ಲಿ ಕಾಂಗ್ರೆಸ್‌ಗೆ ಇನ್ನಷ್ಟು ಬಲ ತಂದುಕೊಟ್ಟಿದೆ. ಹಲವು ವರ್ಷಗಳ ಬಳಿಕ ಸುಳ್ಯದಲ್ಲಿ  ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಸುಳ್ಯದ ಮತದಾರರು ಮತ್ತು ಕಾಂಗ್ರೆಸ್ ಕಾರ್ಯಕರ್ತರು  ಮಲ್ಲಿಕಾರ್ಜುನ ಖರ್ಗೆಯವರಿಗೆ ಗೆಲುವಿನ ಉಡುಗೊರೆ ನೀಡಲಿದ್ದಾರೆ. ಆದಕ್ಕಾಗಿ ನಾಯಕರು ಹಾಗೂ ಕಾರ್ಯಕರ್ತರು ಎಲ್ಲಾ ಭಿನ್ನಮತ ಮರೆತು ಸುಳ್ಯ ಕ್ಷೆತ್ರದಾದ್ಯಂತ  ಮತಯಾಚನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ಅವರು ಮನವಿ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ  ಜಿ. ಅವರು ಮಾತನಾಡಿ ಸುಳ್ಯ ಕಾಂಗ್ರೆಸ್‌ನಲ್ಲಿದ್ದ  ಸಣ್ಣಪುಟ್ಟ ಗೊಂದಲಗಳನ್ನು ಪಕ್ಷದ ನಾಯಕರು ಸರಿಪಡಿಸಿದ್ದಾರೆ. ನಾನು ಯುವ ಕಾಂಗ್ರೆಸ್‌ನಿoದಲೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ವರಿಷ್ಠರು ನನ್ನನ್ನು ಅಭ್ಯರ್ಥಿಯನ್ನಾಗಿ ಆರಿಸಿದ್ದಾರೆ. ಬಿಜೆಪಿಯ ಭ್ರಷ್ಟಾಚಾರ, ಜನ ವಿರೋದಿ ಆಡಳಿತ ನೀತಿಗಳಿಂದಾಗಿ ರೋಸಿ ಹೋಗಿರುವ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಸುಳ್ಯದಲ್ಲಿಯೂ ಕಾಂಗ್ರೆಸ್ ಪಕ್ಷ ಅತ್ಯಽಕ ಮತಗಳಿಂದ ಗೆಲುವು ಸಾದಿಸಲಿದೆ ಎಂದರು. ಟಿಕೆಟ್ ಆಕಾಂಕ್ಷಿಯಾಗಿದ್ದ  ನಂದಕುಮಾರ್ ಅವರು ಮಾತನಾಡಿ ನಾನು ಕಳೆದ ಹಲವು ವರ್ಷಗಳಿಂದ ಸುಳ್ಯ ಕ್ಷೆತ್ರದಾದ್ಯಂತ ಓಡಾಟ ನಡೆಸಿ ಜನರ ಒಲವನ್ನು ಗಳಿಸಿದ್ದೆ. ಕಾರ್ಯಕರ್ತರು ಹಾಗೂ ಜನರ ಒತ್ತಾಸೆಯಂತೆ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಕೊನೆಯ ಘಳಿಗೆಯಲ್ಲಿ  ಟಿಕೆಟ್ ಕೃಷ್ಣಪ್ಪ ಅವರ ಪಾಲಾಗಿದೆ. ಆ ಸಮಯದಲ್ಲಿ  ನನಗೆ ಹಾಗೂ ನನ್ನ ಪರವಾಗಿದ್ದ ದೊಡ್ಡ ಸಂಖ್ಯೆ ಕಾರ್ಯಕರ್ತರಿಗೆ ಮನಸ್ಸಿಗೆ ನೋವಾಗಿದ್ದು ನಿಜ. ಇದೀಗ ಪಕ್ಷದ ಉನ್ನತ ನಾಯಕರು ನಮ್ಮ ಜೊತೆ ಮಾತುಕತೆ ನಡೆಸಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುವಂತೆ ಸೂಚಿಸಿದ್ದಾರೆ. ಅವರ ಸೂಚನೆಯಂತೆ ಕಡಬದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದೇವೆ. ನಾವು ಎಲ್ಲಾ  ವೈಮನಸ್ಸುಗಳನ್ನು  ತೊರೆದು ಸುಳ್ಯದಲ್ಲಿ  ಪಕ್ಷದ ಗೆಲುವಿಗಾಗಿ ಶ್ರಮಿಸಲಿದ್ದೇವೆ ಎಂದರು. ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದಿರ್‌ಕುಮಾರ್ ಶೆಟ್ಟಿ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಮಾತನಾಡಿದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಗೌಡ ಬಳ್ಳೇರಿ, ವಿಜಯಕುಮಾರ್ ರೈ ಕರ್ಮಾಯಿ, ರೋಯಿ ಅಬ್ರಹಾಂ, ಪ್ರವೀಣ್‌ಕುಮಾರ್ ಕೆಡೆಂಜಿಗುತ್ತು, ಗೋಗುಲ್‌ದಾಸ್ ಸುಳ್ಯ, ಸೈಮನ್ ಸಿ.ಜೆ. ಕಡಬ, ಸತೀವ್ ನಾÊಕ್ ಮೇಲಿನಮನೆ, ಭವಾನಿಶಂಕರ್ ಕಲ್ಮಡ್ಕ, ಸತೀಶ್ ಶೆಟ್ಟಿ ಬೀರುಕ್ಕು, ಫೈಝಲ್ ಕಡಬ, ಕೆ.ಎಂ.ಹನೀಫ್, ಅಶ್ರಫ್ ಶೇಡಿಗುಂಡಿ, ರಾಮಕೃಷ್ಣ ಹೊಳ್ಳಾರ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments