HomeFresh Newsಚಿಕ್ಕೋಡಿ ಜೈನ ಮುನಿಯ ಹತ್ಯೆ ಪ್ರಕರಣ : ಕಡಬದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕೋಡಿ ಜೈನ ಮುನಿಯ ಹತ್ಯೆ ಪ್ರಕರಣ : ಕಡಬದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕಡಬ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಆಚಾರ್ಯ ಮುನಿಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಿರುವುದು ಖಂಡನೀಯ. ಈ ಹೇಯ ಕೃತ್ಯ ಮಾಡಿದ ಹಂತಕರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿ.ಹಿಂ.ಪ. ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಆಗ್ರಹಿಸಿದರು.

ಅವರು ಕಡಬದ ಮುಖ್ಯ ರಸ್ತೆಯಲ್ಲಿ ಕಡಬ ಪ್ರಖಂಡ ವಿ.ಹಿಂ.ಪ, ಬಜರಂಗದಳ, ಮಾತೃಶಕ್ತಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಮುನಿಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಇಡೀ ಹಿಂದೂ ಹಾಗೂ ಜೈನ ಸಮಾಜಕ್ಕೆ ಆಘಾತವನ್ನು ಉಂಟು ಮಾಡಿದೆ. ಅಹಿಂಸೆ ಮತ್ತು ತ್ಯಾಗದ ಪ್ರತಿಪಾದಕರು ಹಾಗೂ ಶಾಂತಿ ಪ್ರಿಯರು ಆಗಿರುವ ಜೈನ ಮುನಿಗಳ ಅಥಾವ ಯಾರ ಮೇಲೂ ಇಂತಹ ಕೃತ್ಯಗಳು ಮುಂದೆ ನಡೆಯದಂತೆ ರಕ್ಷಣೆ ನೀಡಬೇಕು ಎಂದರು.

kadaba vhp protest

ಈ ಸಂದರ್ಭದಲ್ಲಿ ವಿ.ಹಿಂ.ಪ. ನಗರ ಅಧ್ಯಕ್ಷ ಸತ್ಯನಾರಾಯಣ ಹೆಗ್ಡೆ, ವಿ.ಹಿಂ.ಪ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ವಿ.ಹಿಂ.ಪ ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ, ಪ್ರಮುಖರಾದ ಮೋನಪ್ಪ ಗೌಡ ನಾಡೋಳಿ, ದಯಾನಂದ ಅಡ್ಡೋಳೆ, ವೆಂಕಟ್ರಮಣ ರಾವ್, ಪ್ರಕಾಶ್ ಎನ್.ಕೆ, ಪುಲಸ್ತ್ಯ ರೈ, ಪ್ರಮೀಳಾ ಲೋಕೇಶ್, ಪುಷ್ಪಪ್ರಸಾದ್, ಸತೀಶ್ ನಾಯಕ್, ಸಂದೀಪ್ ಶಿಶಿಲ, ಕರುಣಾಕರ ಶಿಶಿಲ, ಸುರೇಶ್ ದೆಂತಾರು, ರಘುರಾಮ ನಾಯ್ಕ್ ಕುಕ್ಕೆರೆಬೆಟ್ಟು, ಉಮೇಶ್ ಆಚಾರ್ಯ, ರಾಜೇಶ್ ಉದನೆ, ದೇವಿಪ್ರಸಾದ್ ಮರ್ದಾಳ, ಮೇದಪ್ಪ ಗೌಡ ಡೆಪ್ಪುಣಿ, ತುಳಸಿಧರ, ಧನುಷ್, ಬಾಲಕೃಷ್ಣ ಡಿ ಕೋಲ್ಪೆ, ತಿಲಕ್ ರೈ, ಸದಾನಂದ ಬಿರ್ವಾ, ಬಾಲಚಂದ್ರ ಬಜೆತ್ತಡ್ಕ, ಮನೋಜ್ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments